ಜೈವಿಕ ಇಂಧನವನ್ನು “ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ” ಸೇರಿಸಲು ಕ್ರಮ: ಎಸ್‌.ಈ.ಸುಧೀಂದ್ರ

ಬೆಂಗಳೂರು: ಪರಿಸರ ಸ್ನೇಹಿ ಜೈವಿಕ ಇಂಧನವನ್ನು “ಮಾಲಿನ್ಯಕಾರಕವಲ್ಲ ಇಂಧನದ ಗುಂಪಿಗೆ (ವೈಟ್‌ಕ್ಯಾಟಗರಿ) ಸೇರ್ಪಡೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್‌.ಈ. ಸುಧೀಂದ್ರ ಹೇಳಿದರು.

ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ವತಿಯಿಂದ “ಜೈವಿಕ ಇಂಧನ ನೀತಿ ನಿರೂಪಣೆಯಲ್ಲಿನ ಬದಲಾವಣೆ ಹಾಗೂ ನಿಲುವುಗಳ ಕುರಿತು ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂವಾದದ ವೇಳೆ ಜೈವಿಕ ಇಂಧನವನ್ನು ರಾಜ್ಯದಲ್ಲಿ ಮಾಲಿನ್ಯಕಾರಕವಲ್ಲದ ಇಂಧನ (ವೈಟ್‌ ಕ್ಯಾಟಗರಿ)ಗೆ ಸೇರ್ಪಡೆ ಮಾಡುವ ಕುರಿತು ಸಂವಾದಕರೊಬ್ಬರು ಪ್ರಸ್ತಾಪಿಸಿದರು.

ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಈಗಾಗಲೇ ಎಲ್ಲಾ ಮಾದರಿಯ ಜೈವಿಕ ಇಂಧವನ್ನು ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ ಸೇರಿಸಿದೆ, ರಾಜ್ಯದಲ್ಲೂ ಈ ಕೆಲಸ ಆಗಬೇಕು ಎಂದು ಪ್ರಸ್ತಾಪಿಸಿದರು, ಪ್ರಸ್ತುತದಲ್ಲಿ ಜೈವಿಕ ಇಂಧನ ಬಳಕೆ ಮಾಡುವವರ ಸಂಖ್ಯೆ ಹೆಚ್ಚಿಸಬೇಕು ಎಂಬುದು ಅನಿವಾರ್ಯ ಹೀಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನೂ ಸಂವಾದನಕ್ಕೆ ಆಹ್ವಾನಿಸಿ, ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆವು. ಇದಕ್ಕೆ ಸ್ಪಂದಿಸಿದ ಅಧ್ಯಕ್ಷರು, ಕ್ರಮ ಕೈಗೊಳ್ಳುವ ಬಗ್ಗೆ ಆಶ್ವಾಸನೆ ನೀಡಿದರು.

ಇನ್ನು, ರಾಜ್ಯದಲ್ಲಿ ಜೈವಿಕ ಇಂಧನ ಉತ್ಪಾದನಾ ಘಟಕ ಆರಂಭಕ್ಕೆ ವಿಫುಲ ಅವಕಾಶಗಳಿದ್ದು, ಹೂಡಿಕೆದಾರರು ಮುಂದೆ ಬರಬೇಕು. ನಮ್ಮಲ್ಲಿ ಮೂಲಸೌಕರ್ಯ, ತೆರಿಗೆ ಪದ್ಧತಿ, ಕಚ್ಛಾವಸ್ತುಗಳ ಲಭ್ಯತೆ, ನೇಪಿಯರ್‌ ಗ್ರಾಸ್‌, ಕೃಷಿ ತ್ಯಾಜ್ಯ ಸೇರಿದಂತೆ ಜೈವಿಕ ಇಂಧನ ಉತ್ಪಾದನೆಗೆ ಸಾಕಷ್ಟು ಪೂರಕ ವಾತಾವರಣವಿದ್ದು, ಹೂಡಿಕೆದಾರರಿಗೆ ರಾಜ್ಯ ಸೂಕ್ತ ಸ್ಥಳವಾಗಿದೆ ಎಂದು ಹೇಳಿದರು.

ಕ್ರಿಯಾಶೀಲ ಮಹಿಳಾ ಉದ್ಯಮಿಗಳೂ ಕೂಡ ಜೈವಿಕ ಇಂಧನ ಕ್ಷೇತ್ರದಲ್ಲಿ ಹೆಚ್ಚಿಚ್ಚು ತೊಡಗಿಕೊಳ್ಳಬೇಕು, ಈಗಾಗಲೇ ಎಲ್ಲಾ ಕ್ಷೇತ್ರದಲ್ಲಿ ತಮ್ಮ ಪಾತ್ರದ ಪ್ರಾಮುಖ್ಯತೆ ಎತ್ತಿ ಹಿಡಿದಿದ್ದಾರೆ, ಈ ಕ್ಷೇತ್ರವು ಮಹಿಳೆಯರು ಸಬಲೀಕರಣಗೊಳ್ಳಲು ಉತ್ತಮ ವೇದಿಕೆಯಾಗಲಿದೆ ಎಂದು ಆಹ್ವಾನಿಸಿದರು.

ಇನ್ನು, ಸಂವಾದದಲ್ಲಿ ಕೇಳಿ ಬಂದ ಪ್ರಶ್ನೆಗೆ ಉತ್ತರಿಸಿದ ಅಧ್ಯಕ್ಷರು, ಮಂಡಳಿಯು ರಾಜ್ಯದಲ್ಲಿ ಜೈವಿಕ ಇಂಧನ ಕ್ಷೇತ್ರದಲ್ಲಿ ಎಲ್ಲಾ ವಿಭಾಗಗಳಲ್ಲಿ ಮೊದಲ ಸ್ಥಾನದಲ್ಲಿ ನಿಲ್ಲುವಂತೆ ಮಾಡಲು ಕಟಿಬದ್ಧವಾಗಿದ್ದು ಎಲ್ಲಾ ಕೈಗಾರಿಕಾ ಪ್ರತಿನಿಧಿಗಳು ನೀಡಿರುವ ಸಲಹೆಗಳನ್ನು ಕ್ರೂಢೀಕರಿಸಿ ಉದ್ದೇಶಿತ ಜೈವಿಕ ಇಂಧನ ನೀತಿಯಲ್ಲಿ ಅಳವಡಿಸಿಕೊಳ್ಳಲು ಶ್ರಮಿಸುವುದಾಗಿ ಭರವಸೆ ನೀಡಿದರು.

ಇಂದಿನ ಕಾರ್ಯಕ್ರಮವು ಯಶಸ್ವಿಯಾಗಿ ಆಯೋಜನೆಯಾಗಿದ್ದು ಇದೇ ಸಂದರ್ಭದಲ್ಲಿ ಶುಭ ಕೋರುವ ವಿಶ್ವವಿದ್ಯಾನಿಲಯದೊಂದಿಗೆ ಜೈವಿಕ ಇಂಧನ ಕ್ಷೇತ್ರದಲ್ಲಿ ಕೈಜೋಡಿಸಲು ಶೀಘ್ರದಲ್ಲಿಯೇ ಒಡಂಬಡಿಕೆ ಮಾಡಿಕೊಳ್ಳಲು ಸಿದ್ಧತೆ ನಡೆದಿದ್ದು ಮುಂಬರುವ ದಿನಗಳಲ್ಲಿ ಜೈವಿಕ ಇಂಧನ ಕ್ಷೇತ್ರದ ಅಭಿವೃದ್ಧಿಗೆ ವಿಶ್ವವಿದ್ಯಾಲಯಗಳು, ಕೃಷಿ ವಿಶ್ವವಿದ್ಯಾಲಯಗಳು, ತಾಂತ್ರಿಕ ಸಂಸ್ಥೆಗಳು, ಸಂಶೋಧನೆ ಮತ್ತು ಅಭಿವೃದ್ಧಿಯಲ್ಲಿ ನಿರತರಾಗಿರುವ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಂಸ್ಥೆಗಳು ಪ್ರಧಾನ ಪಾತ್ರ ವಹಿಸಲಿದ್ದು ಜೈವಿಕ ಇಂಧನ ಕ್ಷೇತ್ರದಲ್ಲಿ ಕೆಲವೇ ತಿಂಗಳಗಳಲ್ಲಿ ಮಹತ್ತರ ಬದಲಾವಣೆಯನ್ನು ತರಲು ಮುನ್ನುಡಿ ಬರೆದಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಮಂಡಳಿಯ ಲೋಹಿತ್ ಬಿ.ಆರ್. ತಾಂತ್ರಿಕ ಅಧಿಕಾರಿಗಳು, ಯೋಜನಾ ಸಲಹೆಗಾರರಾದ ಡಾ. ದಯಾನಂದ ಜಿ ಎನ್, ಅಧ್ಯಕ್ಷರ ಸಲಹೆಗಾರರಾದ, ನಿಮೇನ್ ದೀಪ್ ಸಿಂಗ್, ತಾಂತ್ರಿಕ ಸಲಹೆಗಾರರಾದ ಪ್ರಸಾದ್, ರಾಜೀವ್, ಸುಜಯ್ ಮಂಡಳಿಯ ಅಧಿಕಾರಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು…

ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…

21 minutes ago

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗ ತುಳಿದು ದೌರ್ಜನ್ಯ: ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವು: ವ್ಯಕ್ತಿ ಬಂಧನ

ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…

12 hours ago

ಮೇ.5ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್‌ಗಳಲ್ಲಿ ವಿದ್ಯುತ್…

18 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

1 day ago

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

1 day ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

1 day ago