ಕೊಡಗು ಜಿಲ್ಲೆಯ ವಿವಿಧೆಡೆ ಮಾದಕ ವಸ್ತು ಸರಬರಾಜು, ಮಾರಾಟ ಮತ್ತು ಬಳಕೆಯ ವಿರುದ್ದ ಸಮರ ಸಾರಿರುವ ಪೊಲೀಸ್ ಇಲಾಖೆ ಈಗಾಗಲೇ ಹಲವು ಕಾರ್ಯಾಚರಣೆ ನಡೆಸಿ ಈ ದಂಧೆಯಲ್ಲಿ ತೊಡಗಿರುವವರ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ನಡೆಗೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ.
ಈ ನಡುವೆ ವ್ಯಕ್ತಿಯೊಬ್ಬ ಕಾರಾಗೃಹದಲ್ಲಿ
ವಿಚಾರಣಾ ಬಂಧಿಯನ್ನು ನೋಡುವ ನೆಪದಲ್ಲಿ ಬಂದು ನಿಷೇಧಿತ ಮಾದಕ ವಸ್ತುವನ್ನು ಸರಬರಾಜು ಮಾಡಲು ಯತ್ನಿಸಿ ತಗಲಾಕಿಕೊಂಡು ಕೈಗೆ ಕೋಳ ಹಾಕಿಸಿಕೊಂಡಿದ್ದಾನೆ.
*ಪ್ರಕರಣದ ವಿವರ*
ದಿನಾಂಕ 04-03-2025 ರಂದು ಕಣ್ಣೂರು ಜಿಲ್ಲೆ ತಲಚೇರಿ ಮೂಲದ ಸುರಬೀಲ್ (26) ಎಂಬಾತ ಮಡಿಕೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾ ಬಂಧಿಯಾಗಿರುವ ಸನಮ್ ಎಂಬುವವನ ಸಹೋದರ ಎಂದು ಹೇಳಿಕೊಂಡು ಆತನ ಸಂದರ್ಶನಕ್ಕಾಗಿ ಬಂದಿದ್ದ.
ಹಾಗೇ ಬರುವಾಗ ಸನಮ್ ಗಾಗಿ ದಿನನಿತ್ಯ ಬಳಕೆಯ ಸಾಮಾಗ್ರಿಗಳಾದ ಟೂತ್ ಪೇಸ್ಟ್, ಟೂತ್ ಬ್ರಷ್, ಮೆಡಿಮಿಕ್ಸ್ ಸೋಪ್, ಡಕ್ಟಾರ್ ವಾಶರ್ ಬಟ್ಟೆ ಸೋಪ್, ನವರತ್ನ ಆಯಿಲ್ ಮತ್ತು ಕಾರ್ತಿಕಾ ಶ್ಯಾಂಪ್ ಗಳನ್ನು ತಂದಿದ್ದ.
ಆದರೆ, ಇವುಗಳನ್ನು ಸನಮ್ ಗೆ ನೀಡುವ ಮೊದಲು ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ಪರಿಶೀಲಿದಾಗ ಟೂತ್ ಪೇಸ್ಟ್ ಟ್ಯೂಬ್ ನ ಒಳಗೆ ಟೂತ್ ಪೇಸ್ಟ್ ನ ಬದಲು ಕಪ್ಪು ಬಣ್ಣದ ಅಮಲು ಪದಾರ್ಥವನ್ನು ತುಂಬಿರುವುದು ಪತ್ತೆ ಆಗಿದೆ.
ಹೀಗಾಗಿ, ಈತನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾರಾಗೃಹ ಅಧೀಕ್ಷಕರಾದ ಸಂಜಯ್ ಜತ್ತಿ ಅವರು ದೂರು ನೀಡಿದ ಮೇರೆಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 20(b)(ii) (A) NDPS ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ 24 ಗ್ರಾಂ ಹ್ಯಾಶಿಶ್ ನಿಷೇಧಿತ ಮಾದಕ ವಸ್ತುವಿನೊಂದಿಗೆ ಆರೋಪಿ ಸುರಬೀಲ್ ನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…