Categories: ರಾಜ್ಯ

ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು- ಸಿಎಂ ಸಿದ್ದರಾಮಯ್ಯ

ಜೈ ಶ್ರೀರಾಮ್ ಎನ್ನುವುದು ಯಾರದ್ದೋ ಖಾಸಗಿ ಸ್ವತ್ತಲ್ಲ. ಅದು ಪ್ರತಿಯೊಬ್ಬ ಭಕ್ತರ ಸ್ವತ್ತು. ಕಾಂಗ್ರೆಸ್ ನವರು ಶ್ರೀರಾಮನ ವಿರುದ್ಧ ಇದ್ದಾರೆ ಎಂದು ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ.

ರಾಮಮಂದಿರವನ್ನು ರಾಜಕೀಯಗೊಳಿಸಬಾರದು. ಶ್ರೀರಾಮಚಂದ್ರ ಎಲ್ಲರ ದೇವರು. ಕೇವಲ ಬಿಜೆಪಿಯವರ ದೇವರಲ್ಲ. ಎಲ್ಲಾ ಹಿಂದೂಗಳ ದೇವರು. ನಾವೂ ಶ್ರೀರಾಮಚಂದ್ರನ ಭಕ್ತರೇ. ಶ್ರೀರಾಮಚಂದ್ರನಿಗೆ ವಿರುದ್ಧವಾಗಿದ್ದೇವೆ ಎಂದು ಬಿಂಬಿಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಈ ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಸೀತಾ, ರಾಮ, ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶ್ರೀ ರಾಮ ಟೆಂಪಲ್ ಟ್ರಸ್ಟ್  ವತಿಯಿಂದ ಆಯೋಜಿಸಿದ್ದ ಶ್ರೀರಾಮ ದೇವಸ್ಥಾನವನ್ನು ಇದರೊಂದಿಗೆ ಆಂಜನೇಯ ವಿಗ್ರಹವನ್ನೂ ಉದ್ಘಾಟಿಸಿದ್ದೇನೆ. ಇದನ್ನು ನಾವು ರಾಜಕಾರಣಕ್ಕಾಗಿ ಮಾಡಿರುವುದಲ್ಲ. ಕರ್ನಾಟಕ ರಾಜ್ಯದಲ್ಲಿ ಶ್ರೀರಾಮಚಂದ್ರನ ಬಹಳಷ್ಟು ದೇವಸ್ಥಾನಗಳಿವೆ. ನಮ್ಮೂರಿನಲ್ಲಿಯೂ ನಾನೇ ಶ್ರೀರಾಮಚಂದ್ರನ ದೇವಸ್ಥಾನವನ್ನು ಕಟ್ಟಿಸಿದ್ದೇನೆ. ಇದರಲ್ಲಿ ರಾಜಕೀಯ ಇಲ್ಲ. ಸಮಯ ದೊರೆತಾಗ ಅಯೋಧ್ಯೆಗೆ ನಾನು ಹೋಗುತ್ತೇನೆ. ಶ್ರೀರಾಮಚಂದ್ರನ ಮೂರ್ತಿ ಎಲ್ಲೆಡೆ ಒಂದೇ. ಅಯೋಧ್ಯೆಯಲ್ಲಿ  ಮಾಡಿದರೂ ಒಂದೇ, ನಮ್ಮೂರಿನಲ್ಲಿ ಪೂಜೆ ಮಾಡಿದರೂ ಒಂದೇ. ಬಿಜೆಪಿಯವರು ಅಯೋಧ್ಯೆಯಲ್ಲಿ ರಾಮನನ್ನು ಮಾತ್ರ ಪ್ರತಿಷ್ಠಾಪಿಸಿದ್ದಾರೆ. ರಾಮ, ಆಂಜನೇಯ, ಸೀತೆ ಲಕ್ಷ್ಮಣನನ್ನು ಬೇರ್ಪಡಿಸಲಾಗುವುದಿಲ್ಲ. ಶ್ರೀರಾಮಚಂದ್ರ ಒಬ್ಬನೇ ಇರದೇ ಸೀತಾದೇವಿ, ಲಕ್ಷ್ಮಣ, ಆಂಜನೇಯ ಇದ್ದಾಗ ಮಾತ್ರ ಪರಿಪೂರ್ಣವಾಗುತ್ತದೆ. ಇವರು ಶ್ರೀರಾಮಚಂದ್ರನನ್ನೇ ಬೇರ್ಪಡೆ ಮಾಡುವ ಪ್ರಯತ್ನ ಮಾಡುತ್ತಿದ್ದಾರೆ. ಅದು ಸರಿ ಇಲ್ಲ ಎಂದರು.

ಮಹಾತ್ಮಾ ಗಾಂಧೀಜಿಯವರು ರಘುಪತಿ ರಾಘವ ರಾಜಾರಾಮ್ ಎಂದು ಭಜಿಸುತ್ತಿದ್ದು, ಸಾಯುವಾಗಲೂ ಹೇ ರಾಮ್ ಎಂದೇ ಜೀವ ಬಿಟ್ಟರು. ಕಾಂಗ್ರೆಸ್ ಮಹಾತ್ಮಾಗಾಂಧಿ ಹೇಳಿದ ರಾಮಾಯಣದ ರಾಮನನ್ನು ಪೂಜಿಸುತ್ತದೆ. ಬಿಜೆಪಿ ಹೇಳಿದ ರಾಮನನ್ನು ಅಲ್ಲ ಎಂದು ಹೇಳಿದರು.

ಕರ್ನಾಟಕದಲ್ಲಿ ರಾಮಮಂದಿರ ಕಾರ್ಯಕ್ರಮದ ಅಂಗವಾಗಿ ರಜೆ ಘೋಷಣೆ ಮಾಡಿಲ್ಲ ಎಂಬ ಬಗ್ಗೆ ಗೊಂದಲ ಸೃಷ್ಟಿ ಬೇಡ. ಕೇಂದ್ರ ಸರ್ಕಾರದವರು ಅರ್ಧ ದಿನ ರಜೆ ಕೊಟ್ಟಿದ್ದಾರೆ. ದೆಹಲಿ, ಪಂಜಾಬ್, ತೆಲಂಗಾಣ, ಪಶ್ಚಿಮ ಬಂಗಾಲ, ತಮಿಳುನಾಡು, ಕೇರಳದಲ್ಲಿಯೂ ರಜೆ ಕೊಟ್ಟಿಲ್ಲ ಎಂದರು.

ಅಧರ್ಮದ-ಅಮಾನವೀಯ ಕೆಲಸ ಮಾಡಿ ನಾಟಕೀಯವಾಗಿ ಪೂಜೆ ಮಾಡಿದರೆ ಆ ಪೂಜೆಯನ್ನು ದೇವರು ಒಪ್ಪಿಕೊಳ್ಳಲ್ಲ. ಸಕಲ ಜೀವಗಳೂ ಸಮಾನತೆ, ಪ್ರೀತಿಯಿಂದ ಬಾಳಬೇಕು ಎನ್ನುವುದು ಆದರ್ಶ ಪುರುಷ ಶ್ರೀರಾಮನ ಆಶಯ ಎಂದು ತಿಳಿಸಿದರು.

ನಾನು ನಾಸ್ತಿಕನಲ್ಲ – ಆಸ್ತಿಕ. ನಮ್ಮೂರಲ್ಲೂ ರಾಮನ ಗುಡಿ ಕಟ್ಟಿಸಿದ್ದೇನೆ. ರಾಜ್ಯದ ಹಳ್ಳಿ ಹಳ್ಳಿಗಳಲ್ಲೂ ರಾಮನ ಗುಡಿಗಳು ಇವೆ. ಪ್ರತಿಯೊಬ್ಬರೂ ಅವರವರ ನಂಬಿಕೆಯಂತೆ ರಾಮನನ್ನು ಪೂಜಿಸುತ್ತಾತ್ತೇವೆ, ಗುಡಿ ಕಟ್ಟುತ್ತೇವೆ, ಪೂಜಿಸುತ್ತೇವೆ ಎಂದು ಹೇಳಿದರು.

ಯಾವುದೇ ಧರ್ಮ ಜಾತಿ-ಧರ್ಮ ಆಧಾರದ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಶ್ರೀರಾಮ ಸಮಾಜಮುಖಿ ಆಗಿದ್ದರು. ಒಬ್ಬ ಮಡಿವಾಳನ ಮಾತಿಗೂ ಬೆಲೆ ಕೊಟ್ಟರು. ಪಿತೃವಾಕ್ಯ ಪರಿಪಾಲನೆಗೆ ವನವಾಸಕ್ಕೆ ಹೋದರು. ಶ್ರೀರಾಮ, ಲಕ್ಷ್ಮಣ, ಸೀತೆ, ಆಂಜನೇಯರನ್ನು ಬೇರ್ಪಡಿಸಲು ಸಾಧ್ಯವಿಲ್ಲ. ಇವರೆಲ್ಲಾ ಸಕುಟುಂಬಸ್ಥರು ಎಂದರು.

ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯ ಶ್ರೀರಾಮನ ಆದರ್ಶ ಮತ್ತು ವ್ಯಕ್ತಿತ್ವದಲ್ಲಿದೆ. ಮನುಷ್ಯ ಮನುಷ್ಯನನ್ನು ದ್ವೇಷಿಸಬಾರದು ಎನ್ನುವುದೇ ರಾಮಾಯಣ, ಮಹಾಭಾರತದ ಸಂದೇಶ ಎಂದು ತಿಳಿಸಿದರು‌.

ಪರಿಶಿಷ್ಠ ಪಂಗಡ ಸಮುದಾಯದ ವಾಲ್ಮೀಕಿ ಅವರು ರಾಮಾಯಣವನ್ನು ಬರೆದು ವಿಶ್ವಕ್ಕೆ ಕೊಟ್ಟರು. ದೇವರು ನಮ್ಮ ಆತ್ಮ ಮತ್ತು ಶರೀರದಲ್ಲೇ ಇದ್ದಾನೆ ಎಂದು ಬಸವಣ್ಣನವರು ನುಡಿದರು. ದೇಹವೇ ದೇಗುಲ ಎನ್ನುವ ಸಂದೇಶವನ್ನು ಮನುಷ್ಯ ಪ್ರಪಂಚಕ್ಕೆ ನೀಡಿದ್ದಾರೆ ಎಂದರು.

Ramesh Babu

Journalist

Recent Posts

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

28 minutes ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

4 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

19 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

19 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

20 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

21 hours ago