ಕೋಲಾರ: ರಾಜ್ಯದ ರಕ್ಷಣೆ ಹಾಗೂ ಕನ್ನಡ ಬಳಕೆಯಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖವಾಗಿದ್ದು ಅವರ ಸೇವೆಗೆ ನಾಡಿನ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರವೇ ಕನ್ನಡ ಉಳಿಯಲು ಸಾಧ್ಯವಾಗುತ್ತದೆ ಎಂದು ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಡೂಂ ಲೈಟ್ ವೃತ್ತದಲ್ಲಿ ಶುಕ್ರವಾರ ಜೈ ಕೋಲಾರಮ್ಮ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು ಆಟೋ ಚಾಲಕರು ಕನ್ನಡತನವನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ನಾಡು, ನುಡಿ ಉಳಿವಿನ ಹಿಂದೆ ಆಟೋ ಚಾಲಕರ ಶ್ರಮ ಅಧಿಕವಾಗಿದೆ ಇವರು ನಿತ್ಯ ಕನ್ನಡ ಬಳಕೆ ಮಾಡುವುದರ ಜತೆಗೆ ಕನ್ನಡವನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಚಿತ್ರನಟರು ಸೇರಿದಂತೆ ಸಾಹಿತಿಗಳು ಕನ್ನಡ ಭಾಷಾ ಬೆಳವಣಿಗೆಗಾಗಿ ತೊಡಗಿಸಿಕೊಂಡರೆ, ಆಟೋಚಾಲಕರು ನಿತ್ಯ ಜೀವನದಲ್ಲಿ ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಇದ್ದಾರೆ ಆಟೊ ಚಾಲಕರು ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವುದಲ್ಲದೇ ಸದಾ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಗೌರವ ನೀಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ತ್ಯಾಗರಾಜ್, ದಿಶಾ ಸಮಿತಿ ಮಾಜಿ ಸದಸ್ಯರಾದ ಸಾ.ಮಾ ಬಾಬು, ಅಪ್ಪಿ ನಾರಾಯಣಸ್ವಾಮಿ, ಮುಖಂಡರಾದ ನಾಮಲ್ ಮಂಜು, ಸಂಘದ ಅಧ್ಯಕ್ಷ ರಮೇಶ್, ಆಟೋ ಚಾಲಕರಾದ ಸ್ವಾಮಿ, ಮಂಜುನಾಥ್, ಮುನಿರೆಡ್ಡಿ ಮುಂತಾದವರು ಇದ್ದರು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಮೇಲಿನ ಶೋಷಣೆ, ದೌರ್ಜನ್ಯಗಳನ್ನು ಆಯೋಗವು ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿದೆ ಎಂದು ಕರ್ನಾಟಕ…
ಉನ್ನಾವೋ........ ಉನ್ನಾವೋ ಅತ್ಯಾಚಾರ, ಕುಲದೀಪ್ ಸಿಂಗ್ ಸೇಂಗರ್, ದೆಹಲಿ ಹೈಕೋರ್ಟ್ ಜಾಮೀನು ತೀರ್ಪು, ಭಾರತ ನ್ಯಾಯಾಂಗ ವ್ಯವಸ್ಥೆಯ ಕಾರ್ಯ…
ಡ್ರಿಂಕ್ & ಡ್ರೈವ್ ಪ್ರಕರಣ ಪರಿಶೀಲನೆ ವೇಳೆ ಕಾರಿನಲ್ಲಿದ್ದ ಮೂವರು ವ್ಯಕ್ತಿಗಳು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿರುವ ಘಟನೆ ಬೆಂಗಳೂರು…
ಕಾಳು ಮಾತ್ರೆ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಸುಮಾರು 2 ಗಂಟೆಯಲ್ಲಿ ದೊಡ್ಡಬಳ್ಳಾಪುರ ಹೊರಹೊಲಯದಲ್ಲಿರುವ ಹೊಸಹುಡ್ಯ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಇನ್ ಸ್ಪೆಕ್ಟರ್ ಸಾಧಿಕ್ ಪಾಷಾ ನೇತೃತ್ವದಲ್ಲಿ ಗ್ರಾಮಾಂತರ ಠಾಣಯಲ್ಲಿ ಜ್ಯೂಯಲರಿ ಶಾಪ್ ಮಾಲೀಕರುಗಳಿಗೆ, ಜ್ಯೂಯಲರಿ…
ಹೊಸ ವರ್ಷದ ಸ್ವಾಗತಕ್ಕೆ ಇಡೀ ರಾಜ್ಯವೇ ಸಜ್ಜಾಗುತ್ತಿದೆ. ಇತ್ತ ಹೊಸ ವರ್ಷದ ಆಚರಣೆ ನೆಪದಲ್ಲಿ ನಡೆಯುವ ಮೋಜು-ಮಸ್ತಿ, ಅನಾಹುತ ತಪ್ಪಿಸಿ,…