ಕೋಲಾರ: ರಾಜ್ಯದ ರಕ್ಷಣೆ ಹಾಗೂ ಕನ್ನಡ ಬಳಕೆಯಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖವಾಗಿದ್ದು ಅವರ ಸೇವೆಗೆ ನಾಡಿನ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರವೇ ಕನ್ನಡ ಉಳಿಯಲು ಸಾಧ್ಯವಾಗುತ್ತದೆ ಎಂದು ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಡೂಂ ಲೈಟ್ ವೃತ್ತದಲ್ಲಿ ಶುಕ್ರವಾರ ಜೈ ಕೋಲಾರಮ್ಮ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು ಆಟೋ ಚಾಲಕರು ಕನ್ನಡತನವನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ನಾಡು, ನುಡಿ ಉಳಿವಿನ ಹಿಂದೆ ಆಟೋ ಚಾಲಕರ ಶ್ರಮ ಅಧಿಕವಾಗಿದೆ ಇವರು ನಿತ್ಯ ಕನ್ನಡ ಬಳಕೆ ಮಾಡುವುದರ ಜತೆಗೆ ಕನ್ನಡವನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಚಿತ್ರನಟರು ಸೇರಿದಂತೆ ಸಾಹಿತಿಗಳು ಕನ್ನಡ ಭಾಷಾ ಬೆಳವಣಿಗೆಗಾಗಿ ತೊಡಗಿಸಿಕೊಂಡರೆ, ಆಟೋಚಾಲಕರು ನಿತ್ಯ ಜೀವನದಲ್ಲಿ ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಇದ್ದಾರೆ ಆಟೊ ಚಾಲಕರು ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವುದಲ್ಲದೇ ಸದಾ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಗೌರವ ನೀಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ತ್ಯಾಗರಾಜ್, ದಿಶಾ ಸಮಿತಿ ಮಾಜಿ ಸದಸ್ಯರಾದ ಸಾ.ಮಾ ಬಾಬು, ಅಪ್ಪಿ ನಾರಾಯಣಸ್ವಾಮಿ, ಮುಖಂಡರಾದ ನಾಮಲ್ ಮಂಜು, ಸಂಘದ ಅಧ್ಯಕ್ಷ ರಮೇಶ್, ಆಟೋ ಚಾಲಕರಾದ ಸ್ವಾಮಿ, ಮಂಜುನಾಥ್, ಮುನಿರೆಡ್ಡಿ ಮುಂತಾದವರು ಇದ್ದರು
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…