ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟದಲ್ಲಿನ ಜಯಮಂಗಲಿ ನದಿ ಉಗಮ ಸ್ಥಾನದ ಸುತ್ತಮುತ್ತ ಒಂದೂವರೆ ವರ್ಷಗಳ ಹಿಂದೆ ಪ್ರಾರಂಭವಾದ ಸಂಶೋಧನೆಯ ಫಲವಾಗಿ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆಹೊಲ ಜಾಗದಿಂದ ಸಂಗ್ರಹಿಸಲಾಗಿದ್ದ ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆಯಾಗಿದೆ ಎಂದು ಸಂಶೋಧನ ತಂಡದಲ್ಲಿನ ಜೇಡ ತಜ್ಞ ವೈ.ಟಿ.ಲೋಹಿತ್ ತಿಳಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಅವರು, ಹೊಸ ಜೀನಸ್ ವರ್ಗಕ್ಕೆ ಸೇರಿರುವ ಜೇಡಕ್ಕೆ ಸ್ಥಳೀಯ ಹೆಸರಿನಿಂದಲೇ ಕೆರೆಯಬೇಕು ಎನ್ನುವ ಉದ್ದೇಶದೊಂದಿಗೆ ‘ತೆಂಕಣ ಜಯಮಂಗಲಿ’ ಎಂದು ಹೆಸರಿಸಲಾಗಿದೆ. ಎಷ್ಟೋ ಕೀಟ ಜೇಡಗಳಂತ ಜೀವಿಗಳ ಹೆಸರು ಆಂಗ್ಲ, ಲ್ಯಾಟಿನ್ ಮಯವಾಗಿದ್ದು, ಹೆಸರುಗಳನ್ನು ಉಚ್ಚರಿಸಲು ಹಾಗೂ ನೆನಪಿಡಲು ಕಷ್ಟ. ಈ ಕಾರಣದಿಂದಾಗಿ ನಾನು ಪತ್ತೆ ಮಾಡಿರುವ ಜೇಡವನ್ನು ತೆಂಕಣ ಜಯಮಂಗಲಿ ಎನ್ನುವ ಹೆಸರಿನಿಂದಲೆ ಪರಿಚಯಿಸಿದ್ದೇವೆ ಎಂದರು.
ತೆಂಕಣ ಜಯಮಂಗಲಿ ಜೇಡವು ಸಹ ಹೊಸದಾದ ಕಾರಣ ವಿಜ್ಞಾನಿಗಳಾದ ಜಾನ್ ಕೆಲಬ್, ಕಿರಣ್ ಮರಾಟೆ, ಕೃಷ್ಣಮೇಘ ಕುಂಟೆ ಮತ್ತು ಕೆನಡಾದ ವೈನೆಮ್ಯಾಡಿಸನ್ ಈ ಸಂಶೋಧನೆಯಲ್ಲಿ ಕೈ ಜೋಡಿಸಿದ್ದಾರೆ. ಎನ್.ಸಿ.ಬಿ.ಎಸ್ ಮತ್ತು ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ ಲ್ಯಾಬ್ಗಳೊಂದಿಗಿನ ಸಹಯೋಗದಲ್ಲಿ ಇದನ್ನು ಹೊರ ಪ್ರಪಂಚಕ್ಕೆ ಪರಿಚಸಿದ್ದೇವೆ. ನಮ್ಮ ತಂಡದಲ್ಲಿನ ಬಿ.ಜಿ.ನಿಶಾ,ಚಿನ್ಮಯ್ ಸಿ.ಮಳಿಯೆ ಇವರೆಲ್ಲರ ಪರಿಶ್ರಮದೊಂದಿಗೆ ಅಂತರ ರಾಷ್ಟ್ರೀಯ ನಿಯತಕಾಲಿಕೆ ಜೊಕೇಸ್ (Zookeys) ನಲ್ಲಿ ನಮ್ಮ ಸಂಶೋಧನ ಬರಹವನ್ನು ಇದೇ ಅಕ್ಟೋಬರ್ 11 ರಂದು ಪ್ರಕಟಿಸಲಾಗಿದೆ.
ದೇವರಾಯನದುರ್ಗದ ಕಾಡು, ಬೆಟ್ಟ, ನದಿ, ಜಲಮೂಲಗಳು ಜೀವವೈವಿಧ್ಯತೆಯನ್ನು ಪೋಶಿಸುತ್ತ ಸುತ್ತಲಿನ ನಗರ ಹಳ್ಳಿಗಳನ್ನು ಕಾಪಾಡುತ್ತಾ ಬಂದಿವೆ. ಈ ಹೊಸ ಜೇಡದಂತೆ ವಿಜ್ಞಾನಕ್ಕೆ ಪರಿಚಯವಿಲ್ಲದ ಇನ್ನೂ ಅನೇಕ ಜೀವಿಗಳು ಈ ಬೆಟ್ಟದ ಸುತ್ತಮುತ್ತ ಇವೆ. ದೇವರಾಯನದುರ್ಗವನ್ನು ಪುಣ್ಯಕ್ಷೇತ್ರ ಅಥವಾ ಪ್ರವಾಸಿ ತಾಣವಾಗಿಯಷ್ಟೇ ನೋಡದೆ ಜೀವವೈವಿಧ್ಯತೆಯ ತಾಣವಾಗಿಯು ಗುರುತಿಸುವ ಮೂಲಕ ಈ ಪ್ರದೇಶವನ್ನು ಸಂರಕ್ಷಿಸಬೇಕಿದೆ ಎನ್ನುತ್ತಾರೆ ವೈ.ಟಿ.ಲೋಹಿತ್.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…