ಜೈನ್ ವಿಶ್ವವಿದ್ಯಾಲಯ ವಿರುದ್ಧ ಪ್ರತಿಭಟನೆ

ಬೆಂಗಳೂರಿನ ಜೈನ್ ವಿಶ್ವವಿದ್ಯಾಲಯದ ಮಾನ್ಯತೆಯನ್ನು ರದ್ದು ಮಾಡಿ ಆಡಳಿತ ಮಂಡಳಿಯ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಕೇಸು ದಾಖಲಿಸಿ ಬಂಧಿಸಬೇಕು ಎಂದು ದಲಿತ ವಿಮೋಚನಾ ಶಕ್ತಿ- ಕರ್ನಾಟಕದ ರಾಜ್ಯ ಅಧ್ಯಕ್ಷ ಮಂಜುನಾಥ್ ಒತ್ತಾಯಿಸಿ‌ದರು.

ನವಭಾರತ ನಿರ್ಮಾತೃ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಅವಮಾನಿಸಿರುವ ಜೈನ್ ಯೂನಿವರ್ಸಿಟಿಯ ಮಾನ್ಯತೆಯನ್ನು ರದ್ದು ಮಾಡುವಂತೆ ಹಾಗೂ ಆಡಳಿತ ಮಂಡಳಿಯವರ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸಿ ಬಂಧಿಸುವಂತೆ ಒತ್ತಾಯಿಸಿ ನಗರದ ತಾಲೂಕು ಕಚೇರಿ ಬಳಿ ಬೃಹತ್ ಪ್ರತಿಭಟನೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಸರ್ವರಿಗೂ ಸಮಪಾಲು ಸಮಬಾಳು ಎಂಬ ಆಶಯಗಳ ಮೇಲೆ ಬಹು ಸಂಸ್ಕೃತಿಯ ದೇಶಕ್ಕೆ ಇಡೀ ವಿಶ್ವವೇ ಒಪ್ಪಿ ಮೆಚ್ಚುವಂತಹ ಸಂವಿಧಾನವನ್ನು ಬರೆದುಕೊಟ್ಟ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನಿಸಿದ್ದಲ್ಲದೆ ಪರಿಶಿಷ್ಟ ಜಾತಿ/ ಪಂಗಡಗಳ ಬಗ್ಗೆ ಕೀಳು ಅಭಿರುಚಿಯ ನಾಟಕದ ಸ್ಕಿಟ್ ಮಾಡಿ ಅಭಿನಯಿಸಿದ ವಿದ್ಯಾರ್ಥಿಗಳು ಮೊದಲು ಅವರಿಗೆ ವಿದ್ಯೆ ಕಲಿಯಲು ಯಾರು ಅವಕಾಶ ಮಾಡಿಕೊಟ್ಟರು ಎಂದು ಮೊದಲು ಮನಗಾಣಬೇಕು ಎಂದು ಗುಡುಗಿದರು.

ಇಂತಹ ಕೀಳು ಮಟ್ಟದ ನಾಟಕವನ್ನು ಪ್ರದರ್ಶನ ಮಾಡಲು ಅನುಮತಿ ನೀಡಿ, ದೇಶದ್ರೋಹಿ ಕೃತ್ಯಕ್ಕೆ ಪ್ರೊತ್ಸಾಹ ನೀಡಿದ ಜೈನ್ ವಿವಿಗೆ ನೀಡಿರುವ ಮಾನ್ಯತೆಯನ್ನು ಸರ್ಕಾರ ಈ ಕೂಡಲೇ ರದ್ದು ಮಾಡಿ ಆಡಳಿತ ಮಂಡಳಿಯ ವಿರುದ್ಧ ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಕೇಸು ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಜೈನ್ ವಿವಿಯ ಮಾನ್ಯತೆ ರದ್ದುಪಡಿಸಿ, ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು, ನಂತರ ವಿವಿ ಆವರಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆ ಅನಾವರಣ ಮಾಡಿಸಬೇಕು ಎಂದು ಒತ್ತಾಯಿಸಿ ತಹಶಿಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಕೆ ಮಾಡಲಾಯಿತು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

8 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

11 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

15 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago