Categories: ಕೋಲಾರ

ಜೈ ಕೋಲಾರಮ್ಮ ಆಟೋ ನಿಲ್ದಾಣದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ

ಕೋಲಾರ: ರಾಜ್ಯದ ರಕ್ಷಣೆ ಹಾಗೂ ಕನ್ನಡ ಬಳಕೆಯಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖವಾಗಿದ್ದು ಅವರ ಸೇವೆಗೆ ನಾಡಿನ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರವೇ ಕನ್ನಡ ಉಳಿಯಲು ಸಾಧ್ಯವಾಗುತ್ತದೆ ಎಂದು ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.

ನಗರದ ಡೂಂ ಲೈಟ್ ವೃತ್ತದಲ್ಲಿ ಶುಕ್ರವಾರ ಜೈ ಕೋಲಾರಮ್ಮ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು ಆಟೋ ಚಾಲಕರು ಕನ್ನಡತನವನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ನಾಡು, ನುಡಿ ಉಳಿವಿನ ಹಿಂದೆ ಆಟೋ ಚಾಲಕರ ಶ್ರಮ ಅಧಿಕವಾಗಿದೆ ಇವರು ನಿತ್ಯ ಕನ್ನಡ ಬಳಕೆ ಮಾಡುವುದರ ಜತೆಗೆ ಕನ್ನಡವನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದರು.

ರಾಜ್ಯದಲ್ಲಿ ಚಿತ್ರನಟರು ಸೇರಿದಂತೆ ಸಾಹಿತಿಗಳು ಕನ್ನಡ ಭಾಷಾ ಬೆಳವಣಿಗೆಗಾಗಿ ತೊಡಗಿಸಿಕೊಂಡರೆ, ಆಟೋಚಾಲಕರು ನಿತ್ಯ ಜೀವನದಲ್ಲಿ ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಇದ್ದಾರೆ ಆಟೊ ಚಾಲಕರು ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವುದಲ್ಲದೇ ಸದಾ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಗೌರವ ನೀಡುತ್ತಾರೆ ಎಂದರು.

ಈ ಸಂದರ್ಭದಲ್ಲಿ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ತ್ಯಾಗರಾಜ್, ದಿಶಾ ಸಮಿತಿ ಮಾಜಿ ಸದಸ್ಯರಾದ ಸಾ.ಮಾ ಬಾಬು, ಅಪ್ಪಿ ನಾರಾಯಣಸ್ವಾಮಿ, ಮುಖಂಡರಾದ ನಾಮಲ್ ಮಂಜು, ಸಂಘದ ಅಧ್ಯಕ್ಷ ರಮೇಶ್, ಆಟೋ ಚಾಲಕರಾದ ಸ್ವಾಮಿ, ಮಂಜುನಾಥ್, ಮುನಿರೆಡ್ಡಿ ಮುಂತಾದವರು ಇದ್ದರು

Ramesh Babu

Journalist

Recent Posts

ಲೋಕಸೇವಾನಿರತ ಡಿ. ಕೊಂಗಾಡಿಯಪ್ಪ ದೊಡ್ಡಬಳ್ಳಾಪುರ ನಗರದ ಸಮಗ್ರ ಅಭಿವೃದ್ಧಿಯ ಹರಿಕಾರ- ಡಿ.ಪಿ.ಆಂಜನೇಯ

ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ತಮ್ಮ ಸೇವಾ ಮನೋಭಾವದಿಂದ ಸರ್ವಜನ ಮಾನ್ಯರಾಗಿದ್ದರು ಎಂದು ಕನ್ನಡ ಜಾಗೃತ ಪರಿಷತ್ತು…

60 minutes ago

ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ‘ಅನ್ನಭಾಗ್ಯ’ ಯೋಜನೆಯ ಅಕ್ಕಿ ಜಪ್ತಿ

ಕುಮಟಾ: ಬಡವರ ಹಸಿವು ನೀಗಿಸಲು ಸರ್ಕಾರ ನೀಡುವ 'ಅನ್ನಭಾಗ್ಯ' ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಗೋಡೌನ್ ಮೇಲೆ ಕುಮಟಾ ತಹಶೀಲ್ದಾರ್…

2 hours ago

ವಿರೋಧ ಲೆಕ್ಕಿಸದೆ ಪ್ರೀತಿಸಿ ಮದುವೆಯಾದ ಯುವತಿ…ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ…

ಮನೆಯವರ ವಿರೋಧ ಲೆಕ್ಕಿಸದೆ ಪ್ರೀತಿಸಿದ ಯುವಕನ ಮದುವೆ ಆದ ಹಿನ್ನಲೆ ಸಿಡಿದೆದ್ದ ಯುವತಿ ತಂದೆ ಅಳಿಯನ ಮನೆಗೆ ಬೆಂಕಿ ಹಚ್ಚಿ…

3 hours ago

ಕೃತಕ ಬುದ್ಧಿಮತ್ತೆ (ಆರ್ಟಿಫಿಷಿಯಲ್ ಇಂಟಲಿಜೆನ್ಸ್ – Artificial intelligence)

ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…

7 hours ago

ಬಾಣಸವಾಡಿ ರೈಲ್ವೆ ಅಂಡರ್‌ಪಾಸ್ ಬಳಿ ಮತ್ತೊಂದು ಅಂಡರ್ ಪಾಸ್‌ಗೆ ಸ್ಥಳ ಪರಿಶೀಲಿಸಿದ ಸಚಿವ ಕೆ.ಜೆ.ಜಾರ್ಜ್

ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್‌ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…

8 hours ago

ಕರ್ನಾಟಕ ಒನ್ ಕೇಂದ್ರ ಸ್ಥಾಪನೆಗೆ ಅರ್ಜಿ ಆಹ್ವಾನ

ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…

1 day ago