ಕೊಡಗು ಜಿಲ್ಲೆಯ ವಿವಿಧೆಡೆ ಮಾದಕ ವಸ್ತು ಸರಬರಾಜು, ಮಾರಾಟ ಮತ್ತು ಬಳಕೆಯ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಈಗಾಗಲೇ ಹಲವು ಕಾರ್ಯಾಚರಣೆ ನಡೆಸಿ ಈ ದಂಧೆಯಲ್ಲಿ ತೊಡಗಿರುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
ಈ ನಡುವೆ ವ್ಯಕ್ತಿಯೊಬ್ಬ ಕಾರಾಗೃಹದಲ್ಲಿ
ವಿಚಾರಣಾ ಬಂಧಿಯನ್ನು ನೋಡುವ ನೆಪದಲ್ಲಿ ಬಂದು ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡಲು ಯತ್ನಿಸಿ ತಗಲಾಕಿಕೊಂಡು ಕೈಗೆ ಕೋಳ ಹಾಕಿಸಿಕೊಂಡಿದ್ದಾನೆ.
*ಪ್ರಕರಣದ ವಿವರ*
ದಿನಾಂಕ 04-03-2025 ರಂದು ಕಣ್ಣೂರು ಜಿಲ್ಲೆ ತಲಚೇರಿ ಮೂಲದ ಸುರಬೀಲ್ (26) ಎಂಬಾತ ಮಡಿಕೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿರುವ ಸನಮ್ ಎಂಬುವವನ ಸಹೋದರ ಎಂದು ಹೇಳಿಕೊಂಡು ಆತನ ಸಂದರ್ಶನಕ್ಕಾಗಿ ಬಂದಿದ್ದ.
ಹಾಗೇ ಬರುವಾಗ ಸನಮ್ ಗಾಗಿ ದಿನನಿತ್ಯ ಬಳಕೆಯ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಷ್, ಮೆಡಿಮಿಕ್ಸ್ ಸೋಪ್, ಡಕ್ಟಾರ್ ವಾಶರ್ ಬಟ್ಟೆ ಸೋಪ್, ನವರತ್ನ ಆಯಿಲ್ ಮತ್ತು ಕಾರ್ತಿಕಾ ಶ್ಯಾಂಪ್ ಗಳನ್ನು ತಂದಿದ್ದ.
ಆದರೆ, ಇವುಗಳನ್ನು ಸನಮ್ ಗೆ ನೀಡುವ ಮೊದಲು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಪರಿಶೀಲಿದಾಗ ಟೂತ್ ಪೇಸ್ಟ್ ಟ್ಯೂಬ್ ನ ಒಳಗೆ ಟೂತ್ ಪೇಸ್ಟ್ ನ ಬದಲು ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿರುವುದು ಪತ್ತೆ ಆಗಿದೆ.
ಹೀಗಾಗಿ, ಈತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ದೂರು ನೀಡಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii) (A) NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿ ಸುರಬೀಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…