ಕೊಡಗು ಜಿಲ್ಲೆಯ ವಿವಿಧೆಡೆ ಮಾದಕ ವಸ್ತು ಸರಬರಾಜು, ಮಾರಾಟ ಮತ್ತು ಬಳಕೆಯ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಈಗಾಗಲೇ ಹಲವು ಕಾರ್ಯಾಚರಣೆ ನಡೆಸಿ ಈ ದಂಧೆಯಲ್ಲಿ ತೊಡಗಿರುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
ಈ ನಡುವೆ ವ್ಯಕ್ತಿಯೊಬ್ಬ ಕಾರಾಗೃಹದಲ್ಲಿ
ವಿಚಾರಣಾ ಬಂಧಿಯನ್ನು ನೋಡುವ ನೆಪದಲ್ಲಿ ಬಂದು ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡಲು ಯತ್ನಿಸಿ ತಗಲಾಕಿಕೊಂಡು ಕೈಗೆ ಕೋಳ ಹಾಕಿಸಿಕೊಂಡಿದ್ದಾನೆ.
*ಪ್ರಕರಣದ ವಿವರ*
ದಿನಾಂಕ 04-03-2025 ರಂದು ಕಣ್ಣೂರು ಜಿಲ್ಲೆ ತಲಚೇರಿ ಮೂಲದ ಸುರಬೀಲ್ (26) ಎಂಬಾತ ಮಡಿಕೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿರುವ ಸನಮ್ ಎಂಬುವವನ ಸಹೋದರ ಎಂದು ಹೇಳಿಕೊಂಡು ಆತನ ಸಂದರ್ಶನಕ್ಕಾಗಿ ಬಂದಿದ್ದ.
ಹಾಗೇ ಬರುವಾಗ ಸನಮ್ ಗಾಗಿ ದಿನನಿತ್ಯ ಬಳಕೆಯ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಷ್, ಮೆಡಿಮಿಕ್ಸ್ ಸೋಪ್, ಡಕ್ಟಾರ್ ವಾಶರ್ ಬಟ್ಟೆ ಸೋಪ್, ನವರತ್ನ ಆಯಿಲ್ ಮತ್ತು ಕಾರ್ತಿಕಾ ಶ್ಯಾಂಪ್ ಗಳನ್ನು ತಂದಿದ್ದ.
ಆದರೆ, ಇವುಗಳನ್ನು ಸನಮ್ ಗೆ ನೀಡುವ ಮೊದಲು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಪರಿಶೀಲಿದಾಗ ಟೂತ್ ಪೇಸ್ಟ್ ಟ್ಯೂಬ್ ನ ಒಳಗೆ ಟೂತ್ ಪೇಸ್ಟ್ ನ ಬದಲು ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿರುವುದು ಪತ್ತೆ ಆಗಿದೆ.
ಹೀಗಾಗಿ, ಈತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ದೂರು ನೀಡಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii) (A) NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿ ಸುರಬೀಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…