Categories: ಕೊಡಗು

ಜೈಲಿನೊಳಗೆ ಮಾದಕ ವಸ್ತು ಸರಬರಾಜು ಮಾಡಲು ಬಂದಾತ ಲಾಕ್!: ಮೇಲೆ ಟೂತ್ ಪೇಸ್ಟಿನ ಟ್ಯೂಬ್, ಒಳಗೆ ನಿಷೇಧಿತ ಹ್ಯಾಶಿಶ್!

ಕೊಡಗು ಜಿಲ್ಲೆಯ ವಿವಿಧೆಡೆ ಮಾದಕ ವಸ್ತು ಸರಬರಾಜು, ಮಾರಾಟ ಮತ್ತು ಬಳಕೆಯ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಈಗಾಗಲೇ ಹಲವು ಕಾರ್ಯಾಚರಣೆ ನಡೆಸಿ ಈ ದಂಧೆಯಲ್ಲಿ ತೊಡಗಿರುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.

ಈ ನಡುವೆ ವ್ಯಕ್ತಿಯೊಬ್ಬ ಕಾರಾಗೃಹದಲ್ಲಿ
ವಿಚಾರಣಾ ಬಂಧಿಯನ್ನು ನೋಡುವ ನೆಪದಲ್ಲಿ ಬಂದು ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡಲು ಯತ್ನಿಸಿ ತಗಲಾಕಿಕೊಂಡು ಕೈಗೆ ಕೋಳ ಹಾಕಿಸಿಕೊಂಡಿದ್ದಾನೆ.

*ಪ್ರಕರಣದ ವಿವರ*

ದಿನಾಂಕ 04-03-2025 ರಂದು ಕಣ್ಣೂರು ಜಿಲ್ಲೆ ತಲಚೇರಿ ಮೂಲದ ಸುರಬೀಲ್ (26) ಎಂಬಾತ ಮಡಿಕೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿರುವ ಸನಮ್ ಎಂಬುವವನ ಸಹೋದರ ಎಂದು ಹೇಳಿಕೊಂಡು ಆತನ ಸಂದರ್ಶನಕ್ಕಾಗಿ ಬಂದಿದ್ದ.

ಹಾಗೇ ಬರುವಾಗ ಸನಮ್ ಗಾಗಿ ದಿನನಿತ್ಯ ಬಳಕೆಯ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಷ್, ಮೆಡಿಮಿಕ್ಸ್ ಸೋಪ್, ಡಕ್ಟಾರ್ ವಾಶರ್ ಬಟ್ಟೆ ಸೋಪ್, ನವರತ್ನ ಆಯಿಲ್ ಮತ್ತು ಕಾರ್ತಿಕಾ ಶ್ಯಾಂಪ್ ಗಳನ್ನು ತಂದಿದ್ದ.

ಆದರೆ, ಇವುಗಳನ್ನು ಸನಮ್ ಗೆ ನೀಡುವ ಮೊದಲು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಪರಿಶೀಲಿದಾಗ ಟೂತ್ ಪೇಸ್ಟ್ ಟ್ಯೂಬ್ ನ ಒಳಗೆ ಟೂತ್ ಪೇಸ್ಟ್ ನ ಬದಲು ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿರುವುದು ಪತ್ತೆ ಆಗಿದೆ.

ಹೀಗಾಗಿ, ಈತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ದೂರು ನೀಡಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii) (A) NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿ ಸುರಬೀಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Ramesh Babu

Journalist

Recent Posts

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

1 hour ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

2 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

3 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

5 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

12 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

12 hours ago