ಜೆಡಿಎಸ್ ರೈತ ಸಾಂತ್ವನ ಯಾತ್ರೆ: ಯಾತ್ರೆಯ ವರದಿಯನ್ನ ಕೇಂದ್ರಕ್ಕೂ ಕಳುಹಿಸಿ ಪರಿಹಾರ ನೀಡುವಂತೆ ಒತ್ತಾಯ ಮಾಡಲಿ- ಸಿಎಂ‌ ಸಿದ್ದರಾಮಯ್ಯ

ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ತಿಳಿಸಿದ್ದಾರೆ.

ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದರು‌.

ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದರು.

Ramesh Babu

Journalist

Recent Posts

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

22 hours ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

2 days ago

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

3 days ago