ತೋಟಗಾರಿಕೆ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಿಂದ 2025-26ನೇ ಸಾಲಿನ 3 ತಿಂಗಳ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಜಿಯನ್ನು ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು / ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಇಲಾಖೆಯ ಅಧಿಕೃತ ಜಾಲತಾಣ https://horticulturedir.karnataka.gov.in ಇದರಲ್ಲಿ ಅಕ್ಟೋಬರ್ 27 ರವರೆಗೆ ಡೌನ್ ಲೋಡ್ ಮಾಡಿಕೊಳ್ಳಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.20, ಪ.ಜಾತಿ ಅಥವಾ ಪಂಗಡದ ಅಭ್ಯರ್ಥಿಗಳಿಗೆ ರೂ.10,
ಅರ್ಜಿ ಶುಲ್ಕವಿದ್ದು, ಇಂಡಿಯನ್ ಪೋಸ್ಟ್ ಲ್ ಆರ್ಡರ್/ ಡಿಡಿ ಯನ್ನು ಜಂಟಿ ನಿರ್ದೇಶಕರು/ ಹಿರಿಯ ಸಹಾಯಕ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು.
ಜೇನುಗಾರಿಕೆ ತರಬೇತಿಗೆ ಕನಿಷ್ಠ ಎಸ್.ಎಸ್.ಎಲ್.ಸಿ ಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿದ್ದು, ಪಹಣಿಯನ್ನು ಹೊಂದಿರಬೇಕು. ಅರ್ಜಿದಾರರು ವಯೋಮಿತಿ 18-35 ವರ್ಷ ವಾಗಿರಬೇಕು. ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ಸಹಾಯಕ ನಿರ್ದೇಶಕರು ದೂ.ಸಂಖ್ಯೆ:8660409618, ಹಿರಿಯ ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು 9480461234, ದೊಡ್ಡಬಳ್ಳಾಪುರ ತಾಲ್ಲೂಕು 9482129648, ಹೊಸಕೋಟೆ ತಾಲ್ಲೂಕು 9880210892, ನೆಲಮಂಗಲ ತಾಲ್ಲೂಕು 98804461607 ಗೆ ಸಂಪರ್ಕಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾತ್ರಿ 8 - 30 ರ ಸಮಯ....... ಮಾನ್ಯ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ನಿನ್ನೆ ರಾತ್ರಿ 8.30 ರ…
ಬೆಂಗಳೂರು ಗ್ರಾಮಾಂತರ ಜಿ.ಪಂ ನೂತನ ಸಿ.ಇ.ಒ ಆಗಿ ಡಾ.ವಸಂತಿ ಅಮರ್ ಬಿ.ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ದೊಡ್ಡಬಳ್ಳಾಪುರ ನಗರದಲ್ಲಿ ಏ.19 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F02-Raghunathapura, F07-Locall, F14-Scoutcamp & F21-KVN…
ಏಪ್ರಿಲ್ 20 ರಂದು ಬಸವ ಜಯಂತಿ ಮತ್ತು ಅಕ್ಷಯ ತೃತೀಯ ಹಿನ್ನೆಲೆಯಲ್ಲಿ ಬಾಲ್ಯವಿವಾಹಗಳು ಆಗುವ ಸಾಧ್ಯತೆ ಇದ್ದು, ಬಾಲ್ಯ ವಿವಾಹಗಳನ್ನು…
ಬಿಲ್ ಕಲೆಕ್ಟರ್ ಲೋಕಾ ಬಲೆಗೆ ಬಿದ್ದಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.. ಲೋಕಾ ಬಲೆಗೆ ಬಿದ್ದ ಬಿಲ್ ಕಲೆಕ್ಟರ್ 'ಇ' ಖಾತೆ…
ಟ್ರ್ಯಾಕ್ಟರ್ ಗೆ ಹಿಂಬದಿಯಿಂದ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ದಾಬಸ್ ಪೇಟೆ - ಹೊಸಕೋಟೆ…