ತೋಟಗಾರಿಕೆ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೊಡಗು ಜಿಲ್ಲೆಯ ಭಾಗಮಂಡಲ ಜೇನುಗಾರಿಕೆ ತರಬೇತಿ ಕೇಂದ್ರದಿಂದ 2025-26ನೇ ಸಾಲಿನ 3 ತಿಂಗಳ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಅರ್ಜಿಯನ್ನು ಜಿಲ್ಲಾ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು / ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅಥವಾ ಇಲಾಖೆಯ ಅಧಿಕೃತ ಜಾಲತಾಣ https://horticulturedir.karnataka.gov.in ಇದರಲ್ಲಿ ಅಕ್ಟೋಬರ್ 27 ರವರೆಗೆ ಡೌನ್ ಲೋಡ್ ಮಾಡಿಕೊಳ್ಳಬಹುದು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.20, ಪ.ಜಾತಿ ಅಥವಾ ಪಂಗಡದ ಅಭ್ಯರ್ಥಿಗಳಿಗೆ ರೂ.10,
ಅರ್ಜಿ ಶುಲ್ಕವಿದ್ದು, ಇಂಡಿಯನ್ ಪೋಸ್ಟ್ ಲ್ ಆರ್ಡರ್/ ಡಿಡಿ ಯನ್ನು ಜಂಟಿ ನಿರ್ದೇಶಕರು/ ಹಿರಿಯ ಸಹಾಯಕ ನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿಯ ಜೊತೆಗೆ ಲಗತ್ತಿಸಬೇಕು.
ಜೇನುಗಾರಿಕೆ ತರಬೇತಿಗೆ ಕನಿಷ್ಠ ಎಸ್.ಎಸ್.ಎಲ್.ಸಿ ಯನ್ನು ಪೂರ್ಣಗೊಳಿಸಿರಬೇಕು. ಅಭ್ಯರ್ಥಿಯ ತಂದೆ/ತಾಯಿ/ಪೋಷಕರು ಜಮೀನು ಹೊಂದಿರಬೇಕು ಹಾಗೂ ಸ್ವಂತ ಸಾಗುವಳಿ ಮಾಡುತ್ತಿದ್ದು, ಪಹಣಿಯನ್ನು ಹೊಂದಿರಬೇಕು. ಅರ್ಜಿದಾರರು ವಯೋಮಿತಿ 18-35 ವರ್ಷ ವಾಗಿರಬೇಕು. ಅರ್ಜಿಯನ್ನು ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಜಂಟಿ ನಿರ್ದೇಶಕರು ಅಥವಾ ಹಿರಿಯ ಸಹಾಯಕ ನಿರ್ದೇಶಕರು ದೂ.ಸಂಖ್ಯೆ:8660409618, ಹಿರಿಯ ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು 9480461234, ದೊಡ್ಡಬಳ್ಳಾಪುರ ತಾಲ್ಲೂಕು 9482129648, ಹೊಸಕೋಟೆ ತಾಲ್ಲೂಕು 9880210892, ನೆಲಮಂಗಲ ತಾಲ್ಲೂಕು 98804461607 ಗೆ ಸಂಪರ್ಕಸಬಹುದು ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…
ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…