Categories: ಕೊಡಗು

ಜೈಲಿನೊಳಗೆ ಮಾದಕ ವಸ್ತು ಸರಬರಾಜು ಮಾಡಲು ಬಂದಾತ ಲಾಕ್!: ಮೇಲೆ ಟೂತ್ ಪೇಸ್ಟಿನ ಟ್ಯೂಬ್, ಒಳಗೆ ನಿಷೇಧಿತ ಹ್ಯಾಶಿಶ್!

ಕೊಡಗು ಜಿಲ್ಲೆಯ ವಿವಿಧೆಡೆ ಮಾದಕ ವಸ್ತು ಸರಬರಾಜು, ಮಾರಾಟ ಮತ್ತು ಬಳಕೆಯ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಈಗಾಗಲೇ ಹಲವು ಕಾರ್ಯಾಚರಣೆ ನಡೆಸಿ ಈ ದಂಧೆಯಲ್ಲಿ ತೊಡಗಿರುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.

ಈ ನಡುವೆ ವ್ಯಕ್ತಿಯೊಬ್ಬ ಕಾರಾಗೃಹದಲ್ಲಿ
ವಿಚಾರಣಾ ಬಂಧಿಯನ್ನು ನೋಡುವ ನೆಪದಲ್ಲಿ ಬಂದು ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡಲು ಯತ್ನಿಸಿ ತಗಲಾಕಿಕೊಂಡು ಕೈಗೆ ಕೋಳ ಹಾಕಿಸಿಕೊಂಡಿದ್ದಾನೆ.

*ಪ್ರಕರಣದ ವಿವರ*

ದಿನಾಂಕ 04-03-2025 ರಂದು ಕಣ್ಣೂರು ಜಿಲ್ಲೆ ತಲಚೇರಿ ಮೂಲದ ಸುರಬೀಲ್ (26) ಎಂಬಾತ ಮಡಿಕೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿರುವ ಸನಮ್ ಎಂಬುವವನ ಸಹೋದರ ಎಂದು ಹೇಳಿಕೊಂಡು ಆತನ ಸಂದರ್ಶನಕ್ಕಾಗಿ ಬಂದಿದ್ದ.

ಹಾಗೇ ಬರುವಾಗ ಸನಮ್ ಗಾಗಿ ದಿನನಿತ್ಯ ಬಳಕೆಯ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಷ್, ಮೆಡಿಮಿಕ್ಸ್ ಸೋಪ್, ಡಕ್ಟಾರ್ ವಾಶರ್ ಬಟ್ಟೆ ಸೋಪ್, ನವರತ್ನ ಆಯಿಲ್ ಮತ್ತು ಕಾರ್ತಿಕಾ ಶ್ಯಾಂಪ್ ಗಳನ್ನು ತಂದಿದ್ದ.

ಆದರೆ, ಇವುಗಳನ್ನು ಸನಮ್ ಗೆ ನೀಡುವ ಮೊದಲು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಪರಿಶೀಲಿದಾಗ ಟೂತ್ ಪೇಸ್ಟ್ ಟ್ಯೂಬ್ ನ ಒಳಗೆ ಟೂತ್ ಪೇಸ್ಟ್ ನ ಬದಲು ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿರುವುದು ಪತ್ತೆ ಆಗಿದೆ.

ಹೀಗಾಗಿ, ಈತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ದೂರು ನೀಡಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii) (A) NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿ ಸುರಬೀಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

8 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

10 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

11 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

16 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

19 hours ago