ಜೋಡಿ ಕೊಲೆ ಆರೋಪಿಗಳಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಲಾಗುವುದು- ಗೃಹ ಸಚಿವ ಆರಗ ಜ್ಞಾನೇಂದ್ರ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ ಇದಾದ ಕೆಲವೇ ನಿಮಿಷಗಳಲ್ಲಿ ಎರಡು ಹತ್ಯೆಗಳಾದವು ಎಂಬ ಪ್ರಶ್ನೆಗೆ ನಗರದಲ್ಲಿ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು, ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯನ್ನು ಚುರುಕುಗೊಳಿಸಿದ್ದೇವೆ,

ಈ ಪ್ರಕರಣ ಸದ್ಯ ವಿಚಾರಣ ಹಂತದಲ್ಲಿದೆ ಇದನ್ನು ಈ ಪ್ರಕರಣವನ್ನು ಹಾಗೇ ಬಿಡುವುದಿಲ್ಲ, ಅಧಿಕಾರಿಗಳದ್ದು ಏನು ತಪ್ಪಿದೆ‌ ಮತ್ತು ಈ ಪ್ರಕರಣ ಏತಕ್ಕಾಗಿ ಆಗಿದೆ ಎಂಬುದನ್ನು ತನಿಖೆ ನಂತರ ತಿಳಿಯಲಿದೆ, ಈ ಪ್ರಕರಣದಲ್ಲಿ ಪೊಲೀಸರ ಕೈವಾಡವೇನಾದರು ಇದ್ದರೆ ಅವರ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಹಾಗೂ ಆರೋಪಿಗಳಿಗೂ ಕಾನೂನು ರೀತಿಯ ಕ್ರಮ‌ ತೆಗೆದುಕೊಳ್ಳಲು ಸಿದ್ಧ ಎಂದರು.

ತಾಲ್ಲೂಕಿನಲ್ಲಿ ಸರಣಿ ಕಳ್ಳತನಕ್ಕೆ ಪೊಲೀಸ್ ಸಿಬ್ಬಂದಿ ಕೊರತೆ:

ಕಾಂಗ್ರೆಸ್ ಕಾಲದಲ್ಲಿ 35 ಸಾವಿರ ಪೊಲೀಸ್ ಸಿಬ್ಬಂದಿಗಳ ಹುದ್ದೆ ಖಾಲಿ ಇತ್ತು ಅದನ್ನು ಈಗಾಗಲೇ ಭರ್ತಿ ಮಾಡಲಾಗಿದೆ ಉಳಿದ 12 ಸಾವಿರ ಕಾನ್ಸ್ಟೆ ಬಲ್ ಹುದ್ದೆಗಳು ಭರ್ತಿ ಮಾಡಲಿದ್ದೇವೆ, ಸಬ್ ಇನ್ಸ್ ಪೆಕ್ಟರ್ ಹಗರಣ ನಡೆಯದೇ ಇದ್ದಿದ್ದರೆ ಇಷ್ಟೊತ್ತಿಗೆ ಎಲ್ಲಾ ಹುದ್ದೆಗಳನ್ನು ಭರ್ತಿ ಮಾಡಿ ತಾಲ್ಲೂಖನ ಸಿಬ್ಬಂದಿಗಳ ಕೊರತೆ ನೀಗುತ್ತಿತ್ತು,

ತಾಲ್ಲೂಕಿನಲ್ಲಿ ಆದಷ್ಟು ಬೇಗ ಜನಸಂಖ್ಯೆ ಮತ್ತು ಏರಿಯಾದ ಆಧಾರದ ಮೇಲೆ ಪೊಲೀಸ್ ಸಿಬ್ಬಂದಿಗಳ ಹೆಚ್ಚಿಗೆ ಮಾಡುವ ಎಲ್ಲಾ ಪ್ರಯತ್ನಗಳು ನಡೆಯುತ್ತಿದೆ ಎಂದರು.

ಪಿಎಸ್ ಐ ಹಗರಣ ತನಿಖೆ ಪಾರದರ್ಶಕ:

ಪಿಎಸ್ ಐ ಹಗರಣದ ತನಿಖೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಿದ್ದೇವೆ, ಈಗಾಗಲೇ ಪ್ರಮುಖ ಆರೋಪಿಗಳನ್ನು ಜೈಲಿಗೆ ಕಳುಹಿಸಲಾಗಿದೆ, ಕೋರ್ಟ್ ಆದೇಶದ ಮೇರೆಗೆ ಮತ್ತೊಮ್ಮೆ ಪರೀಕ್ಷೆ ನಡೆಸಬೇಕಾ ಅಥವಾ ಈಗಾಗಲೇ ಪಾಸ್ ಆದ ಅಭ್ಯರ್ಥಿಗಳಿಗೆ ವರ್ಕ್ ಆರ್ಡರ್ ನೀಡಬೇಕಾ ಎಂಬುದನ್ನು ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

Ramesh Babu

Journalist

Recent Posts

ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ…..?

ಪಟಾಕಿ ದುರಂತಕ್ಕೆ ಯಾರು ಹೊಣೆ.... ಬಡ ಕಾರ್ಮಿಕರ ಜೀವಕ್ಕೆ ಬೆಲೆ ಇಲ್ಲವೇ, ಲೇಸರ್ ಗಳ ಯುಗದಲ್ಲಿ ಪಟಾಕಿಗೇನು ಕೆಲಸ..... ಲೇಸರ್…

14 minutes ago

ನಾಳೆ (ಏ.23ರಂದು) ವಿವಿಧ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.23 ರಂದು 66/11ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರಹೊಮ್ಮುವ F09-Rajaghatta, F03-Thalagavara, F12-Heggadihalli, F17- Nandi…

18 minutes ago

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

13 hours ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

14 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

14 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

16 hours ago