ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು ಸಿಗದೇ ಇರುವುದು ಕಂಡುಬಂದಿದೆ. ಸವಲತ್ತು ಇಲ್ಲದೇ ಇರುವುದರಿಂದ ದರ್ಶನ್ ಹೈರಾಣವಾಗಿ ಹೊಗಿದ್ದಾರೆ. ಈ ಕಾರಣದಿಂದಲೇ ದರ್ಶನ್ ಇಂದು ನ್ಯಾಯಾಧೀಶರ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದರೇ ಕೇಳಿದ್ದಾರೆ. ದರ್ಶನ್ ಬೇಡಿಕೆ ಕೇಳಿ ಒಮ್ಮೆ ಶಾಕ್ ಆದ ಜಡ್ಜ್, ‘ಹಾಗೆಲ್ಲ ಕೇಳಬಾರದು’ ಎಂದು ದರ್ಶನ್ಗೆ ಕಿವಿಮಾತು ಹೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಕಳೆದ ವರ್ಷ ಬಂಧನವಾಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ನಲ್ಲಿ ಪ್ರಶ್ನೆ ಮಾಡಿತ್ತು. ಸುಪ್ರೀಂಕೋರ್ಟ್ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿತು. ಅಲ್ಲದೆ, ಅವರಿಗೆ ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು.
ಹೀಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ.
ಹೆಚ್ಚುವರಿ ದಿಂಬು ಹಾಗೂ ಬೇಡ್ಶೀಟ್ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್ಗೆ ಶಾಕ್ ತಂದಿದೆ.
ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್ನಿಂದಲೇ ಈ ಆದೇಶ ನೀಡಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ನ್ಯಾಯಾಧೀಶರು ಹಾಗೆಲ್ಲಾ ನೀವು ಕೇಳುವಂತಿಲ್ಲ ಎಂದು ಹೇಳಿದ್ದಾರೆ.
ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…