ಜೈಲಿನಲ್ಲಿ ದರ್ಶನ್ ಗೆ ನರಕಯಾತನೆ: “ನಾನು ಬಿಸಿಲು ನೋಡಿ 30 ದಿನಗಳಾಗಿವೆ- ಕೈ ಎಲ್ಲಾ ಫಂಗಸ್ ಬಂದಿದೆ- ನನಗೆ ಪಾಯಿಸನ್ ಕೊಡಿ”- ಜಡ್ಜ್ ಬಳಿ ದರ್ಶನ್ ಮನವಿ

ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ2 ಆರೋಪಿ ನಟ ದರ್ಶನ್ ಗೆ ಈ ಬಾರಿ ಜೈಲಿನಲ್ಲಿ ಯಾವುದೇ ಸೌಕರ್ಯಗಳು ಸಿಗದೇ ಇರುವುದು ಕಂಡುಬಂದಿದೆ. ಸವಲತ್ತು ಇಲ್ಲದೇ ಇರುವುದರಿಂದ ದರ್ಶನ್ ಹೈರಾಣವಾಗಿ ಹೊಗಿದ್ದಾರೆ. ಈ ಕಾರಣದಿಂದಲೇ ದರ್ಶನ್ ಇಂದು ನ್ಯಾಯಾಧೀಶರ ಮುಂದೆ ಬೇಡಿಕೆಯೊಂದನ್ನು ಇಟ್ಟಿದ್ದಾರೆ. ‘ನನಗೆ ವಿಷ ನೀಡಲು ಆದೇಶಿಸಿ’ ಎಂದು ಜಡ್ಜ್ ಎದರೇ ಕೇಳಿದ್ದಾರೆ. ದರ್ಶನ್ ಬೇಡಿಕೆ ಕೇಳಿ ಒಮ್ಮೆ ಶಾಕ್ ಆದ ಜಡ್ಜ್, ‘ಹಾಗೆಲ್ಲ ಕೇಳಬಾರದು’ ಎಂದು  ದರ್ಶನ್​ಗೆ ಕಿವಿಮಾತು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಕಳೆದ ವರ್ಷ ಬಂಧನವಾಗಿದ್ದರು. ಆ ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಇದನ್ನು ಕರ್ನಾಟಕ ಸರ್ಕಾರ  ಸುಪ್ರೀಂಕೋರ್ಟ್​​ನಲ್ಲಿ ಪ್ರಶ್ನೆ ಮಾಡಿತ್ತು.  ಸುಪ್ರೀಂಕೋರ್ಟ್​ ದರ್ಶನ್ ಅವರ ಜಾಮೀನನ್ನು ರದ್ದು ಮಾಡಿತು. ಅಲ್ಲದೆ, ಅವರಿಗೆ ಯಾವುದೇ ವಿಶೇಷ ಸವಲತ್ತು ಸಿಗಬಾರದು ಎಂದು ಎಚ್ಚರಿಸಿತ್ತು.

ಹೀಗಾಗಿ, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಅವರನ್ನು ಇಡಲಾಗಿದೆ. ವಿಶೇಷ ಸವಲತ್ತು ಸಿಗದಂತೆ ನೋಡಿಕೊಳ್ಳಲಾಗುತ್ತಿದೆ. ಅಲ್ಲಿನ ಕಠಿಣ ನಿಯಮಗಳಿಂದ ಅವರಿಗೆ ನರಕಯಾತನೆ ಉಂಟಾಗುತ್ತಿದೆ.

ಹೆಚ್ಚುವರಿ ದಿಂಬು ಹಾಗೂ ಬೇಡ್​​ಶೀಟ್​ಗಾಗಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ನಡೆದಿದೆ. ಈ ವೇಳೆ ವಿಡಿಯೋ ಕಾನ್ಫರೆನ್ಸ್​ ಮೂಲಕ ದರ್ಶನ್ ವಿಚಾರಣೆಗೆ ಹಾಜರಾದರು. ಆಗ ಅವರು, ಮೊದಲಿಗೆ ಕೈ ಎತ್ತಿ ‘ಒಂದು ಮನವಿ ಇದೆ’ ಎಂದು ಹೇಳಿದ್ದಾರೆ. ಮನವಿ ಏನು ಎಂದು ಕೇಳಿದಾಗ, ದರ್ಶನ್ ಕೊಟ್ಟ ಉತ್ತರ ಜಡ್ಜ್​ಗೆ ಶಾಕ್ ತಂದಿದೆ.

ನಾನು ಬಿಸಿಲು ನೋಡಿ 30 ದಿನಗಳಾಗಿವೆ. ಕೈ ಎಲ್ಲಾ ಫಂಗಸ್ ಬಂದಿದೆ. ಬೇರೆ ಯಾರಿಗೂ ಬೇಡ ನನಗೆ ಮಾತ್ರ ಪಾಯಿಸನ್ ನೀಡಲಿ. ಕೋರ್ಟ್​​ನಿಂದಲೇ ಈ ಆದೇಶ ನೀಡಬೇಕು ಎಂದು ದರ್ಶನ್ ಮನವಿ ಮಾಡಿದ್ದಾರೆ. ಆಗ ನ್ಯಾಯಾಧೀಶರು ಹಾಗೆಲ್ಲಾ ನೀವು ಕೇಳುವಂತಿಲ್ಲ ಎಂದು ಹೇಳಿದ್ದಾರೆ.

ಜೈಲು ಅಧಿಕಾರಿಗಳಿಗೆ ಯಾವ ಆದೇಶ ನೀಡಬೇಕೋ ನೀಡುತ್ತೇವೆ. ನಿಮ್ಮ ಮನವಿ ಬಗ್ಗೆ ಮಧ್ಯಾಹ್ನ ಆದೇಶ ನೀಡುತ್ತೇವೆ ಎಂದು ವಿಚಾರಣೆಯನ್ನು 3 ಗಂಟೆಗೆ ಮುಂದೂಡಿದ್ದಾರೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

5 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

22 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

1 day ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

1 day ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago