ಜೈನ್ ವಿಶ್ವವಿದ್ಯಾಲಯ ವಿರುದ್ಧ ಪ್ರತಿಭಟನೆ

ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಮಾನ್ಯತೆಯನ್ನು ರದ್ದು ಮಾಡಿ ಆಡಳಿತ ಮಂಡಳಿಯ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸು ದಾಖಲಿಸಿ ಬಂಧಿಸಬೇಕು ಎಂದು ದಲಿತ ವಿಮೋಚನಾ ಶಕ್ತಿ- ಕರ್ನಾಟಕದ ರಾಜ್ಯ ಅಧ್ಯಕ್ಷ ಮಂಜುನಾಥ್ ಒತ್ತಾಯಿಸಿ‌ದರು.

ನವಭಾರತ ನಿರ್ಮಾತೃ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಅವಮಾನಿಸಿರುವ ಜೈನ್ ಯೂನಿವರ್ಸಿಟಿಯ ಮಾನ್ಯತೆಯನ್ನು ರದ್ದು ಮಾಡುವಂತೆ ಹಾಗೂ ಆಡಳಿತ ಮಂಡಳಿಯವರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಬಳಿ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಸರ್ವರಿಗೂ ಸಮಪಾಲು ಸಮಬಾಳು ಎಂಬ ಆಶಯಗಳ ಮೇಲೆ ಬಹು ಸಂಸ್ಕೃತಿಯ ದೇಶಕ್ಕೆ ಇಡೀ ವಿಶ್ವವೇ ಒಪ್ಪಿ ಮೆಚ್ಚುವಂತಹ ಸಂವಿಧಾನವನ್ನು ಬರೆದುಕೊಟ್ಟ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನಿಸಿದ್ದಲ್ಲದೆ ಪರಿಶಿಷ್ಟ ಜಾತಿ/ ಪಂಗಡಗಳ ಬಗ್ಗೆ ಕೀಳು ಅಭಿರುಚಿಯ ನಾಟಕದ ಸ್ಕಿಟ್ ಮಾಡಿ ಅಭಿನಯಿಸಿದ ವಿದ್ಯಾರ್ಥಿಗಳು ಮೊದಲು ಅವರಿಗೆ ವಿದ್ಯೆ ಕಲಿಯಲು ಯಾರು ಅವಕಾಶ ಮಾಡಿಕೊಟ್ಟರು ಎಂದು ಮೊದಲು ಮನಗಾಣಬೇಕು ಎಂದು ಗುಡುಗಿದರು.

ಇಂತಹ ಕೀಳು ಮಟ್ಟದ ನಾಟಕವನ್ನು ಪ್ರದರ್ಶನ ಮಾಡಲು ಅನುಮತಿ ನೀಡಿ, ದೇಶದ್ರೋಹಿ ಕೃತ್ಯಕ್ಕೆ ಪ್ರೊತ್ಸಾಹ ನೀಡಿದ ಜೈನ್ ವಿವಿಗೆ ನೀಡಿರುವ ಮಾನ್ಯತೆಯನ್ನು ಸರ್ಕಾರ ಈ ಕೂಡಲೇ ರದ್ದು ಮಾಡಿ ಆಡಳಿತ ಮಂಡಳಿಯ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಜೈನ್ ವಿವಿಯ ಮಾನ್ಯತೆ ರದ್ದುಪಡಿಸಿ, ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ನಂತರ ವಿವಿ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮಾಡಿಸಬೇಕು ಎಂದು ಒತ್ತಾಯಿಸಿ ತಹಶಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಕೆ ಮಾಡಲಾಯಿತು.

Ramesh Babu

Journalist

Recent Posts

ಬೆಳೆ ವಿಮೆ ಮಾಡಿಸಲು ಆ.14 ಕೊನೆಯ ದಿನ: ರೈತರು ತಪ್ಪದೇ ಬೆಳೆ ವಿಮೆ ಮಾಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…

9 hours ago

ಬರದ ನಡುವೆಯೂ ರಾಗಿ ರೈತರಿಗೆ ಆಸರೆ: ಫಸಲ್ ಬಿಮಾ ಪ್ರೀಮಿಯಂ ಭರಿಸುವುದಾಗಿ ಶಾಸಕ ಧೀರಜ್ ಮುನಿರಾಜ್ ಘೋಷಣೆ

ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…

11 hours ago

ಕೋಳಿ ವಿಚಾರದ ಜಗಳಕ್ಕೆ ಹೊಸ ಟ್ವಿಸ್ಟ್: ಎರಡೂ ಕಡೆಯಿಂದ ಹಲ್ಲೆ ಆರೋಪ, ಆಸ್ಪತ್ರೆಯಲ್ಲೂ ಗಲಾಟೆ

ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…

12 hours ago

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

20 hours ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

1 day ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

1 day ago