ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟದಲ್ಲಿನ ಜಯಮಂಗಲಿ ನದಿ ಉಗಮ ಸ್ಥಾನದ ಸುತ್ತಮುತ್ತ ಒಂದೂವರೆ ವರ್ಷಗಳ ಹಿಂದೆ ಪ್ರಾರಂಭವಾದ ಸಂಶೋಧನೆಯ ಫಲವಾಗಿ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆಹೊಲ ಜಾಗದಿಂದ ಸಂಗ್ರಹಿಸಲಾಗಿದ್ದ ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆಯಾಗಿದೆ ಎಂದು ಸಂಶೋಧನ ತಂಡದಲ್ಲಿನ ಜೇಡ ತಜ್ಞ ವೈ.ಟಿ.ಲೋಹಿತ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಹೊಸ ಜೀನಸ್ ವರ್ಗಕ್ಕೆ ಸೇರಿರುವ ಜೇಡಕ್ಕೆ ಸ್ಥಳೀಯ ಹೆಸರಿನಿಂದಲೇ ಕೆರೆಯಬೇಕು ಎನ್ನುವ ಉದ್ದೇಶದೊಂದಿಗೆ ‘ತೆಂಕಣ ಜಯಮಂಗಲಿ’ ಎಂದು ಹೆಸರಿಸಲಾಗಿದೆ. ಎಷ್ಟೋ ಕೀಟ ಜೇಡಗಳಂತ ಜೀವಿಗಳ ಹೆಸರು ಆಂಗ್ಲ, ಲ್ಯಾಟಿನ್ ಮಯವಾಗಿದ್ದು, ಹೆಸರುಗಳನ್ನು ಉಚ್ಚರಿಸಲು ಹಾಗೂ ನೆನಪಿಡಲು ಕಷ್ಟ. ಈ ಕಾರಣದಿಂದಾಗಿ ನಾನು ಪತ್ತೆ ಮಾಡಿರುವ ಜೇಡವನ್ನು ತೆಂಕಣ ಜಯಮಂಗಲಿ ಎನ್ನುವ ಹೆಸರಿನಿಂದಲೆ ಪರಿಚಯಿಸಿದ್ದೇವೆ ಎಂದರು.
ತೆಂಕಣ ಜಯಮಂಗಲಿ ಜೇಡವು ಸಹ ಹೊಸದಾದ ಕಾರಣ ವಿಜ್ಞಾನಿಗಳಾದ ಜಾನ್ ಕೆಲಬ್, ಕಿರಣ್ ಮರಾಟೆ, ಕೃಷ್ಣಮೇಘ ಕುಂಟೆ ಮತ್ತು ಕೆನಡಾದ ವೈನೆಮ್ಯಾಡಿಸನ್ ಈ ಸಂಶೋಧನೆಯಲ್ಲಿ ಕೈ ಜೋಡಿಸಿದ್ದಾರೆ. ಎನ್.ಸಿ.ಬಿ.ಎಸ್ ಮತ್ತು ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ ಲ್ಯಾಬ್ಗಳೊಂದಿಗಿನ ಸಹಯೋಗದಲ್ಲಿ ಇದನ್ನು ಹೊರ ಪ್ರಪಂಚಕ್ಕೆ ಪರಿಚಸಿದ್ದೇವೆ. ನಮ್ಮ ತಂಡದಲ್ಲಿನ ಬಿ.ಜಿ.ನಿಶಾ,ಚಿನ್ಮಯ್ ಸಿ.ಮಳಿಯೆ ಇವರೆಲ್ಲರ ಪರಿಶ್ರಮದೊಂದಿಗೆ ಅಂತರ ರಾಷ್ಟ್ರೀಯ ನಿಯತಕಾಲಿಕೆ ಜೊಕೇಸ್ (Zookeys) ನಲ್ಲಿ ನಮ್ಮ ಸಂಶೋಧನ ಬರಹವನ್ನು ಇದೇ ಅಕ್ಟೋಬರ್ 11 ರಂದು ಪ್ರಕಟಿಸಲಾಗಿದೆ.
ದೇವರಾಯನದುರ್ಗದ ಕಾಡು, ಬೆಟ್ಟ, ನದಿ, ಜಲಮೂಲಗಳು ಜೀವವೈವಿಧ್ಯತೆಯನ್ನು ಪೋಶಿಸುತ್ತ ಸುತ್ತಲಿನ ನಗರ ಹಳ್ಳಿಗಳನ್ನು ಕಾಪಾಡುತ್ತಾ ಬಂದಿವೆ. ಈ ಹೊಸ ಜೇಡದಂತೆ ವಿಜ್ಞಾನಕ್ಕೆ ಪರಿಚಯವಿಲ್ಲದ ಇನ್ನೂ ಅನೇಕ ಜೀವಿಗಳು ಈ ಬೆಟ್ಟದ ಸುತ್ತಮುತ್ತ ಇವೆ. ದೇವರಾಯನದುರ್ಗವನ್ನು ಪುಣ್ಯಕ್ಷೇತ್ರ ಅಥವಾ ಪ್ರವಾಸಿ ತಾಣವಾಗಿಯಷ್ಟೇ ನೋಡದೆ ಜೀವವೈವಿಧ್ಯತೆಯ ತಾಣವಾಗಿಯು ಗುರುತಿಸುವ ಮೂಲಕ ಈ ಪ್ರದೇಶವನ್ನು ಸಂರಕ್ಷಿಸಬೇಕಿದೆ ಎನ್ನುತ್ತಾರೆ ವೈ.ಟಿ.ಲೋಹಿತ್.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…