ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರೈತ ಸಾಂತ್ವನ ಯಾತ್ರೆಯ ನಂತರ ತಮ್ಮ ಅನುಭವವನ್ನು ರಾಜ್ಯ ಸರ್ಕಾರದ ಜೊತೆಯಲ್ಲಿ ಮಾತ್ರವಲ್ಲ ಕೇಂದ್ರ ಸರ್ಕಾರದ ಜೊತೆಯಲ್ಲಿಯೂ ಹಂಚಿಕೊಂಡರೆ ರಾಜ್ಯಕ್ಕೆ ಅನುಕೂಲವಾಗಬಹುದು. ಒಂದು ಪ್ರಾದೇಶಿಕ ಪಕ್ಷದ ಮುಖ್ಯಸ್ಥರಾಗಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬರಪರಿಹಾರದ ವಿಷಯದಲ್ಲಿ ನಿರಂತರವಾಗಿ ಕರ್ನಾಟಕ ರಾಜ್ಯಕ್ಕೆ ಕೆಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ವಿವರ ಖಂಡಿತ ತಿಳಿದಿದೆ ಎಂದು ಭಾವಿಸುವೆ ಎಂದು ತಿಳಿಸಿದ್ದಾರೆ.
ಹೊಸ ಬೆಳವಣಿಗೆಯಲ್ಲಿ ಸನ್ಮಾನ್ಯ ಹೆಚ್.ಡಿ.ಕುಮಾರಸ್ವಾಮಿ ಅವರು ಈಗ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಭಾರತೀಯ ಜನತಾ ಪಕ್ಷದ ಜೊ ತಮ್ಮ ಪಕ್ಷದ ಮೈತ್ರಿಗೆ ಮುಂದಾಗಿದ್ದಾರೆ. ರಾಜ್ಯದ ಬಿಜೆಪಿ ನಾಯಕರನ್ನು ದೂರ ಇಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಕುಟುಂಬದ ಸದಸ್ಯರ ಜೊತೆ ಆತ್ಮೀಯವಾಗಿ ಸಂಬಂಧ ಇಟ್ಟುಕೊಂಡಿದ್ದಾರೆ. ಈ ಸೌಹಾರ್ದ ಸಂಬಂಧವನ್ನು ಬಳಸಿಕೊಂಡು ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸಿ ನ್ಯಾಯ ದೊರಕಿಸಿಕೊಟ್ಟರೆ ಕನ್ನಡಿಗರು ಋಣಿಯಾಗಿರುತ್ತಾರೆ ಎಂದರು.
ರಾಜ್ಯದ 236 ತಾಲೂಕುಗಳ ಪೈಕಿ 216 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಒಟ್ಟು ರೂ.33,710 ಕೋಟಿ ಮೌಲ್ಯದ ಬೆಳೆಹಾನಿಯಾಗಿದೆ. ಕೇಂದ್ರದಿಂದ ರೂ.17,901 ಕೋಟಿ ಪರಿಹಾರಕ್ಕೆ ಮನವಿ ನೀಡಲಾಗಿದೆ. ರಾಜ್ಯಕ್ಕೆ ಕೇಂದ್ರದ ಬರ ಅಧ್ಯಯನ ತಂಡ ಆಗಮಿಸಿದ್ದ ಸಂದರ್ಭದಲ್ಲಿ ಹಸಿರು ಬರವೂ ಸೇರಿದಂತೆ ಬರ ಪರಿಸ್ಥಿತಿಯ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಹೀಗಿದ್ದರೂ ಕೇಂದ್ರ ಸರ್ಕಾರದಿಂದ ಸಕಾರಾತ್ಮಕ ಸ್ಪಂದನೆಯೂ ಇಲ್ಲ, ಅನುದಾನವೂ ಇಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.
ಬರಪರಿಹಾರಕ್ಕಾಗಿ ಪ್ರಧಾನಮಂತ್ರಿ ಅವರಿಗೆ ಮನವಿ ಮಾಡಲು ನಮ್ಮ ಸರ್ಕಾರ ಸರ್ವಪಕ್ಷಗಳ ನಿಯೋಗವನ್ನು ಕರೆದೊಯ್ಯಲು ಸಿದ್ಧ ಇದೆ. ತಮ್ಮದೇ ಪಕ್ಷಕ್ಕೆ ಸೇರಿರುವ ಪ್ರಧಾನಮಂತ್ರಿಯವರನ್ನು ಭೇಟಿ ಮಾಡುವ ಧೈರ್ಯ ರಾಜ್ಯದ ಬಿಜೆಪಿ ನಾಯಕರಲ್ಲಿ ಇಲ್ಲ, ಕೇಂದ್ರದ ಬಿಜೆಪಿ ನಾಯಕರು ಕೂಡಾ ರಾಜ್ಯದ ಬಿಜೆಪಿ ನಾಯಕರನ್ನು ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ಈ ವಿಷಯದಲ್ಲಿ ಸನ್ಮಾನ್ಯ ಹೆಚ್.ಡಿ.ದೇವೇಗೌಡರು ಮತ್ತು ಅವರ ಪಕ್ಷ ಹೆಚ್ಚಿನ ಮುತುವರ್ಜಿ ವಹಿಸಿದರೆ ಇದು ಸಾಧ್ಯವಾಗಬಹುದು ಎಂದರು.
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…
ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…
ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…
ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…