ಕೊಡಗು ಜಿಲ್ಲೆಯ ವಿವಿಧೆಡೆ ಮಾದಕ ವಸ್ತು ಸರಬರಾಜು, ಮಾರಾಟ ಮತ್ತು ಬಳಕೆಯ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಈಗಾಗಲೇ ಹಲವು ಕಾರ್ಯಾಚರಣೆ ನಡೆಸಿ ಈ ದಂಧೆಯಲ್ಲಿ ತೊಡಗಿರುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
ಈ ನಡುವೆ ವ್ಯಕ್ತಿಯೊಬ್ಬ ಕಾರಾಗೃಹದಲ್ಲಿ
ವಿಚಾರಣಾ ಬಂಧಿಯನ್ನು ನೋಡುವ ನೆಪದಲ್ಲಿ ಬಂದು ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡಲು ಯತ್ನಿಸಿ ತಗಲಾಕಿಕೊಂಡು ಕೈಗೆ ಕೋಳ ಹಾಕಿಸಿಕೊಂಡಿದ್ದಾನೆ.
*ಪ್ರಕರಣದ ವಿವರ*
ದಿನಾಂಕ 04-03-2025 ರಂದು ಕಣ್ಣೂರು ಜಿಲ್ಲೆ ತಲಚೇರಿ ಮೂಲದ ಸುರಬೀಲ್ (26) ಎಂಬಾತ ಮಡಿಕೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿರುವ ಸನಮ್ ಎಂಬುವವನ ಸಹೋದರ ಎಂದು ಹೇಳಿಕೊಂಡು ಆತನ ಸಂದರ್ಶನಕ್ಕಾಗಿ ಬಂದಿದ್ದ.
ಹಾಗೇ ಬರುವಾಗ ಸನಮ್ ಗಾಗಿ ದಿನನಿತ್ಯ ಬಳಕೆಯ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಷ್, ಮೆಡಿಮಿಕ್ಸ್ ಸೋಪ್, ಡಕ್ಟಾರ್ ವಾಶರ್ ಬಟ್ಟೆ ಸೋಪ್, ನವರತ್ನ ಆಯಿಲ್ ಮತ್ತು ಕಾರ್ತಿಕಾ ಶ್ಯಾಂಪ್ ಗಳನ್ನು ತಂದಿದ್ದ.
ಆದರೆ, ಇವುಗಳನ್ನು ಸನಮ್ ಗೆ ನೀಡುವ ಮೊದಲು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಪರಿಶೀಲಿದಾಗ ಟೂತ್ ಪೇಸ್ಟ್ ಟ್ಯೂಬ್ ನ ಒಳಗೆ ಟೂತ್ ಪೇಸ್ಟ್ ನ ಬದಲು ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿರುವುದು ಪತ್ತೆ ಆಗಿದೆ.
ಹೀಗಾಗಿ, ಈತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ದೂರು ನೀಡಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii) (A) NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿ ಸುರಬೀಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…