Categories: ಕೋಲಾರ

ಜೈ ಕೋಲಾರಮ್ಮ ಆಟೋ ನಿಲ್ದಾಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಕೋಲಾರ: ರಾಜ್ಯದ ರಕ್ಷಣೆ ಹಾಗೂ ಕನ್ನಡ ಬಳಕೆಯಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖವಾಗಿದ್ದು ಅವರ ಸೇವೆಗೆ ನಾಡಿನ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರವೇ ಕನ್ನಡ ಉಳಿಯಲು ಸಾಧ್ಯವಾಗುತ್ತದೆ ಎಂದು ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ನಗರದ ಡೂಂ ಲೈಟ್ ವೃತ್ತದಲ್ಲಿ ಶುಕ್ರವಾರ ಜೈ ಕೋಲಾರಮ್ಮ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು ಆಟೋ ಚಾಲಕರು ಕನ್ನಡತನವನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ನಾಡು, ನುಡಿ ಉಳಿವಿನ ಹಿಂದೆ ಆಟೋ ಚಾಲಕರ ಶ್ರಮ ಅಧಿಕವಾಗಿದೆ ಇವರು ನಿತ್ಯ ಕನ್ನಡ ಬಳಕೆ ಮಾಡುವುದರ ಜತೆಗೆ ಕನ್ನಡವನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಚಿತ್ರನಟರು ಸೇರಿದಂತೆ ಸಾಹಿತಿಗಳು ಕನ್ನಡ ಭಾಷಾ ಬೆಳವಣಿಗೆಗಾಗಿ ತೊಡಗಿಸಿಕೊಂಡರೆ, ಆಟೋಚಾಲಕರು ನಿತ್ಯ ಜೀವನದಲ್ಲಿ ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಇದ್ದಾರೆ ಆಟೊ ಚಾಲಕರು ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವುದಲ್ಲದೇ ಸದಾ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಗೌರವ ನೀಡುತ್ತಾರೆ ಎಂದರು.

ಈ ಸಂದರ್ಭದಲ್ಲಿ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ತ್ಯಾಗರಾಜ್, ದಿಶಾ ಸಮಿತಿ ಮಾಜಿ ಸದಸ್ಯರಾದ ಸಾ.ಮಾ ಬಾಬು, ಅಪ್ಪಿ ನಾರಾಯಣಸ್ವಾಮಿ, ಮುಖಂಡರಾದ ನಾಮಲ್ ಮಂಜು, ಸಂಘದ ಅಧ್ಯಕ್ಷ ರಮೇಶ್, ಆಟೋ ಚಾಲಕರಾದ ಸ್ವಾಮಿ, ಮಂಜುನಾಥ್, ಮುನಿರೆಡ್ಡಿ ಮುಂತಾದವರು ಇದ್ದರು

Ramesh Babu

Journalist

Recent Posts

ಯುಗಾದಿ…..

ವಿಶ್ವ ಮಹಾಯುದ್ಧದ ಕಾರ್ಮೋಡಗಳ ನಡುವೆ, ಅತ್ಯಂತ ಅಗತ್ಯದ ಗ್ಯಾಸ್ ಸಿಲಿಂಡರ್ಗಳ ಅಭಾವದ ನಡುವೆ, ಪ್ರಕ್ಷ್ಯುಬ್ಧ ಮನಸ್ಥಿತಿಯ ನಡುವೆ, ಸಂಭ್ರಮದ ಹೊಸ…

6 minutes ago

ಯುವ ಆಪದ್ ಮಿತ್ರ ಯೋಜನೆ: ವಿಪತ್ತು ನಿರ್ವಹಣೆ ಕುರಿತು ಒಂದು ವಾರ ತರಬೇತಿ ಶಿಬಿರ

ಯುವ ಆಪದ್ ಮಿತ್ರ ಯೋಜನೆಯ ಅಂಗವಾಗಿ ಕಾಲೇಜಿನ ವಿದ್ಯಾರ್ಥಿಗಳು ದೊಡ್ಡಬಳ್ಳಾಪುರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ತರಬೇತಿ ಮತ್ತು…

11 hours ago

ಮಹಿಳೆಯರನ್ನು ಮಂಚಕ್ಕೆ ಕರೆದ ಆರೋಪ: ಮೂಡುಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅಮಾನತು

ಪೊಲೀಸ್ ಠಾಣೆಗೆ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದೂರು ಕೊಡಲು ಬಂದ ಮಹಿಳೆಯರನ್ನು ಮಂಚಕ್ಕೆ ಕರೆಯುತ್ತಾರೆ ಎಂಬ ಆರೋಪದ ಮೇರೆಗೆ ಮೂಡುಬಿದಿರೆ…

11 hours ago

ಮುಂಗಾರು ಪೂರ್ವ ಮಳೆ: ಮಳೆಯಲ್ಲಿ ಸಾಲುಗಟ್ಟಿ ನಿಂತ ರಾಗಿ‌ ಮಾರಾಟ ಮಾಡಲು ಬಂದ ಟ್ರ್ಯಾಕ್ಟರ್ ಗಳು

ಇಂದು ಸಂಜೆ ಸುಮಾರು 4:30ರಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಪ್ರಾರಂಭವಾದ ಮಳೆಯು ಸತತವಾಗಿ 7ಗಂಟೆಯವರೆಗೆ ಬಿದ್ದಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿತು. ಅದೇರೀತಿ…

12 hours ago

ರಣ ಬಿಸಿಲಿನಿಂದ ಕಂಗೆಟ್ಟಿದ್ದ ಜನ: ಧರೆಗಿಳಿದ ವರ್ಷದ ಮೊದಲ ಮಳೆ: ಬಿಸಿಲಿನ ಬೇಗೆಗೆ ಬೆಂದಿದ್ದ ಭೂಮಿ ತಂಪು ತಂಪು: ಗುಡುಗು ಸಹಿತ ಬಿದ್ದ ಮಳೆ ಹನಿಗೆ ಜನ ಫುಲ್ ಖುಷ್

ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು. ಬಂಗಾಳ…

13 hours ago

ನಾಳೆ (ಮಾ.18) ಎಸ್.ಎಸ್.ಎಲ್.ಸಿ ಪರೀಕ್ಷೆ -01: ಬೆಂ. ಗ್ರಾ ಜಿಲ್ಲೆಯಲ್ಲಿ 14,314 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಮಾರ್ಚ್ 18 ಬುಧವಾರದಿಂದ ಏಪ್ರಿಲ್ 02 ಗುರುವಾರದ ವರೆಗೆ ಬೆಳಿಗ್ಗೆ 10:15 ಗಂಟೆಯಿಂದ ಮಧ್ಯಾಹ್ನ…

15 hours ago