ಜೋಳಿಗೆ ಹಾಕಿಕೊಂಡು ಭಿಕ್ಷೆಗೆ ಇಳಿದ ನಿರುದ್ಯೋಗ ಯುವಕರು: ಕಾರಣ ಇಲ್ಲಿದೆ….

ತೆಲಂಗಾಣದ ಅಶೋಕ್ ನಗರದ ವೃತ್ತದಲ್ಲಿ ನಿರುದ್ಯೋಗ ಯುವಕರು ಭಿಕ್ಷೆ ಬೇಡುತ್ತಿರುವ ದೃಶ್ಯ ಕಂಡುಬಂದಿದ್ದು. ಇದೀಗ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಭಿಕ್ಷೆ ಬೇಡುತ್ತಿದ್ದ ನಿರುದ್ಯೋಗ‌ ಯುವಕರನ್ನು ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಇದಲ್ಲದೇ ಭಿಕ್ಷೆ ಬೇಡುತ್ತಿದ್ದ ಯುವಕರಿಗೆ ಹಣ ನೀಡಿದವರನ್ನು ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

ಭಿಕ್ಷೆ ಬೇಡುವುದಕ್ಕೆ ಕಾರಣ…?

ತೆಲಂಗಾಣ ನಿರುದ್ಯೋಗ ಯುವಕರು ಭಿಕ್ಷೆ ಬೇಡಲು ಮುಂದಾಗಿದ್ದಾರೆ. ಏಕೆಂದರೆ ತೆಲಂಗಾಣ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಉಲ್ಭಗೊಂಡಿದ್ದರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಕಾಂಗ್ರೆಸ್ ಸರ್ಕಾರ ಬರುವುದಕ್ಕಿಂತ ಮೊದಲು ಚುನಾವಣಾ ಪೂರ್ವದಲ್ಲಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಇತರೆ ಎಲ್ಲಾ ನಾಯಕರು ಮಾತು ಕೊಟ್ಟಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹಲವು ತಿಂಗಳಾದರೂ ಉದ್ಯೋಗ ಸೃಷ್ಟಿ ಮಾಡಿಲ್ಲ. ತೆಲಂಗಾಣ ರಾಜ್ಯ ಕಾಂಗ್ರೆಸ್ ಸರ್ಕಾರ ಬಳಿ ಉದ್ಯೋಗ ಕೊಡಿ ಎಂದು ಎಷ್ಟು ಬಾರಿ ಮನವಿ ಮಾಡಿದರು ಏನೂ ಪ್ರಯೋಜನವಾಗಲಿಲ್ಲ.

ಈ ಹಿನ್ನೆಲೆ ದೆಹಲಿಯಲ್ಲಿರುವ ರಾಹುಲ್ ಗಾಂಧಿ ಅವರ ಬಳಿ ತೆರಳಿ ಉದ್ಯೋಗ ಕೊಡುವುಂತೆ ಕೇಳಲು ನಿರ್ಧಾರ ಮಾಡಿದ್ದಾರೆ. ಆದರೆ ದೆಹಲಿಗೆ ತೆರಳಲಿ ನಮ್ಮ ಬಳಿ ಹಣವಿಲ್ಲ. ಆದ್ದರಿಂದ ಭಿಕ್ಷೆ ಬೇಡಿ ದೆಹಲಿಗೆ ಹೋಗುತ್ತಿದ್ದೇವೆ ಎಂದು ನಿರುದ್ಯೋಗ ಯುವಕರು ತಿಳಿಸಿದ್ದಾರೆ.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

12 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

18 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago