Categories: ಪರಿಸರ

ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆ: ‘ತೆಂಕಣ ಜಯಮಂಗಲಿ’ ಎಂದು ಹೆಸರಿಟ್ಟ ಸಂಶೋಧಕರು

ದೊಡ್ಡಬಳ್ಳಾಪುರ: ತುಮಕೂರು ಜಿಲ್ಲೆಯ ದೇವರಾಯನದುರ್ಗ ಬೆಟ್ಟದಲ್ಲಿನ ಜಯಮಂಗಲಿ ನದಿ ಉಗಮ ಸ್ಥಾನದ ಸುತ್ತಮುತ್ತ ಒಂದೂವರೆ ವರ್ಷಗಳ ಹಿಂದೆ ಪ್ರಾರಂಭವಾದ ಸಂಶೋಧನೆಯ ಫಲವಾಗಿ ಬೆಟ್ಟದ ತಪ್ಪಲಿನ ಹಳೇಕೋಟೆ ಗ್ರಾಮದ ಇರವೆಹೊಲ ಜಾಗದಿಂದ ಸಂಗ್ರಹಿಸಲಾಗಿದ್ದ ಜೇಡದ ಮಾದರಿಗಳಲ್ಲಿ ಹೊಸ ಪ್ರಬೇಧದ ಜೇಡ ಪತ್ತೆಯಾಗಿದೆ ಎಂದು ಸಂಶೋಧನ ತಂಡದಲ್ಲಿನ ಜೇಡ ತಜ್ಞ ವೈ.ಟಿ.ಲೋಹಿತ್ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿದ ಅವರು, ಹೊಸ ಜೀನಸ್ ವರ್ಗಕ್ಕೆ ಸೇರಿರುವ ಜೇಡಕ್ಕೆ ಸ್ಥಳೀಯ ಹೆಸರಿನಿಂದಲೇ ಕೆರೆಯಬೇಕು ಎನ್ನುವ ಉದ್ದೇಶದೊಂದಿಗೆ ‘ತೆಂಕಣ ಜಯಮಂಗಲಿ’ ಎಂದು ಹೆಸರಿಸಲಾಗಿದೆ. ಎಷ್ಟೋ ಕೀಟ ಜೇಡಗಳಂತ ಜೀವಿಗಳ ಹೆಸರು ಆಂಗ್ಲ, ಲ್ಯಾಟಿನ್ ಮಯವಾಗಿದ್ದು, ಹೆಸರುಗಳನ್ನು ಉಚ್ಚರಿಸಲು ಹಾಗೂ ನೆನಪಿಡಲು ಕಷ್ಟ. ಈ ಕಾರಣದಿಂದಾಗಿ ನಾನು ಪತ್ತೆ ಮಾಡಿರುವ ಜೇಡವನ್ನು ತೆಂಕಣ ಜಯಮಂಗಲಿ ಎನ್ನುವ ಹೆಸರಿನಿಂದಲೆ ಪರಿಚಯಿಸಿದ್ದೇವೆ ಎಂದರು.

ತೆಂಕಣ ಜಯಮಂಗಲಿ ಜೇಡವು ಸಹ ಹೊಸದಾದ ಕಾರಣ ವಿಜ್ಞಾನಿಗಳಾದ ಜಾನ್ ಕೆಲಬ್, ಕಿರಣ್ ಮರಾಟೆ, ಕೃಷ್ಣಮೇಘ ಕುಂಟೆ ಮತ್ತು ಕೆನಡಾದ ವೈನೆಮ್ಯಾಡಿಸನ್ ಈ ಸಂಶೋಧನೆಯಲ್ಲಿ ಕೈ ಜೋಡಿಸಿದ್ದಾರೆ. ಎನ್.ಸಿ.ಬಿ.ಎಸ್ ಮತ್ತು ಯೂನಿವರ್ಸಿಟಿ ಆಫ್ ಬ್ರಿಟಿಷ್ ಕೊಲಂಬಿಯಾ ಲ್ಯಾಬ್ಗಳೊಂದಿಗಿನ ಸಹಯೋಗದಲ್ಲಿ ಇದನ್ನು ಹೊರ ಪ್ರಪಂಚಕ್ಕೆ ಪರಿಚಸಿದ್ದೇವೆ. ನಮ್ಮ ತಂಡದಲ್ಲಿನ ಬಿ.ಜಿ.ನಿಶಾ,ಚಿನ್ಮಯ್ ಸಿ.ಮಳಿಯೆ ಇವರೆಲ್ಲರ ಪರಿಶ್ರಮದೊಂದಿಗೆ ಅಂತರ ರಾಷ್ಟ್ರೀಯ ನಿಯತಕಾಲಿಕೆ ಜೊಕೇಸ್ (Zookeys) ನಲ್ಲಿ ನಮ್ಮ ಸಂಶೋಧನ ಬರಹವನ್ನು ಇದೇ ಅಕ್ಟೋಬರ್ 11 ರಂದು ಪ್ರಕಟಿಸಲಾಗಿದೆ.

ಈಗಾಗಲೇ ಪತ್ತೆ ಮಾಡಲಾಗಿರುವ ಜೇಡಗಳ ವಂಶವಾಹಿನಿ(ಡಿಎನ್ಎ)ಗಳೊಂದಿಗೆ ಪ್ರಯೋಗಾಲಯದಲ್ಲಿ ಹೋಲಿಕೆ ಮಾಡಿ ನೋಡಲಾಗಿದೆ. ಆದರೆ ಈಗ ಇರುವ ಜೇಡಗಳ ‘ಡಿಎನ್ಎ’ ಯೊಂದಿಗೆ ಇದು ಹೊಂದಾಣಿಕೆಯಾಗಿಲ್ಲ. ಹಾಗೆಯೇ ಈ ಜೇಡದ ಮೈ ಮೇಲಿನ ಬಣ್ಣ, ದೇಹದ ವಿನ್ಯಾಸದ ಮಾದರಿಯು ಭಿನ್ನವಾಗಿದೆ. ಹೀಗೆ ಇತರೆ ಹೋಲಿಕೆಗಳ ಆಧಾರದ ಮೇಲೂ ಸಹ ಇದನ್ನು ಹೊಸ ಪ್ರಬೇಧದ ಜೇಡ ಎಂದು ಗುರುತಿಸಲಾಗಿದೆ. ಸದ್ಯಕ್ಕೆ ಈ ಕುರಿತ ಸಂಶೋಧನ ಬರಹವನ್ನು ಅಂತರ ರಾಷ್ಟ್ರೀಯ ಜರ್ನಲ್ನಲ್ಲಿ ಪ್ರಕಟಿಸಲಾಗಿದೆ. ವಿಶ್ವದ ಇತರೆ ಭಾಗದ ವಿಜ್ಞಾನಿಗಳಿಂದ ಬರುವ ಸಲಹೆ,ಉತ್ತರಗಳ ನಂತರ ‘ತೆಂಕಣ ಜಯಮಂಗಲಿ’ ಜೇಡ ಹೇಗೆ ಭಿನ್ನ ಅನ್ನುವುದು ಮತ್ತಷ್ಟು ನಿಖರವಾಗಲಿದೆ.

ದೇವರಾಯನದುರ್ಗದ ಕಾಡು, ಬೆಟ್ಟ, ನದಿ, ಜಲಮೂಲಗಳು ಜೀವವೈವಿಧ್ಯತೆಯನ್ನು ಪೋಶಿಸುತ್ತ ಸುತ್ತಲಿನ ನಗರ ಹಳ್ಳಿಗಳನ್ನು ಕಾಪಾಡುತ್ತಾ ಬಂದಿವೆ. ಈ ಹೊಸ ಜೇಡದಂತೆ ವಿಜ್ಞಾನಕ್ಕೆ ಪರಿಚಯವಿಲ್ಲದ ಇನ್ನೂ ಅನೇಕ ಜೀವಿಗಳು ಈ ಬೆಟ್ಟದ ಸುತ್ತಮುತ್ತ ಇವೆ. ದೇವರಾಯನದುರ್ಗವನ್ನು ಪುಣ್ಯಕ್ಷೇತ್ರ ಅಥವಾ ಪ್ರವಾಸಿ ತಾಣವಾಗಿಯಷ್ಟೇ ನೋಡದೆ ಜೀವವೈವಿಧ್ಯತೆಯ ತಾಣವಾಗಿಯು ಗುರುತಿಸುವ ಮೂಲಕ ಈ ಪ್ರದೇಶವನ್ನು ಸಂರಕ್ಷಿಸಬೇಕಿದೆ ಎನ್ನುತ್ತಾರೆ ವೈ.ಟಿ.ಲೋಹಿತ್.

Ramesh Babu

Journalist

Recent Posts

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

6 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

7 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

7 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

10 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

13 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

13 hours ago