Categories: ಪರಿಸರ

ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆ: ‘ತೆಂಕಣ ಜಯಮಂಗಲಿ’ ಎಂದು ಹೆಸರಿಟ್ಟ ಸಂಶೋಧಕರು

ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟದಲ್ಲಿನ ಜಯಮಂಗಲಿ ನದಿ ಉಗಮ ಸ್ಥಾನದ ಸುತ್ತಮುತ್ತ ಒಂದೂವರೆ ವರ್ಷಗಳ ಹಿಂದೆ ಪ್ರಾರಂಭವಾದ ಸಂಶೋಧನೆಯ ಫಲವಾಗಿ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆಹೊಲ ಜಾಗದಿಂದ ಸಂಗ್ರಹಿಸಲಾಗಿದ್ದ ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆಯಾಗಿದೆ ಎಂದು ಸಂಶೋಧನ ತಂಡದಲ್ಲಿನ ಜೇಡ ತಜ್ಞ ವೈ.ಟಿ.ಲೋಹಿತ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಹೊಸ ಜೀನಸ್ ವರ್ಗಕ್ಕೆ ಸೇರಿರುವ ಜೇಡಕ್ಕೆ ಸ್ಥಳೀಯ ಹೆಸರಿನಿಂದಲೇ ಕೆರೆಯಬೇಕು ಎನ್ನುವ ಉದ್ದೇಶದೊಂದಿಗೆ ‘ತೆಂಕಣ ಜಯಮಂಗಲಿ’ ಎಂದು ಹೆಸರಿಸಲಾಗಿದೆ. ಎಷ್ಟೋ ಕೀಟ ಜೇಡಗಳಂತ ಜೀವಿಗಳ ಹೆಸರು ಆಂಗ್ಲ, ಲ್ಯಾಟಿನ್ ಮಯವಾಗಿದ್ದು, ಹೆಸರುಗಳನ್ನು ಉಚ್ಚರಿಸಲು ಹಾಗೂ ನೆನಪಿಡಲು ಕಷ್ಟ. ಈ ಕಾರಣದಿಂದಾಗಿ ನಾನು ಪತ್ತೆ ಮಾಡಿರುವ ಜೇಡವನ್ನು ತೆಂಕಣ ಜಯಮಂಗಲಿ ಎನ್ನುವ ಹೆಸರಿನಿಂದಲೆ ಪರಿಚಯಿಸಿದ್ದೇವೆ ಎಂದರು.

ತೆಂಕಣ ಜಯಮಂಗಲಿ ಜೇಡವು ಸಹ ಹೊಸದಾದ ಕಾರಣ ವಿಜ್ಞಾನಿಗಳಾದ ಜಾನ್ ಕೆಲಬ್, ಕಿರಣ್ ಮರಾಟೆ, ಕೃಷ್ಣಮೇಘ ಕುಂಟೆ ಮತ್ತು ಕೆನಡಾದ ವೈನೆಮ್ಯಾಡಿಸನ್ ಈ ಸಂಶೋಧನೆಯಲ್ಲಿ ಕೈ ಜೋಡಿಸಿದ್ದಾರೆ. ಎನ್.ಸಿ.ಬಿ.ಎಸ್ ಮತ್ತು ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ ಲ್ಯಾಬ್ಗಳೊಂದಿಗಿನ ಸಹಯೋಗದಲ್ಲಿ ಇದನ್ನು ಹೊರ ಪ್ರಪಂಚಕ್ಕೆ ಪರಿಚಸಿದ್ದೇವೆ. ನಮ್ಮ ತಂಡದಲ್ಲಿನ ಬಿ.ಜಿ.ನಿಶಾ,ಚಿನ್ಮಯ್ ಸಿ.ಮಳಿಯೆ ಇವರೆಲ್ಲರ ಪರಿಶ್ರಮದೊಂದಿಗೆ ಅಂತರ ರಾಷ್ಟ್ರೀಯ ನಿಯತಕಾಲಿಕೆ ಜೊಕೇಸ್ (Zookeys) ನಲ್ಲಿ ನಮ್ಮ ಸಂಶೋಧನ ಬರಹವನ್ನು ಇದೇ ಅಕ್ಟೋಬರ್ 11 ರಂದು ಪ್ರಕಟಿಸಲಾಗಿದೆ.

ಈಗಾಗಲೇ ಪತ್ತೆ ಮಾಡಲಾಗಿರುವ ಜೇಡಗಳ ವಂಶವಾಹಿನಿ(ಡಿಎನ್ಎ)ಗಳೊಂದಿಗೆ ಪ್ರಯೋಗಾಲಯದಲ್ಲಿ ಹೋಲಿಕೆ ಮಾಡಿ ನೋಡಲಾಗಿದೆ. ಆದರೆ ಈಗ ಇರುವ ಜೇಡಗಳ ‘ಡಿಎನ್ಎ’ ಯೊಂದಿಗೆ ಇದು ಹೊಂದಾಣಿಕೆಯಾಗಿಲ್ಲ. ಹಾಗೆಯೇ ಈ ಜೇಡದ ಮೈ ಮೇಲಿನ ಬಣ್ಣ, ದೇಹದ ವಿನ್ಯಾಸದ ಮಾದರಿಯು ಭಿನ್ನವಾಗಿದೆ. ಹೀಗೆ ಇತರೆ ಹೋಲಿಕೆಗಳ ಆಧಾರದ ಮೇಲೂ ಸಹ ಇದನ್ನು ಹೊಸ ಪ್ರಬೇಧದ ಜೇಡ ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಈ ಕುರಿತ ಸಂಶೋಧನ ಬರಹವನ್ನು ಅಂತರ ರಾಷ್ಟ್ರೀಯ ಜರ್ನಲ್ನಲ್ಲಿ ಪ್ರಕಟಿಸಲಾಗಿದೆ. ವಿಶ್ವದ ಇತರೆ ಭಾಗದ ವಿಜ್ಞಾನಿಗಳಿಂದ ಬರುವ ಸಲಹೆ,ಉತ್ತರಗಳ ನಂತರ ‘ತೆಂಕಣ ಜಯಮಂಗಲಿ’ ಜೇಡ ಹೇಗೆ ಭಿನ್ನ ಅನ್ನುವುದು ಮತ್ತಷ್ಟು ನಿಖರವಾಗಲಿದೆ.

ದೇವರಾಯನದುರ್ಗದ ಕಾಡು, ಬೆಟ್ಟ, ನದಿ, ಜಲಮೂಲಗಳು ಜೀವವೈವಿಧ್ಯತೆಯನ್ನು ಪೋಶಿಸುತ್ತ ಸುತ್ತಲಿನ ನಗರ ಹಳ್ಳಿಗಳನ್ನು ಕಾಪಾಡುತ್ತಾ ಬಂದಿವೆ. ಈ ಹೊಸ ಜೇಡದಂತೆ ವಿಜ್ಞಾನಕ್ಕೆ ಪರಿಚಯವಿಲ್ಲದ ಇನ್ನೂ ಅನೇಕ ಜೀವಿಗಳು ಈ ಬೆಟ್ಟದ ಸುತ್ತಮುತ್ತ ಇವೆ. ದೇವರಾಯನದುರ್ಗವನ್ನು ಪುಣ್ಯಕ್ಷೇತ್ರ ಅಥವಾ ಪ್ರವಾಸಿ ತಾಣವಾಗಿಯಷ್ಟೇ ನೋಡದೆ ಜೀವವೈವಿಧ್ಯತೆಯ ತಾಣವಾಗಿಯು ಗುರುತಿಸುವ ಮೂಲಕ ಈ ಪ್ರದೇಶವನ್ನು ಸಂರಕ್ಷಿಸಬೇಕಿದೆ ಎನ್ನುತ್ತಾರೆ ವೈ.ಟಿ.ಲೋಹಿತ್.

Ramesh Babu

Journalist

Recent Posts

ವರದಕ್ಷಿಣೆ ಭೂತಕ್ಕೆ ಬಲಿಯಾದ ವಿವಾಹಿತೆ; ಮದುವೆಯಾದ ಎರಡೇ ವರ್ಷಕ್ಕೆ ಮಸಣದ ಪಾಲು

ಬೆಂಗಳೂರು ನಗರದ ಯಡಿಯೂರು ಕೆರೆ ಸಮೀಪದ ನಿವಾಸಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ.…

13 minutes ago

ಆಸ್ತಿ ವ್ಯಾಮೋಹಕ್ಕೆ ಹೆತ್ತ ತಾಯಿಯ ಕೊಲೆ: ಕಲ್ಲು ಎತ್ತಿ ಹಾಕಿ ಕೊಂದ ಮಗ.!

ರಾಯಚೂರು: ಆಸ್ತಿ ಮೇಲಿನ ವ್ಯಾಮೋಹಕ್ಕೆ ಹೆತ್ತ ತಾಯಿಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಂದ ಹೃದಯವಿದ್ರಾವಕ ಘಟನೆ ರಾಯಚೂರು…

19 minutes ago

ಚೀಲದಲ್ಲಿ ಯುವತಿಯ ಶಿರವಿಲ್ಲದ ದೇಹ ಪತ್ತೆ; ಸಹೋದ್ಯೋಗಿ ಅರೆಸ್ಟ್….! ಏಕೆ ಗೊತ್ತಾ….?

ಆಗ್ರಾ: ಆಗ್ರಾದಲ್ಲಿ ಚೀಲದಲ್ಲಿ ಯುವತಿಯ ಶಿರರಹಿತ ಶವ ಪತ್ತೆಯಾದ ಪ್ರಕರಣದಲ್ಲಿ ಯುವಕನೊಬ್ಬನನ್ನು ಬಂಧಿಸಲಾಗಿದೆ. ಆಗ್ರಾದ ಪಾರ್ವತಿ ವಿಹಾರ್‌ನಲ್ಲಿ ಜನವರಿ 24…

2 hours ago

ಪಿಟಿಸಿಎಲ್ ಕಾಯ್ದೆ ವಿರುದ್ದ ತೀರ್ಪು ನೀಡಿದವರ ಮೇಲೆ ಕ್ರಮಕ್ಕೆ ಒತ್ತಾಯ

ಕೋಲಾರ: ರಾಜ್ಯ ಸರ್ಕಾರ 2023ರ ಪಿಟಿಸಿಎಲ್ ತಿದ್ದುಪಡಿ ಕಾಯ್ದೆಯ ವಿರುದ್ಧವಾಗಿ ಕಂದಾಯ ಇಲಾಖೆ, ನ್ಯಾಯಾಲಯಗಳು, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟಿನಲ್ಲಿ…

3 hours ago

ಸಾಲದ ಸುಳಿಗಿಂತಲೂ ಕಿರುಕುಳವೇ ಮಾರಕ…

ಒಂದು ಸುಂದರ ಸಂಸಾರ ಸಾಲದ ಸುಳಿಗೆ ಸಿಲುಕುವುದು ಎಂದರೆ ಅದು ಕೇವಲ ಆರ್ಥಿಕ ಬಿಕ್ಕಟ್ಟಲ್ಲ; ಅದು ಆ ಮನೆಯ ನೆಮ್ಮದಿಯ…

7 hours ago

ಅಕ್ರಮ ಸಂಬಂಧ.. ಪ್ರಿಯತಮೆಯನ್ನ ಬ*ರ್ಬರವಾಗಿ ಕೊಂ*ದು ನೇ*ಣಿಗೆ ಶರಣಾದ ಪ್ರಿಯಕರ.!

ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದು*ರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.…

7 hours ago