Categories: ಪರಿಸರ

ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆ: ‘ತೆಂಕಣ ಜಯಮಂಗಲಿ’ ಎಂದು ಹೆಸರಿಟ್ಟ ಸಂಶೋಧಕರು

ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟದಲ್ಲಿನ ಜಯಮಂಗಲಿ ನದಿ ಉಗಮ ಸ್ಥಾನದ ಸುತ್ತಮುತ್ತ ಒಂದೂವರೆ ವರ್ಷಗಳ ಹಿಂದೆ ಪ್ರಾರಂಭವಾದ ಸಂಶೋಧನೆಯ ಫಲವಾಗಿ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆಹೊಲ ಜಾಗದಿಂದ ಸಂಗ್ರಹಿಸಲಾಗಿದ್ದ ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆಯಾಗಿದೆ ಎಂದು ಸಂಶೋಧನ ತಂಡದಲ್ಲಿನ ಜೇಡ ತಜ್ಞ ವೈ.ಟಿ.ಲೋಹಿತ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಹೊಸ ಜೀನಸ್ ವರ್ಗಕ್ಕೆ ಸೇರಿರುವ ಜೇಡಕ್ಕೆ ಸ್ಥಳೀಯ ಹೆಸರಿನಿಂದಲೇ ಕೆರೆಯಬೇಕು ಎನ್ನುವ ಉದ್ದೇಶದೊಂದಿಗೆ ‘ತೆಂಕಣ ಜಯಮಂಗಲಿ’ ಎಂದು ಹೆಸರಿಸಲಾಗಿದೆ. ಎಷ್ಟೋ ಕೀಟ ಜೇಡಗಳಂತ ಜೀವಿಗಳ ಹೆಸರು ಆಂಗ್ಲ, ಲ್ಯಾಟಿನ್ ಮಯವಾಗಿದ್ದು, ಹೆಸರುಗಳನ್ನು ಉಚ್ಚರಿಸಲು ಹಾಗೂ ನೆನಪಿಡಲು ಕಷ್ಟ. ಈ ಕಾರಣದಿಂದಾಗಿ ನಾನು ಪತ್ತೆ ಮಾಡಿರುವ ಜೇಡವನ್ನು ತೆಂಕಣ ಜಯಮಂಗಲಿ ಎನ್ನುವ ಹೆಸರಿನಿಂದಲೆ ಪರಿಚಯಿಸಿದ್ದೇವೆ ಎಂದರು.

ತೆಂಕಣ ಜಯಮಂಗಲಿ ಜೇಡವು ಸಹ ಹೊಸದಾದ ಕಾರಣ ವಿಜ್ಞಾನಿಗಳಾದ ಜಾನ್ ಕೆಲಬ್, ಕಿರಣ್ ಮರಾಟೆ, ಕೃಷ್ಣಮೇಘ ಕುಂಟೆ ಮತ್ತು ಕೆನಡಾದ ವೈನೆಮ್ಯಾಡಿಸನ್ ಈ ಸಂಶೋಧನೆಯಲ್ಲಿ ಕೈ ಜೋಡಿಸಿದ್ದಾರೆ. ಎನ್.ಸಿ.ಬಿ.ಎಸ್ ಮತ್ತು ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ ಲ್ಯಾಬ್ಗಳೊಂದಿಗಿನ ಸಹಯೋಗದಲ್ಲಿ ಇದನ್ನು ಹೊರ ಪ್ರಪಂಚಕ್ಕೆ ಪರಿಚಸಿದ್ದೇವೆ. ನಮ್ಮ ತಂಡದಲ್ಲಿನ ಬಿ.ಜಿ.ನಿಶಾ,ಚಿನ್ಮಯ್ ಸಿ.ಮಳಿಯೆ ಇವರೆಲ್ಲರ ಪರಿಶ್ರಮದೊಂದಿಗೆ ಅಂತರ ರಾಷ್ಟ್ರೀಯ ನಿಯತಕಾಲಿಕೆ ಜೊಕೇಸ್ (Zookeys) ನಲ್ಲಿ ನಮ್ಮ ಸಂಶೋಧನ ಬರಹವನ್ನು ಇದೇ ಅಕ್ಟೋಬರ್ 11 ರಂದು ಪ್ರಕಟಿಸಲಾಗಿದೆ.

ಈಗಾಗಲೇ ಪತ್ತೆ ಮಾಡಲಾಗಿರುವ ಜೇಡಗಳ ವಂಶವಾಹಿನಿ(ಡಿಎನ್ಎ)ಗಳೊಂದಿಗೆ ಪ್ರಯೋಗಾಲಯದಲ್ಲಿ ಹೋಲಿಕೆ ಮಾಡಿ ನೋಡಲಾಗಿದೆ. ಆದರೆ ಈಗ ಇರುವ ಜೇಡಗಳ ‘ಡಿಎನ್ಎ’ ಯೊಂದಿಗೆ ಇದು ಹೊಂದಾಣಿಕೆಯಾಗಿಲ್ಲ. ಹಾಗೆಯೇ ಈ ಜೇಡದ ಮೈ ಮೇಲಿನ ಬಣ್ಣ, ದೇಹದ ವಿನ್ಯಾಸದ ಮಾದರಿಯು ಭಿನ್ನವಾಗಿದೆ. ಹೀಗೆ ಇತರೆ ಹೋಲಿಕೆಗಳ ಆಧಾರದ ಮೇಲೂ ಸಹ ಇದನ್ನು ಹೊಸ ಪ್ರಬೇಧದ ಜೇಡ ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಈ ಕುರಿತ ಸಂಶೋಧನ ಬರಹವನ್ನು ಅಂತರ ರಾಷ್ಟ್ರೀಯ ಜರ್ನಲ್ನಲ್ಲಿ ಪ್ರಕಟಿಸಲಾಗಿದೆ. ವಿಶ್ವದ ಇತರೆ ಭಾಗದ ವಿಜ್ಞಾನಿಗಳಿಂದ ಬರುವ ಸಲಹೆ,ಉತ್ತರಗಳ ನಂತರ ‘ತೆಂಕಣ ಜಯಮಂಗಲಿ’ ಜೇಡ ಹೇಗೆ ಭಿನ್ನ ಅನ್ನುವುದು ಮತ್ತಷ್ಟು ನಿಖರವಾಗಲಿದೆ.

ದೇವರಾಯನದುರ್ಗದ ಕಾಡು, ಬೆಟ್ಟ, ನದಿ, ಜಲಮೂಲಗಳು ಜೀವವೈವಿಧ್ಯತೆಯನ್ನು ಪೋಶಿಸುತ್ತ ಸುತ್ತಲಿನ ನಗರ ಹಳ್ಳಿಗಳನ್ನು ಕಾಪಾಡುತ್ತಾ ಬಂದಿವೆ. ಈ ಹೊಸ ಜೇಡದಂತೆ ವಿಜ್ಞಾನಕ್ಕೆ ಪರಿಚಯವಿಲ್ಲದ ಇನ್ನೂ ಅನೇಕ ಜೀವಿಗಳು ಈ ಬೆಟ್ಟದ ಸುತ್ತಮುತ್ತ ಇವೆ. ದೇವರಾಯನದುರ್ಗವನ್ನು ಪುಣ್ಯಕ್ಷೇತ್ರ ಅಥವಾ ಪ್ರವಾಸಿ ತಾಣವಾಗಿಯಷ್ಟೇ ನೋಡದೆ ಜೀವವೈವಿಧ್ಯತೆಯ ತಾಣವಾಗಿಯು ಗುರುತಿಸುವ ಮೂಲಕ ಈ ಪ್ರದೇಶವನ್ನು ಸಂರಕ್ಷಿಸಬೇಕಿದೆ ಎನ್ನುತ್ತಾರೆ ವೈ.ಟಿ.ಲೋಹಿತ್.

Ramesh Babu

Journalist

Recent Posts

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

14 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

20 hours ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago

ಗಾನಕೋಗಿಲೆ ಎಸ್. ಜಾನಕಿ ನಿಧನ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರು ಶನಿವಾರ ಮೈಸೂರಿನ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು.…

3 days ago