ಜೋಡೆತ್ತುಗಳಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿ-ರಾಜಘಟ್ಟ ನಾರಾಯಣ ಸ್ವಾಮಿ

ಸಿಎಂ ಆಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿರುವುದು ನಮಗೆ ಸಂತಸ ತಂದಿದೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಈ ಜೋಡೆತ್ತುಗಳು ಶ್ರಮಿಸುತ್ತಾರೆ ಎಂಬ ನಂಬಿಕೆ ಇದೆ ಎಂದು ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಾಜಘಟ್ಟ ನಾರಾಯಣ ಸ್ವಾಮಿ ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿ ಹಿನ್ನೆಲೆ ತಾಲೂಕಿನ ರಾಜಘಟ್ಟ ಗ್ರಾಮದಲ್ಲಿ ಮುಗಿಲು ಮುಟ್ಟಿದ ಸಂಭ್ರಮ, ಪಟಾಕಿ ಸಿಡಿಸಿ, ಪರಸ್ಪರ ಸಿಹಿ‌ ಹಂಚಿಕೊಂಡು, ಸಿದ್ದರಾಮಯ್ಯ, ಡಿಕೆಶಿ‌ ಹಾಗೂ ಕಾಂಗ್ರೆಸ್ ಪಕ್ಷಕ್ಕೆ ಜೈಕಾರ ಕೂಗಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು. ಸಂಭ್ರಮ ನಂತರ ಮಾತನಾಡಿದ ಅವರು, ಮೊದಲ ಬಾರಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಉತ್ತಮ‌ ಜನಪರ ಆಡಳಿತ ನಡೆಸಿದ್ದರು, ಎರಡನೇ‌ ಬಾರಿಗೂ ಉತ್ತಮ ಆಡಳಿತ ನಡೆಸುವ ಭರವಸೆ ಇದೆ ಎಂದರು.

ಪ್ರಮಾಣ ವಚನ ಸ್ವೀಕಾರ ಮಾಡಿದ ಒಂದೇ ಗಂಟೆಯಲ್ಲಿ ಕ್ಯಾಬಿನೆಟ್ ಸಭೆ ನಡೆಸಿ ಐದು ಗ್ಯಾರಂಟಿ ಯೋಜನೆಗೆ ತಾತ್ವಿಕ ಒಪ್ಪಿಗೆ ಸೂಚಿಸಿದ್ದಾರೆ. ನಂತರದ ದಿನಗಳಲ್ಲಿ ಮತ್ತೊಮ್ಮೆ ಸಚಿವ ಸಂಪುಟ ಸಭೆ ನಡೆಸಿ ಆ ಐದು ಗ್ಯಾರಂಟಿ ಯೋಜನೆ ಜಾರಿಗೆ ತರುತ್ತಾರೆ ಎಂದರು.

ರಾಜ್ಯದ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡಲಾಗುವುದು. ಗೃಹ ಜ್ಯೋತಿ ಯೋಜನೆಯಡಿ ತಿಂಗಳಿಗೆ 200 ಯೂನಿಟ್ ವರೆಗೆ ವಿದ್ಯುತ್ ಉಚಿತ ಒದಗಿಸಲಾಗುವುದು. ಪದವೀಧರರಿಗೆ ಪ್ರೋತ್ಸಾಹ ಧನ, ಮಹಿಳೆಯರಿಗೆ ಧನ ಸಹಾಯ, ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್ ಪುನಾರಂಭ ಮಾಡಲು ಸಿದ್ದರಾಮಯ್ಯ ಸರ್ಕಾರ ನಿರ್ಧಾರ ಮಾಡಿರುವುದು ಸಂತಸದ ವಿಷಯ ಎಂದು ಹೇಳಿದರು.

ರಾಜಘಟ್ಟ ಹಾಲು ಉತ್ಪಾದಕರ ಸಂಘ ನಿರ್ದಶಕರಾದ ಜಗನ್ನಾಥ್, ನಿರ್ದೇಶಕರಾದ ಮಂಜುನಾಥ್, ಕಾಂಗ್ರೆಸ್ ಹಿರಿಯ ಮುಖಂಡರಾದ ಚನ್ನಪ್ಪ, ಮುನಿವೆಂಕಟಸ್ವಾಮಿ, ಯಶವಂತ್, ರಾಜಣ್ಣ, ಅಂಬರೀಶ್, ಎಲೆಕ್ಟ್ರೀಕಲ್ ರಾಜು, ಗಂಗರಾಜು, ಆರ್ ಹೆಚ್ ಆನಂದ್, ಆರ್,ಎಸ್, ಮೈಲಾರಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

6 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

10 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

19 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago