ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು ಸಿಗದೇ ಇರುವುದು ಕಂಡುಬಂದಿದೆ. ಸವಲತ್ತು ಇಲ್ಲದೇ ಇರುವುದರಿಂದ ದರ್ಶನ್ ಹೈರಾಣವಾಗಿ ಹೊಗಿದ್ದಾರೆ. ಈ ಕಾರಣದಿಂದಲೇ ದರ್ಶನ್ ಇಂದು ನ್ಯಾಯಾಧೀಶರ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದರೇ ಕೇಳಿದ್ದಾರೆ. ದರ್ಶನ್ ಬೇಡಿಕೆ ಕೇಳಿ ಒಮ್ಮೆ ಶಾಕ್ ಆದ ಜಡ್ಜ್, ‘ಹಾಗೆಲ್ಲ ಕೇಳಬಾರದು’ ಎಂದು ದರ್ಶನ್ಗೆ ಕಿವಿಮಾತು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಕಳೆದ ವರ್ಷ ಬಂಧನವಾಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿತು. ಅಲ್ಲದೆ, ಅವರಿಗೆ ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು.
ಹೀಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ.
ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್ಗೆ ಶಾಕ್ ತಂದಿದೆ.
ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್ನಿಂದಲೇ ಈ ಆದೇಶ ನೀಡಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ನ್ಯಾಯಾಧೀಶರು ಹಾಗೆಲ್ಲಾ ನೀವು ಕೇಳುವಂತಿಲ್ಲ ಎಂದು ಹೇಳಿದ್ದಾರೆ.
ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…