ತೋಟಗಾರಿಕೆ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಿಂದ 2025-26ನೇ ಸಾಲಿನ 3 ತಿಂಗಳ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಜಿಯನ್ನು ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು / ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಇಲಾಖೆಯ ಅಧಿಕೃತ ಜಾಲತಾಣ https://horticulturedir.karnataka.gov.in ಇದರಲ್ಲಿ ಅಕ್ಟೋಬರ್ 27 ರವರೆಗೆ ಡೌನ್ ಲೋಡ್ ಮಾಡಿಕೊಳ್ಳಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.20, ಪ.ಜಾತಿ ಅಥವಾ ಪಂಗಡದ ಅಭ್ಯರ್ಥಿಗಳಿಗೆ ರೂ.10,
ಅರ್ಜಿ ಶುಲ್ಕವಿದ್ದು, ಇಂಡಿಯನ್ ಪೋಸ್ಟ್ ಲ್ ಆರ್ಡರ್/ ಡಿಡಿ ಯನ್ನು ಜಂಟಿ ನಿರ್ದೇಶಕರು/ ಹಿರಿಯ ಸಹಾಯಕ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು.
ಜೇನುಗಾರಿಕೆ ತರಬೇತಿಗೆ ಕನಿಷ್ಠ ಎಸ್.ಎಸ್.ಎಲ್.ಸಿ ಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿದ್ದು, ಪಹಣಿಯನ್ನು ಹೊಂದಿರಬೇಕು. ಅರ್ಜಿದಾರರು ವಯೋಮಿತಿ 18-35 ವರ್ಷ ವಾಗಿರಬೇಕು. ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ಸಹಾಯಕ ನಿರ್ದೇಶಕರು ದೂ.ಸಂಖ್ಯೆ:8660409618, ಹಿರಿಯ ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು 9480461234, ದೊಡ್ಡಬಳ್ಳಾಪುರ ತಾಲ್ಲೂಕು 9482129648, ಹೊಸಕೋಟೆ ತಾಲ್ಲೂಕು 9880210892, ನೆಲಮಂಗಲ ತಾಲ್ಲೂಕು 98804461607 ಗೆ ಸಂಪರ್ಕಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…
ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…
ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…