ಕೋಲಾರ: ರಾಜ್ಯದ ರಕ್ಷಣೆ ಹಾಗೂ ಕನ್ನಡ ಬಳಕೆಯಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖವಾಗಿದ್ದು ಅವರ ಸೇವೆಗೆ ನಾಡಿನ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರವೇ ಕನ್ನಡ ಉಳಿಯಲು ಸಾಧ್ಯವಾಗುತ್ತದೆ ಎಂದು ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಡೂಂ ಲೈಟ್ ವೃತ್ತದಲ್ಲಿ ಶುಕ್ರವಾರ ಜೈ ಕೋಲಾರಮ್ಮ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು ಆಟೋ ಚಾಲಕರು ಕನ್ನಡತನವನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ನಾಡು, ನುಡಿ ಉಳಿವಿನ ಹಿಂದೆ ಆಟೋ ಚಾಲಕರ ಶ್ರಮ ಅಧಿಕವಾಗಿದೆ ಇವರು ನಿತ್ಯ ಕನ್ನಡ ಬಳಕೆ ಮಾಡುವುದರ ಜತೆಗೆ ಕನ್ನಡವನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಚಿತ್ರನಟರು ಸೇರಿದಂತೆ ಸಾಹಿತಿಗಳು ಕನ್ನಡ ಭಾಷಾ ಬೆಳವಣಿಗೆಗಾಗಿ ತೊಡಗಿಸಿಕೊಂಡರೆ, ಆಟೋಚಾಲಕರು ನಿತ್ಯ ಜೀವನದಲ್ಲಿ ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಇದ್ದಾರೆ ಆಟೊ ಚಾಲಕರು ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವುದಲ್ಲದೇ ಸದಾ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಗೌರವ ನೀಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ತ್ಯಾಗರಾಜ್, ದಿಶಾ ಸಮಿತಿ ಮಾಜಿ ಸದಸ್ಯರಾದ ಸಾ.ಮಾ ಬಾಬು, ಅಪ್ಪಿ ನಾರಾಯಣಸ್ವಾಮಿ, ಮುಖಂಡರಾದ ನಾಮಲ್ ಮಂಜು, ಸಂಘದ ಅಧ್ಯಕ್ಷ ರಮೇಶ್, ಆಟೋ ಚಾಲಕರಾದ ಸ್ವಾಮಿ, ಮಂಜುನಾಥ್, ಮುನಿರೆಡ್ಡಿ ಮುಂತಾದವರು ಇದ್ದರು
ಆಶಾ ಭೋಸ್ಲೆ..... ಸಂಗೀತ ಎಂಬ ಮಾಂತ್ರಿಕ ಮತ್ತು ಭಾವನಾತ್ಮಕ ಹಾಗೂ ಭ್ರಮಾತ್ಮಕ ಶಕ್ತಿಯ ಉತ್ತುಂಗ ಧ್ವನಿಯೊಂದು ನಮ್ಮನ್ನಗಲಿದ ಸಂದರ್ಭದಲ್ಲಿ...... ಶಬ್ದ…
Effektives Schreiben von Hausarbeiten Das Schreiben von Hausarbeiten kann für viele Studierende eine große Herausforderung…
ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…
ಹೆಣ್ಣಿನ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…
ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ 14 ) ಅವರ ವ್ಯಕ್ತಿತ್ವ ಮತ್ತು…
In der heutigen akademischen Welt steht die Qualität der schriftlichen Arbeiten im Mittelpunkt des Interesses.…