ಕೊಡಗು ಜಿಲ್ಲೆಯ ವಿವಿಧೆಡೆ ಮಾದಕ ವಸ್ತು ಸರಬರಾಜು, ಮಾರಾಟ ಮತ್ತು ಬಳಕೆಯ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಈಗಾಗಲೇ ಹಲವು ಕಾರ್ಯಾಚರಣೆ ನಡೆಸಿ ಈ ದಂಧೆಯಲ್ಲಿ ತೊಡಗಿರುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
ಈ ನಡುವೆ ವ್ಯಕ್ತಿಯೊಬ್ಬ ಕಾರಾಗೃಹದಲ್ಲಿ
ವಿಚಾರಣಾ ಬಂಧಿಯನ್ನು ನೋಡುವ ನೆಪದಲ್ಲಿ ಬಂದು ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡಲು ಯತ್ನಿಸಿ ತಗಲಾಕಿಕೊಂಡು ಕೈಗೆ ಕೋಳ ಹಾಕಿಸಿಕೊಂಡಿದ್ದಾನೆ.
*ಪ್ರಕರಣದ ವಿವರ*
ದಿನಾಂಕ 04-03-2025 ರಂದು ಕಣ್ಣೂರು ಜಿಲ್ಲೆ ತಲಚೇರಿ ಮೂಲದ ಸುರಬೀಲ್ (26) ಎಂಬಾತ ಮಡಿಕೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿರುವ ಸನಮ್ ಎಂಬುವವನ ಸಹೋದರ ಎಂದು ಹೇಳಿಕೊಂಡು ಆತನ ಸಂದರ್ಶನಕ್ಕಾಗಿ ಬಂದಿದ್ದ.
ಹಾಗೇ ಬರುವಾಗ ಸನಮ್ ಗಾಗಿ ದಿನನಿತ್ಯ ಬಳಕೆಯ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಷ್, ಮೆಡಿಮಿಕ್ಸ್ ಸೋಪ್, ಡಕ್ಟಾರ್ ವಾಶರ್ ಬಟ್ಟೆ ಸೋಪ್, ನವರತ್ನ ಆಯಿಲ್ ಮತ್ತು ಕಾರ್ತಿಕಾ ಶ್ಯಾಂಪ್ ಗಳನ್ನು ತಂದಿದ್ದ.
ಆದರೆ, ಇವುಗಳನ್ನು ಸನಮ್ ಗೆ ನೀಡುವ ಮೊದಲು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಪರಿಶೀಲಿದಾಗ ಟೂತ್ ಪೇಸ್ಟ್ ಟ್ಯೂಬ್ ನ ಒಳಗೆ ಟೂತ್ ಪೇಸ್ಟ್ ನ ಬದಲು ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿರುವುದು ಪತ್ತೆ ಆಗಿದೆ.
ಹೀಗಾಗಿ, ಈತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ದೂರು ನೀಡಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii) (A) NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿ ಸುರಬೀಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…