ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ ಇದಾದ ಕೆಲವೇ ನಿಮಿಷಗಳಲ್ಲಿ ಎರಡು ಹತ್ಯೆಗಳಾದವು ಎಂಬ ಪ್ರಶ್ನೆಗೆ ನಗರದಲ್ಲಿ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯನ್ನು ಚುರುಕುಗೊಳಿಸಿದ್ದೇವೆ,
ಈ ಪ್ರಕರಣ ಸದ್ಯ ವಿಚಾರಣ ಹಂತದಲ್ಲಿದೆ ಇದನ್ನು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ, ಅಧಿಕಾರಿಗಳದ್ದು ಏನು ತಪ್ಪಿದೆ ಮತ್ತು ಈ ಪ್ರಕರಣ ಏತಕ್ಕಾಗಿ ಆಗಿದೆ ಎಂಬುದನ್ನು ತನಿಖೆ ನಂತರ ತಿಳಿಯಲಿದೆ, ಈ ಪ್ರಕರಣದಲ್ಲಿ ಪೊಲೀಸರ ಕೈವಾಡವೇನಾದರು ಇದ್ದರೆ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಆರೋಪಿಗಳಿಗೂ ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಲು ಸಿದ್ಧ ಎಂದರು.
ಕಾಂಗ್ರೆಸ್ ಕಾಲದಲ್ಲಿ 35 ಸಾವಿರ ಪೊಲೀಸ್ ಸಿಬ್ಬಂದಿಗಳ ಹುದ್ದೆ ಖಾಲಿ ಇತ್ತು ಅದನ್ನು ಈಗಾಗಲೇ ಭರ್ತಿ ಮಾಡಲಾಗಿದೆ ಉಳಿದ 12 ಸಾವಿರ ಕಾನ್ಸ್ಟೆ ಬಲ್ ಹುದ್ದೆಗಳು ಭರ್ತಿ ಮಾಡಲಿದ್ದೇವೆ, ಸಬ್ ಇನ್ಸ್ ಪೆಕ್ಟರ್ ಹಗರಣ ನಡೆಯದೇ ಇದ್ದಿದ್ದರೆ ಇಷ್ಟೊತ್ತಿಗೆ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿ ತಾಲ್ಲೂಖನ ಸಿಬ್ಬಂದಿಗಳ ಕೊರತೆ ನೀಗುತ್ತಿತ್ತು,
ತಾಲ್ಲೂಕಿನಲ್ಲಿ ಆದಷ್ಟು ಬೇಗ ಜನಸಂಖ್ಯೆ ಮತ್ತು ಏರಿಯಾದ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿಗಳ ಹೆಚ್ಚಿಗೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ ಎಂದರು.
ಪಿಎಸ್ ಐ ಹಗರಣದ ತನಿಖೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಿದ್ದೇವೆ, ಈಗಾಗಲೇ ಪ್ರಮುಖ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ, ಕೋರ್ಟ್ ಆದೇಶದ ಮೇರೆಗೆ ಮತ್ತೊಮ್ಮೆ ಪರೀಕ್ಷೆ ನಡೆಸಬೇಕಾ ಅಥವಾ ಈಗಾಗಲೇ ಪಾಸ್ ಆದ ಅಭ್ಯರ್ಥಿಗಳಿಗೆ ವರ್ಕ್ ಆರ್ಡರ್ ನೀಡಬೇಕಾ ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.
ನಡೆ ನುಡಿ - ಮಾತು ಕೃತಿಯ ನಡುವೆ ದೊಡ್ಡ ಕಂದರ ಸೃಷ್ಠಿಯಾಗಿರುವ ಸನ್ನಿವೇಶದಲ್ಲಿ ಪ್ರಮಾಣ ವಚನ ಒಂದು ಅಧೀಕೃತ ಮತ್ತು…
ದೊಡ್ಡಬಳ್ಳಾಪುರ: ದೇವನಹಳ್ಳಿಯಲ್ಲಿರುವ ಕರ್ನಾಟಕ ಯಾದವ ಯುವ ವೇದಿಕೆಯ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ಯಾದವ ಯುವ ವೇದಿಕೆ ದೊಡ್ಡಬಳ್ಳಾಪುರ…
ದೊಡ್ಡಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಜಂಗಮ ಕೋಟೆಯ 1885 ಎಕರೆ ಭೂಸ್ವಾಧೀನ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು…
ದೊಡ್ಡಬಳ್ಳಾಪುರ: ಪದೇ ಪದೇ ಏರಿಕೆಯಾಗುತ್ತಿರುವ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳಿಂದ ಜನಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಆರೋಪಿಸಿ ಕನ್ನಡ…
ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುವ ಬದಲು ಮನೆಗಳಲ್ಲಿ ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ, ಪುರಸಭೆಯ ತ್ಯಾಜ್ಯ ಸಂಗ್ರಹ ವಾಹನಗಳಿಗೆ ಹಸ್ತಾಂತರಿಸುವ ಮೂಲಕ…
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಹುಲುಕುಡಿ ಬೆಟ್ಟದ ತಪ್ಪಲಿನ ಮಾಡೇಶ್ವರ ಗ್ರಾಮದ ಸಮೀಪ ಬೃಹತ್ ಗಾತ್ರದ ಹೆಬ್ಬಾವು ಮೀನಿನ ಹಳೆಯ…