ತೋಟಗಾರಿಕೆ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಿಂದ 2025-26ನೇ ಸಾಲಿನ 3 ತಿಂಗಳ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಜಿಯನ್ನು ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು / ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಇಲಾಖೆಯ ಅಧಿಕೃತ ಜಾಲತಾಣ https://horticulturedir.karnataka.gov.in ಇದರಲ್ಲಿ ಅಕ್ಟೋಬರ್ 27 ರವರೆಗೆ ಡೌನ್ ಲೋಡ್ ಮಾಡಿಕೊಳ್ಳಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.20, ಪ.ಜಾತಿ ಅಥವಾ ಪಂಗಡದ ಅಭ್ಯರ್ಥಿಗಳಿಗೆ ರೂ.10,
ಅರ್ಜಿ ಶುಲ್ಕವಿದ್ದು, ಇಂಡಿಯನ್ ಪೋಸ್ಟ್ ಲ್ ಆರ್ಡರ್/ ಡಿಡಿ ಯನ್ನು ಜಂಟಿ ನಿರ್ದೇಶಕರು/ ಹಿರಿಯ ಸಹಾಯಕ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು.
ಜೇನುಗಾರಿಕೆ ತರಬೇತಿಗೆ ಕನಿಷ್ಠ ಎಸ್.ಎಸ್.ಎಲ್.ಸಿ ಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿದ್ದು, ಪಹಣಿಯನ್ನು ಹೊಂದಿರಬೇಕು. ಅರ್ಜಿದಾರರು ವಯೋಮಿತಿ 18-35 ವರ್ಷ ವಾಗಿರಬೇಕು. ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ಸಹಾಯಕ ನಿರ್ದೇಶಕರು ದೂ.ಸಂಖ್ಯೆ:8660409618, ಹಿರಿಯ ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು 9480461234, ದೊಡ್ಡಬಳ್ಳಾಪುರ ತಾಲ್ಲೂಕು 9482129648, ಹೊಸಕೋಟೆ ತಾಲ್ಲೂಕು 9880210892, ನೆಲಮಂಗಲ ತಾಲ್ಲೂಕು 98804461607 ಗೆ ಸಂಪರ್ಕಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…