ಕೋಲಾರ: ರಾಜ್ಯದ ರಕ್ಷಣೆ ಹಾಗೂ ಕನ್ನಡ ಬಳಕೆಯಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖವಾಗಿದ್ದು ಅವರ ಸೇವೆಗೆ ನಾಡಿನ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರವೇ ಕನ್ನಡ ಉಳಿಯಲು ಸಾಧ್ಯವಾಗುತ್ತದೆ ಎಂದು ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಡೂಂ ಲೈಟ್ ವೃತ್ತದಲ್ಲಿ ಶುಕ್ರವಾರ ಜೈ ಕೋಲಾರಮ್ಮ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು ಆಟೋ ಚಾಲಕರು ಕನ್ನಡತನವನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ನಾಡು, ನುಡಿ ಉಳಿವಿನ ಹಿಂದೆ ಆಟೋ ಚಾಲಕರ ಶ್ರಮ ಅಧಿಕವಾಗಿದೆ ಇವರು ನಿತ್ಯ ಕನ್ನಡ ಬಳಕೆ ಮಾಡುವುದರ ಜತೆಗೆ ಕನ್ನಡವನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಚಿತ್ರನಟರು ಸೇರಿದಂತೆ ಸಾಹಿತಿಗಳು ಕನ್ನಡ ಭಾಷಾ ಬೆಳವಣಿಗೆಗಾಗಿ ತೊಡಗಿಸಿಕೊಂಡರೆ, ಆಟೋಚಾಲಕರು ನಿತ್ಯ ಜೀವನದಲ್ಲಿ ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಇದ್ದಾರೆ ಆಟೊ ಚಾಲಕರು ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವುದಲ್ಲದೇ ಸದಾ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಗೌರವ ನೀಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ತ್ಯಾಗರಾಜ್, ದಿಶಾ ಸಮಿತಿ ಮಾಜಿ ಸದಸ್ಯರಾದ ಸಾ.ಮಾ ಬಾಬು, ಅಪ್ಪಿ ನಾರಾಯಣಸ್ವಾಮಿ, ಮುಖಂಡರಾದ ನಾಮಲ್ ಮಂಜು, ಸಂಘದ ಅಧ್ಯಕ್ಷ ರಮೇಶ್, ಆಟೋ ಚಾಲಕರಾದ ಸ್ವಾಮಿ, ಮಂಜುನಾಥ್, ಮುನಿರೆಡ್ಡಿ ಮುಂತಾದವರು ಇದ್ದರು
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…
ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…
ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…