
ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ..
ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ ಬೇಡಿಕೆ ಇಟ್ಟಿದ್ದ ಹಿನ್ನೆಲೆ, ಹಳಿಯಾಳ ಸಬ್ ಜೈಲಿನ ಜೈಲರ್ ಕಲ್ಲಪ್ಪ ಗಸ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಜೈಲಿನಲ್ಲಿ ಕೆಲಸ ಮಾಡಿದ್ದ ರಾಜ್ ಕುಮಾರ್ ಗೆ ಸರ್ಕಾರದಿಂದ 1.75 ಲಕ್ಷ ಬಿಡುಗಡೆಯಾಗಿತ್ತು, ಸರ್ಕಾರ ಕೈದಿಗೆ ಮಂಜೂರಿ ಮಾಡಿದ್ದ ಹಣ ನೀಡಲು ಲಂಚದ ಬೇಡಿಕೆ ಇಟ್ಟಿದ್ದ ಜೈಲರ್ ಕಲ್ಲಪ್ಪ ಗಸ್ತಿ. ಕೈದಿ ರಾಜಕುಮಾರ್ ನಿಂದ 60 ಸಾವಿರ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 10 ಸಾವಿರ ಫೋನ್ ಪೇ ಮೂಲಕ ಹಣ ಪಡೆಯಲಾಗಿತ್ತು.
ಈ ಹಿನ್ನೆಲೆ ಕಾರವಾರ ಲೋಕಾಯುಕ್ತ ಡಿ.ಎಸ್ಪಿ ಧನ್ಯಾ ನಾಯಕ್ ಹಾಗೂ ಇನ್ಸ್ ಪೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ದಾಳಿ ನಡೆಸಿ ಕಲ್ಲಪ್ಪ ಗಸ್ತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ…