ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ ಇದಾದ ಕೆಲವೇ ನಿಮಿಷಗಳಲ್ಲಿ ಎರಡು ಹತ್ಯೆಗಳಾದವು ಎಂಬ ಪ್ರಶ್ನೆಗೆ ನಗರದಲ್ಲಿ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯನ್ನು ಚುರುಕುಗೊಳಿಸಿದ್ದೇವೆ,
ಈ ಪ್ರಕರಣ ಸದ್ಯ ವಿಚಾರಣ ಹಂತದಲ್ಲಿದೆ ಇದನ್ನು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ, ಅಧಿಕಾರಿಗಳದ್ದು ಏನು ತಪ್ಪಿದೆ ಮತ್ತು ಈ ಪ್ರಕರಣ ಏತಕ್ಕಾಗಿ ಆಗಿದೆ ಎಂಬುದನ್ನು ತನಿಖೆ ನಂತರ ತಿಳಿಯಲಿದೆ, ಈ ಪ್ರಕರಣದಲ್ಲಿ ಪೊಲೀಸರ ಕೈವಾಡವೇನಾದರು ಇದ್ದರೆ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಆರೋಪಿಗಳಿಗೂ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲು ಸಿದ್ಧ ಎಂದರು.
ಕಾಂಗ್ರೆಸ್ ಕಾಲದಲ್ಲಿ 35 ಸಾವಿರ ಪೊಲೀಸ್ ಸಿಬ್ಬಂದಿಗಳ ಹುದ್ದೆ ಖಾಲಿ ಇತ್ತು ಅದನ್ನು ಈಗಾಗಲೇ ಭರ್ತಿ ಮಾಡಲಾಗಿದೆ ಉಳಿದ 12 ಸಾವಿರ ಕಾನ್ಸ್ಟೆ ಬಲ್ ಹುದ್ದೆಗಳು ಭರ್ತಿ ಮಾಡಲಿದ್ದೇವೆ, ಸಬ್ ಇನ್ಸ್ ಪೆಕ್ಟರ್ ಹಗರಣ ನಡೆಯದೇ ಇದ್ದಿದ್ದರೆ ಇಷ್ಟೊತ್ತಿಗೆ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿ ತಾಲ್ಲೂಖನ ಸಿಬ್ಬಂದಿಗಳ ಕೊರತೆ ನೀಗುತ್ತಿತ್ತು,
ತಾಲ್ಲೂಕಿನಲ್ಲಿ ಆದಷ್ಟು ಬೇಗ ಜನಸಂಖ್ಯೆ ಮತ್ತು ಏರಿಯಾದ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿಗಳ ಹೆಚ್ಚಿಗೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ ಎಂದರು.
ಪಿಎಸ್ ಐ ಹಗರಣದ ತನಿಖೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಿದ್ದೇವೆ, ಈಗಾಗಲೇ ಪ್ರಮುಖ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ, ಕೋರ್ಟ್ ಆದೇಶದ ಮೇರೆಗೆ ಮತ್ತೊಮ್ಮೆ ಪರೀಕ್ಷೆ ನಡೆಸಬೇಕಾ ಅಥವಾ ಈಗಾಗಲೇ ಪಾಸ್ ಆದ ಅಭ್ಯರ್ಥಿಗಳಿಗೆ ವರ್ಕ್ ಆರ್ಡರ್ ನೀಡಬೇಕಾ ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ದೊಡ್ಡಬಳ್ಳಾಪುರ: ಇಂದಿನ ವಿದ್ಯಾರ್ಥಿಗಳಿಗೆ ಪಾಠ ಹೇಳಿಕೊಡಲು ಶಿಕ್ಷಕರಿಗೆ ಜ್ಞಾನವಷ್ಟೇ ಸಾಕಾಗುವುದಿಲ್ಲ. ಅಪಾರ ತಾಳ್ಮೆ, ಸಹನೆ, ನಯ-ವಿನಯ ಹಾಗೂ ಮಕ್ಕಳ ಮನಸ್ಸನ್ನು…
ಕೋಲಾರ : ಬರ ಹಾಗೂ ಬಿಸಿಲಿನ ತಾಪದಿಂದ ರೈತರ ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲಿ ಸಮರ್ಪಕ ಹಾಗೂ ಗುಣಮಟ್ಟದ ವಿದ್ಯುತ್ ಪೂರೈಕೆ…
ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…
ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…
ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…
ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…