ಕೊಡಗು ಜಿಲ್ಲೆಯ ವಿವಿಧೆಡೆ ಮಾದಕ ವಸ್ತು ಸರಬರಾಜು, ಮಾರಾಟ ಮತ್ತು ಬಳಕೆಯ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಈಗಾಗಲೇ ಹಲವು ಕಾರ್ಯಾಚರಣೆ ನಡೆಸಿ ಈ ದಂಧೆಯಲ್ಲಿ ತೊಡಗಿರುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
ಈ ನಡುವೆ ವ್ಯಕ್ತಿಯೊಬ್ಬ ಕಾರಾಗೃಹದಲ್ಲಿ
ವಿಚಾರಣಾ ಬಂಧಿಯನ್ನು ನೋಡುವ ನೆಪದಲ್ಲಿ ಬಂದು ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡಲು ಯತ್ನಿಸಿ ತಗಲಾಕಿಕೊಂಡು ಕೈಗೆ ಕೋಳ ಹಾಕಿಸಿಕೊಂಡಿದ್ದಾನೆ.
*ಪ್ರಕರಣದ ವಿವರ*
ದಿನಾಂಕ 04-03-2025 ರಂದು ಕಣ್ಣೂರು ಜಿಲ್ಲೆ ತಲಚೇರಿ ಮೂಲದ ಸುರಬೀಲ್ (26) ಎಂಬಾತ ಮಡಿಕೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿರುವ ಸನಮ್ ಎಂಬುವವನ ಸಹೋದರ ಎಂದು ಹೇಳಿಕೊಂಡು ಆತನ ಸಂದರ್ಶನಕ್ಕಾಗಿ ಬಂದಿದ್ದ.
ಹಾಗೇ ಬರುವಾಗ ಸನಮ್ ಗಾಗಿ ದಿನನಿತ್ಯ ಬಳಕೆಯ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಷ್, ಮೆಡಿಮಿಕ್ಸ್ ಸೋಪ್, ಡಕ್ಟಾರ್ ವಾಶರ್ ಬಟ್ಟೆ ಸೋಪ್, ನವರತ್ನ ಆಯಿಲ್ ಮತ್ತು ಕಾರ್ತಿಕಾ ಶ್ಯಾಂಪ್ ಗಳನ್ನು ತಂದಿದ್ದ.
ಆದರೆ, ಇವುಗಳನ್ನು ಸನಮ್ ಗೆ ನೀಡುವ ಮೊದಲು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಪರಿಶೀಲಿದಾಗ ಟೂತ್ ಪೇಸ್ಟ್ ಟ್ಯೂಬ್ ನ ಒಳಗೆ ಟೂತ್ ಪೇಸ್ಟ್ ನ ಬದಲು ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿರುವುದು ಪತ್ತೆ ಆಗಿದೆ.
ಹೀಗಾಗಿ, ಈತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ದೂರು ನೀಡಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii) (A) NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿ ಸುರಬೀಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
"77ನೇ ಗಣರಾಜ್ಯೋತ್ಸವ”ದ ಅಂಗವಾಗಿ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ…
ಬೆಳಗಾವಿಯ ದಟ್ಟ ಅರಣ್ಯ ಪ್ರದೇಶದ ನಡುವೆ ಸಾಗುವ ಚೋರ್ಲಾ ಘಾಟ್ನ ರಸ್ತೆಗಳು ಸಾಮಾನ್ಯವಾಗಿ ಮೌನದಿಂದ ಕೂಡಿರುತ್ತವೆ. ಆದರೆ, ಆ ಮೌನದಲ್ಲೇ…
2026ನೇ ಸಾಲಿನ ಪದ್ಮ ಪ್ರಶಸ್ತಿ ಪ್ರಕಟವಾಗಿದೆ. ಒಟ್ಟು 131 ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕದ 8 ಮಂದಿಯು ಈ…
ದೊಡ್ಡಬಳ್ಳಾಪುರ ತಾಲ್ಲೂಕಿನ ಹುಲುಕುಡಿ ವೀರಭದ್ರಸ್ವಾಮಿ ಕ್ಷೇತ್ರದಲ್ಲಿ ಕ್ಷೇತ್ರಾಭಿವೃದ್ಧಿ ಟ್ರಸ್ಟ್ ವತಿಯಿಂದ ರಥಸಪ್ತಮಿ ಅಂಗವಾಗಿ ಇಂದು (ಜ.25) ವೀರಭದ್ರಸ್ವಾಮಿ ಮತ್ತು ಪ್ರಸನ್ನ…
ಪಿಕಪ್ ವಾಹನ, ಆಟೋ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ…