ಜೈವಿಕ ಇಂಧನವನ್ನು “ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ” ಸೇರಿಸಲು ಕ್ರಮ: ಎಸ್‌.ಈ.ಸುಧೀಂದ್ರ

ಬೆಂಗಳೂರು: ಪರಿಸರ ಸ್ನೇಹಿ ಜೈವಿಕ ಇಂಧನವನ್ನು “ಮಾಲಿನ್ಯಕಾರಕವಲ್ಲ ಇಂಧನದ ಗುಂಪಿಗೆ (ವೈಟ್‌ಕ್ಯಾಟಗರಿ) ಸೇರ್ಪಡೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್‌.ಈ. ಸುಧೀಂದ್ರ ಹೇಳಿದರು.

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ವತಿಯಿಂದ “ಜೈವಿಕ ಇಂಧನ ನೀತಿ ನಿರೂಪಣೆಯಲ್ಲಿನ ಬದಲಾವಣೆ ಹಾಗೂ ನಿಲುವುಗಳ ಕುರಿತು ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂವಾದದ ವೇಳೆ ಜೈವಿಕ ಇಂಧನವನ್ನು ರಾಜ್ಯದಲ್ಲಿ ಮಾಲಿನ್ಯಕಾರಕವಲ್ಲದ ಇಂಧನ (ವೈಟ್‌ ಕ್ಯಾಟಗರಿ)ಗೆ ಸೇರ್ಪಡೆ ಮಾಡುವ ಕುರಿತು ಸಂವಾದಕರೊಬ್ಬರು ಪ್ರಸ್ತಾಪಿಸಿದರು.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಈಗಾಗಲೇ ಎಲ್ಲಾ ಮಾದರಿಯ ಜೈವಿಕ ಇಂಧವನ್ನು ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ ಸೇರಿಸಿದೆ, ರಾಜ್ಯದಲ್ಲೂ ಈ ಕೆಲಸ ಆಗಬೇಕು ಎಂದು ಪ್ರಸ್ತಾಪಿಸಿದರು, ಪ್ರಸ್ತುತದಲ್ಲಿ ಜೈವಿಕ ಇಂಧನ ಬಳಕೆ ಮಾಡುವವರ ಸಂಖ್ಯೆ ಹೆಚ್ಚಿಸಬೇಕು ಎಂಬುದು ಅನಿವಾರ್ಯ ಹೀಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನೂ ಸಂವಾದನಕ್ಕೆ ಆಹ್ವಾನಿಸಿ, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆವು. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರು, ಕ್ರಮ ಕೈಗೊಳ್ಳುವ ಬಗ್ಗೆ ಆಶ್ವಾಸನೆ ನೀಡಿದರು.

ಇನ್ನು, ರಾಜ್ಯದಲ್ಲಿ ಜೈವಿಕ ಇಂಧನ ಉತ್ಪಾದನಾ ಘಟಕ ಆರಂಭಕ್ಕೆ ವಿಫುಲ ಅವಕಾಶಗಳಿದ್ದು, ಹೂಡಿಕೆದಾರರು ಮುಂದೆ ಬರಬೇಕು. ನಮ್ಮಲ್ಲಿ ಮೂಲಸೌಕರ್ಯ, ತೆರಿಗೆ ಪದ್ಧತಿ, ಕಚ್ಛಾವಸ್ತುಗಳ ಲಭ್ಯತೆ, ನೇಪಿಯರ್‌ ಗ್ರಾಸ್‌, ಕೃಷಿ ತ್ಯಾಜ್ಯ ಸೇರಿದಂತೆ ಜೈವಿಕ ಇಂಧನ ಉತ್ಪಾದನೆಗೆ ಸಾಕಷ್ಟು ಪೂರಕ ವಾತಾವರಣವಿದ್ದು, ಹೂಡಿಕೆದಾರರಿಗೆ ರಾಜ್ಯ ಸೂಕ್ತ ಸ್ಥಳವಾಗಿದೆ ಎಂದು ಹೇಳಿದರು.

ಕ್ರಿಯಾಶೀಲ ಮಹಿಳಾ ಉದ್ಯಮಿಗಳೂ ಕೂಡ ಜೈವಿಕ ಇಂಧನ ಕ್ಷೇತ್ರದಲ್ಲಿ ಹೆಚ್ಚಿಚ್ಚು ತೊಡಗಿಕೊಳ್ಳಬೇಕು, ಈಗಾಗಲೇ ಎಲ್ಲಾ ಕ್ಷೇತ್ರದಲ್ಲಿ ತಮ್ಮ ಪಾತ್ರದ ಪ್ರಾಮುಖ್ಯತೆ ಎತ್ತಿ ಹಿಡಿದಿದ್ದಾರೆ, ಈ ಕ್ಷೇತ್ರವು ಮಹಿಳೆಯರು ಸಬಲೀಕರಣಗೊಳ್ಳಲು ಉತ್ತಮ ವೇದಿಕೆಯಾಗಲಿದೆ ಎಂದು ಆಹ್ವಾನಿಸಿದರು.

ಇನ್ನು, ಸಂವಾದದಲ್ಲಿ ಕೇಳಿ ಬಂದ ಪ್ರಶ್ನೆಗೆ ಉತ್ತರಿಸಿದ ಅಧ್ಯಕ್ಷರು, ಮಂಡಳಿಯು ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಎಲ್ಲಾ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವಂತೆ ಮಾಡಲು ಕಟಿಬದ್ಧವಾಗಿದ್ದು ಎಲ್ಲಾ ಕೈಗಾರಿಕಾ ಪ್ರತಿನಿಧಿಗಳು ನೀಡಿರುವ ಸಲಹೆಗಳನ್ನು ಕ್ರೂಢೀಕರಿಸಿ ಉದ್ದೇಶಿತ ಜೈವಿಕ ಇಂಧನ ನೀತಿಯಲ್ಲಿ ಅಳವಡಿಸಿಕೊಳ್ಳಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಇಂದಿನ ಕಾರ್ಯಕ್ರಮವು ಯಶಸ್ವಿಯಾಗಿ ಆಯೋಜನೆಯಾಗಿದ್ದು ಇದೇ ಸಂದರ್ಭದಲ್ಲಿ ಶುಭ ಕೋರುವ ವಿಶ್ವವಿದ್ಯಾನಿಲಯದೊಂದಿಗೆ ಜೈವಿಕ ಇಂಧನ ಕ್ಷೇತ್ರದಲ್ಲಿ ಕೈಜೋಡಿಸಲು ಶೀಘ್ರದಲ್ಲಿಯೇ ಒಡಂಬಡಿಕೆ ಮಾಡಿಕೊಳ್ಳಲು ಸಿದ್ಧತೆ ನಡೆದಿದ್ದು ಮುಂಬರುವ ದಿನಗಳಲ್ಲಿ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿಗೆ ವಿಶ್ವವಿದ್ಯಾಲಯಗಳು, ಕೃಷಿ ವಿಶ್ವವಿದ್ಯಾಲಯಗಳು, ತಾಂತ್ರಿಕ ಸಂಸ್ಥೆಗಳು, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಿರತರಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಸ್ಥೆಗಳು ಪ್ರಧಾನ ಪಾತ್ರ ವಹಿಸಲಿದ್ದು ಜೈವಿಕ ಇಂಧನ ಕ್ಷೇತ್ರದಲ್ಲಿ ಕೆಲವೇ ತಿಂಗಳಗಳಲ್ಲಿ ಮಹತ್ತರ ಬದಲಾವಣೆಯನ್ನು ತರಲು ಮುನ್ನುಡಿ ಬರೆದಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಂಡಳಿಯ ಲೋಹಿತ್ ಬಿ.ಆರ್. ತಾಂತ್ರಿಕ ಅಧಿಕಾರಿಗಳು, ಯೋಜನಾ ಸಲಹೆಗಾರರಾದ ಡಾ. ದಯಾನಂದ ಜಿ ಎನ್, ಅಧ್ಯಕ್ಷರ ಸಲಹೆಗಾರರಾದ, ನಿಮೇನ್ ದೀಪ್ ಸಿಂಗ್, ತಾಂತ್ರಿಕ ಸಲಹೆಗಾರರಾದ ಪ್ರಸಾದ್, ರಾಜೀವ್, ಸುಜಯ್ ಮಂಡಳಿಯ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

12 hours ago

ಇತಿಹಾಸ ಒಂದು ಪಾಠವಾಗಬೇಕೆ ಹೊರತು ರಾಜಕೀಯ ಅಸ್ತ್ರವಾಗಬಾರದು

ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…

14 hours ago

“ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಕಾರ್ಯಕ್ರಮದಲ್ಲಿ ಗಿಲ್ಲಿ ನಟ ಹವಾ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…

1 day ago

ಇಂದಿನಿಂದ “ದೊಡ್ಡಬಳ್ಳಾಪುರ ಸ್ಯಾರಿ ಸಂತೆ”- ಭರ್ಜರಿ ರೆಸ್ಪಾನ್ಸ್- ಸೀರೆ ಕೊಳ್ಳಲು ಮುಗಿಬಿದ್ದ ಜನ

ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ  "ದೊಡ್ಡಬಳ್ಳಾಪುರ…

1 day ago

ಕೋಲಾರಮ್ಮ ಜಿಲ್ಲಾ ಕೋಳಿ ಸಾಕಾಣಿಕೆದಾರರ ಮತ್ತು ಮಾರಾಟಗಾರರ ಸಹಕಾರ ಸಂಘದ ಜಿಲ್ಲಾ ಸಮ್ಮೇಳನ

ಕೋಲಾರ: ರೈತರು ಕಂಪನಿಯೊಂದಿಗೆ (ಇಂಟಿಗ್ರೇಟೆಡ್) ಒಪ್ಪಂದ ಮಾಡಿಕೊಂಡು ಕೋಳಿ ಸಾಕುವ ಪದ್ದತಿಯಿಂದಾಗಿ ಕಾರ್ಪೊರೇಟ್ ಸಂಸ್ಥೆಗಳಿಂದ ನಿರಂತರವಾಗಿ ಶೋಷಣೆ ನಡೆಯುತ್ತಿದೆ ಸರ್ಕಾರವು…

1 day ago

ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಬಾಣಂತಿ ಹಾಗೂ ನವಜಾತ ಗಂಡು ಮಗುವಿನ ಸಾ*ವು..!

ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬಾಣಂತಿ ಹಾಗೂ ಹಸುಗೂಸು ಸಾ*ವಾಗಿದೆ, ಇದಕ್ಕೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪ‌‌ ಮಾಡಿದ್ದಾರೆ.…

1 day ago