ಕೋಲಾರ: ರಾಜ್ಯದ ರಕ್ಷಣೆ ಹಾಗೂ ಕನ್ನಡ ಬಳಕೆಯಲ್ಲಿ ಆಟೋ ಚಾಲಕರ ಪಾತ್ರ ಪ್ರಮುಖವಾಗಿದ್ದು ಅವರ ಸೇವೆಗೆ ನಾಡಿನ ಪ್ರತಿಯೊಬ್ಬರೂ ಕೈಜೋಡಿಸಿದಾಗ ಮಾತ್ರವೇ ಕನ್ನಡ ಉಳಿಯಲು ಸಾಧ್ಯವಾಗುತ್ತದೆ ಎಂದು ಕೆಯುಡಿಎ ಮಾಜಿ ಅಧ್ಯಕ್ಷ ಓಂಶಕ್ತಿ ಚಲಪತಿ ತಿಳಿಸಿದರು.
ನಗರದ ಡೂಂ ಲೈಟ್ ವೃತ್ತದಲ್ಲಿ ಶುಕ್ರವಾರ ಜೈ ಕೋಲಾರಮ್ಮ ಆಟೋ ಚಾಲಕರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೇರವೇರಿಸಿ ಮಾತನಾಡಿದ ಅವರು ಆಟೋ ಚಾಲಕರು ಕನ್ನಡತನವನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಕೊಡುಗೆ ನೀಡುತ್ತಿದ್ದಾರೆ. ನಾಡು, ನುಡಿ ಉಳಿವಿನ ಹಿಂದೆ ಆಟೋ ಚಾಲಕರ ಶ್ರಮ ಅಧಿಕವಾಗಿದೆ ಇವರು ನಿತ್ಯ ಕನ್ನಡ ಬಳಕೆ ಮಾಡುವುದರ ಜತೆಗೆ ಕನ್ನಡವನ್ನು ಅನುಷ್ಠಾನಕ್ಕೆ ತರುತ್ತಿದ್ದಾರೆ ಎಂದು ತಿಳಿಸಿದರು.
ರಾಜ್ಯದಲ್ಲಿ ಚಿತ್ರನಟರು ಸೇರಿದಂತೆ ಸಾಹಿತಿಗಳು ಕನ್ನಡ ಭಾಷಾ ಬೆಳವಣಿಗೆಗಾಗಿ ತೊಡಗಿಸಿಕೊಂಡರೆ, ಆಟೋಚಾಲಕರು ನಿತ್ಯ ಜೀವನದಲ್ಲಿ ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಇದ್ದಾರೆ ಆಟೊ ಚಾಲಕರು ಪ್ರತಿವರ್ಷ ಕನ್ನಡ ರಾಜ್ಯೋತ್ಸವ ಆಚರಿಸುವುದಲ್ಲದೇ ಸದಾ ಕನ್ನಡ ಭಾಷೆಯಲ್ಲಿ ಮಾತನಾಡಿ ಕನ್ನಡ ಭಾಷೆಗೆ ಗೌರವ ನೀಡುತ್ತಾರೆ ಎಂದರು.
ಈ ಸಂದರ್ಭದಲ್ಲಿ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ತ್ಯಾಗರಾಜ್, ದಿಶಾ ಸಮಿತಿ ಮಾಜಿ ಸದಸ್ಯರಾದ ಸಾ.ಮಾ ಬಾಬು, ಅಪ್ಪಿ ನಾರಾಯಣಸ್ವಾಮಿ, ಮುಖಂಡರಾದ ನಾಮಲ್ ಮಂಜು, ಸಂಘದ ಅಧ್ಯಕ್ಷ ರಮೇಶ್, ಆಟೋ ಚಾಲಕರಾದ ಸ್ವಾಮಿ, ಮಂಜುನಾಥ್, ಮುನಿರೆಡ್ಡಿ ಮುಂತಾದವರು ಇದ್ದರು
ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…
ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…
ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…
ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…
ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…
ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…