ತೋಟಗಾರಿಕೆ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಿಂದ 2025-26ನೇ ಸಾಲಿನ 3 ತಿಂಗಳ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಜಿಯನ್ನು ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು / ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಇಲಾಖೆಯ ಅಧಿಕೃತ ಜಾಲತಾಣ https://horticulturedir.karnataka.gov.in ಇದರಲ್ಲಿ ಅಕ್ಟೋಬರ್ 27 ರವರೆಗೆ ಡೌನ್ ಲೋಡ್ ಮಾಡಿಕೊಳ್ಳಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.20, ಪ.ಜಾತಿ ಅಥವಾ ಪಂಗಡದ ಅಭ್ಯರ್ಥಿಗಳಿಗೆ ರೂ.10,
ಅರ್ಜಿ ಶುಲ್ಕವಿದ್ದು, ಇಂಡಿಯನ್ ಪೋಸ್ಟ್ ಲ್ ಆರ್ಡರ್/ ಡಿಡಿ ಯನ್ನು ಜಂಟಿ ನಿರ್ದೇಶಕರು/ ಹಿರಿಯ ಸಹಾಯಕ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು.
ಜೇನುಗಾರಿಕೆ ತರಬೇತಿಗೆ ಕನಿಷ್ಠ ಎಸ್.ಎಸ್.ಎಲ್.ಸಿ ಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿದ್ದು, ಪಹಣಿಯನ್ನು ಹೊಂದಿರಬೇಕು. ಅರ್ಜಿದಾರರು ವಯೋಮಿತಿ 18-35 ವರ್ಷ ವಾಗಿರಬೇಕು. ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ಸಹಾಯಕ ನಿರ್ದೇಶಕರು ದೂ.ಸಂಖ್ಯೆ:8660409618, ಹಿರಿಯ ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು 9480461234, ದೊಡ್ಡಬಳ್ಳಾಪುರ ತಾಲ್ಲೂಕು 9482129648, ಹೊಸಕೋಟೆ ತಾಲ್ಲೂಕು 9880210892, ನೆಲಮಂಗಲ ತಾಲ್ಲೂಕು 98804461607 ಗೆ ಸಂಪರ್ಕಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…