ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟದಲ್ಲಿನ ಜಯಮಂಗಲಿ ನದಿ ಉಗಮ ಸ್ಥಾನದ ಸುತ್ತಮುತ್ತ ಒಂದೂವರೆ ವರ್ಷಗಳ ಹಿಂದೆ ಪ್ರಾರಂಭವಾದ ಸಂಶೋಧನೆಯ ಫಲವಾಗಿ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆಹೊಲ ಜಾಗದಿಂದ ಸಂಗ್ರಹಿಸಲಾಗಿದ್ದ ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆಯಾಗಿದೆ ಎಂದು ಸಂಶೋಧನ ತಂಡದಲ್ಲಿನ ಜೇಡ ತಜ್ಞ ವೈ.ಟಿ.ಲೋಹಿತ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಹೊಸ ಜೀನಸ್ ವರ್ಗಕ್ಕೆ ಸೇರಿರುವ ಜೇಡಕ್ಕೆ ಸ್ಥಳೀಯ ಹೆಸರಿನಿಂದಲೇ ಕೆರೆಯಬೇಕು ಎನ್ನುವ ಉದ್ದೇಶದೊಂದಿಗೆ ‘ತೆಂಕಣ ಜಯಮಂಗಲಿ’ ಎಂದು ಹೆಸರಿಸಲಾಗಿದೆ. ಎಷ್ಟೋ ಕೀಟ ಜೇಡಗಳಂತ ಜೀವಿಗಳ ಹೆಸರು ಆಂಗ್ಲ, ಲ್ಯಾಟಿನ್ ಮಯವಾಗಿದ್ದು, ಹೆಸರುಗಳನ್ನು ಉಚ್ಚರಿಸಲು ಹಾಗೂ ನೆನಪಿಡಲು ಕಷ್ಟ. ಈ ಕಾರಣದಿಂದಾಗಿ ನಾನು ಪತ್ತೆ ಮಾಡಿರುವ ಜೇಡವನ್ನು ತೆಂಕಣ ಜಯಮಂಗಲಿ ಎನ್ನುವ ಹೆಸರಿನಿಂದಲೆ ಪರಿಚಯಿಸಿದ್ದೇವೆ ಎಂದರು.
ತೆಂಕಣ ಜಯಮಂಗಲಿ ಜೇಡವು ಸಹ ಹೊಸದಾದ ಕಾರಣ ವಿಜ್ಞಾನಿಗಳಾದ ಜಾನ್ ಕೆಲಬ್, ಕಿರಣ್ ಮರಾಟೆ, ಕೃಷ್ಣಮೇಘ ಕುಂಟೆ ಮತ್ತು ಕೆನಡಾದ ವೈನೆಮ್ಯಾಡಿಸನ್ ಈ ಸಂಶೋಧನೆಯಲ್ಲಿ ಕೈ ಜೋಡಿಸಿದ್ದಾರೆ. ಎನ್.ಸಿ.ಬಿ.ಎಸ್ ಮತ್ತು ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ ಲ್ಯಾಬ್ಗಳೊಂದಿಗಿನ ಸಹಯೋಗದಲ್ಲಿ ಇದನ್ನು ಹೊರ ಪ್ರಪಂಚಕ್ಕೆ ಪರಿಚಸಿದ್ದೇವೆ. ನಮ್ಮ ತಂಡದಲ್ಲಿನ ಬಿ.ಜಿ.ನಿಶಾ,ಚಿನ್ಮಯ್ ಸಿ.ಮಳಿಯೆ ಇವರೆಲ್ಲರ ಪರಿಶ್ರಮದೊಂದಿಗೆ ಅಂತರ ರಾಷ್ಟ್ರೀಯ ನಿಯತಕಾಲಿಕೆ ಜೊಕೇಸ್ (Zookeys) ನಲ್ಲಿ ನಮ್ಮ ಸಂಶೋಧನ ಬರಹವನ್ನು ಇದೇ ಅಕ್ಟೋಬರ್ 11 ರಂದು ಪ್ರಕಟಿಸಲಾಗಿದೆ.
ದೇವರಾಯನದುರ್ಗದ ಕಾಡು, ಬೆಟ್ಟ, ನದಿ, ಜಲಮೂಲಗಳು ಜೀವವೈವಿಧ್ಯತೆಯನ್ನು ಪೋಶಿಸುತ್ತ ಸುತ್ತಲಿನ ನಗರ ಹಳ್ಳಿಗಳನ್ನು ಕಾಪಾಡುತ್ತಾ ಬಂದಿವೆ. ಈ ಹೊಸ ಜೇಡದಂತೆ ವಿಜ್ಞಾನಕ್ಕೆ ಪರಿಚಯವಿಲ್ಲದ ಇನ್ನೂ ಅನೇಕ ಜೀವಿಗಳು ಈ ಬೆಟ್ಟದ ಸುತ್ತಮುತ್ತ ಇವೆ. ದೇವರಾಯನದುರ್ಗವನ್ನು ಪುಣ್ಯಕ್ಷೇತ್ರ ಅಥವಾ ಪ್ರವಾಸಿ ತಾಣವಾಗಿಯಷ್ಟೇ ನೋಡದೆ ಜೀವವೈವಿಧ್ಯತೆಯ ತಾಣವಾಗಿಯು ಗುರುತಿಸುವ ಮೂಲಕ ಈ ಪ್ರದೇಶವನ್ನು ಸಂರಕ್ಷಿಸಬೇಕಿದೆ ಎನ್ನುತ್ತಾರೆ ವೈ.ಟಿ.ಲೋಹಿತ್.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…