ಜೋಡಿ ಕೊಲೆ ಆರೋಪಿಗಳಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಲಾಗುವುದು- ಗೃಹ ಸಚಿವ ಆರಗ ಜ್ಞಾನೇಂದ್ರ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ ಇದಾದ ಕೆಲವೇ ನಿಮಿಷಗಳಲ್ಲಿ ಎರಡು ಹತ್ಯೆಗಳಾದವು ಎಂಬ ಪ್ರಶ್ನೆಗೆ ನಗರದಲ್ಲಿ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯನ್ನು ಚುರುಕುಗೊಳಿಸಿದ್ದೇವೆ,

ಈ ಪ್ರಕರಣ ಸದ್ಯ ವಿಚಾರಣ ಹಂತದಲ್ಲಿದೆ ಇದನ್ನು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ, ಅಧಿಕಾರಿಗಳದ್ದು ಏನು ತಪ್ಪಿದೆ‌ ಮತ್ತು ಈ ಪ್ರಕರಣ ಏತಕ್ಕಾಗಿ ಆಗಿದೆ ಎಂಬುದನ್ನು ತನಿಖೆ ನಂತರ ತಿಳಿಯಲಿದೆ, ಈ ಪ್ರಕರಣದಲ್ಲಿ ಪೊಲೀಸರ ಕೈವಾಡವೇನಾದರು ಇದ್ದರೆ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಆರೋಪಿಗಳಿಗೂ ಕಾನೂನು ರೀತಿಯ ಕ್ರಮ‌ ತೆಗೆದುಕೊಳ್ಳಲು ಸಿದ್ಧ ಎಂದರು.

ತಾಲ್ಲೂಕಿನಲ್ಲಿ ಸರಣಿ ಕಳ್ಳತನಕ್ಕೆ ಪೊಲೀಸ್ ಸಿಬ್ಬಂದಿ ಕೊರತೆ:

ಕಾಂಗ್ರೆಸ್ ಕಾಲದಲ್ಲಿ 35 ಸಾವಿರ ಪೊಲೀಸ್ ಸಿಬ್ಬಂದಿಗಳ ಹುದ್ದೆ ಖಾಲಿ ಇತ್ತು ಅದನ್ನು ಈಗಾಗಲೇ ಭರ್ತಿ ಮಾಡಲಾಗಿದೆ ಉಳಿದ 12 ಸಾವಿರ ಕಾನ್ಸ್ಟೆ ಬಲ್ ಹುದ್ದೆಗಳು ಭರ್ತಿ ಮಾಡಲಿದ್ದೇವೆ, ಸಬ್ ಇನ್ಸ್ ಪೆಕ್ಟರ್ ಹಗರಣ ನಡೆಯದೇ ಇದ್ದಿದ್ದರೆ ಇಷ್ಟೊತ್ತಿಗೆ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿ ತಾಲ್ಲೂಖನ ಸಿಬ್ಬಂದಿಗಳ ಕೊರತೆ ನೀಗುತ್ತಿತ್ತು,

ತಾಲ್ಲೂಕಿನಲ್ಲಿ ಆದಷ್ಟು ಬೇಗ ಜನಸಂಖ್ಯೆ ಮತ್ತು ಏರಿಯಾದ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿಗಳ ಹೆಚ್ಚಿಗೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ ಎಂದರು.

ಪಿಎಸ್ ಐ ಹಗರಣ ತನಿಖೆ ಪಾರದರ್ಶಕ:

ಪಿಎಸ್ ಐ ಹಗರಣದ ತನಿಖೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಿದ್ದೇವೆ, ಈಗಾಗಲೇ ಪ್ರಮುಖ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ, ಕೋರ್ಟ್ ಆದೇಶದ ಮೇರೆಗೆ ಮತ್ತೊಮ್ಮೆ ಪರೀಕ್ಷೆ ನಡೆಸಬೇಕಾ ಅಥವಾ ಈಗಾಗಲೇ ಪಾಸ್ ಆದ ಅಭ್ಯರ್ಥಿಗಳಿಗೆ ವರ್ಕ್ ಆರ್ಡರ್ ನೀಡಬೇಕಾ ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

59 minutes ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

22 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago