ಜೋಳಿಗೆ ಹಾಕಿಕೊಂಡು ಭಿಕ್ಷೆಗೆ ಇಳಿದ ನಿರುದ್ಯೋಗ ಯುವಕರು: ಕಾರಣ ಇಲ್ಲಿದೆ….

ತೆಲಂಗಾಣದ ಅಶೋಕ್ ನಗರದ ವೃತ್ತದಲ್ಲಿ ನಿರುದ್ಯೋಗ ಯುವಕರು ಭಿಕ್ಷೆ ಬೇಡುತ್ತಿರುವ ದೃಶ್ಯ ಕಂಡುಬಂದಿದ್ದು. ಇದೀಗ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಭಿಕ್ಷೆ ಬೇಡುತ್ತಿದ್ದ ನಿರುದ್ಯೋಗ‌ ಯುವಕರನ್ನು ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಇದಲ್ಲದೇ ಭಿಕ್ಷೆ ಬೇಡುತ್ತಿದ್ದ ಯುವಕರಿಗೆ ಹಣ ನೀಡಿದವರನ್ನು ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.

ಭಿಕ್ಷೆ ಬೇಡುವುದಕ್ಕೆ ಕಾರಣ…?

ತೆಲಂಗಾಣ ನಿರುದ್ಯೋಗ ಯುವಕರು ಭಿಕ್ಷೆ ಬೇಡಲು ಮುಂದಾಗಿದ್ದಾರೆ. ಏಕೆಂದರೆ ತೆಲಂಗಾಣ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಉಲ್ಭಗೊಂಡಿದ್ದರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಕಾಂಗ್ರೆಸ್ ಸರ್ಕಾರ ಬರುವುದಕ್ಕಿಂತ ಮೊದಲು ಚುನಾವಣಾ ಪೂರ್ವದಲ್ಲಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಇತರೆ ಎಲ್ಲಾ ನಾಯಕರು ಮಾತು ಕೊಟ್ಟಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹಲವು ತಿಂಗಳಾದರೂ ಉದ್ಯೋಗ ಸೃಷ್ಟಿ ಮಾಡಿಲ್ಲ. ತೆಲಂಗಾಣ ರಾಜ್ಯ ಕಾಂಗ್ರೆಸ್ ಸರ್ಕಾರ ಬಳಿ ಉದ್ಯೋಗ ಕೊಡಿ ಎಂದು ಎಷ್ಟು ಬಾರಿ ಮನವಿ ಮಾಡಿದರು ಏನೂ ಪ್ರಯೋಜನವಾಗಲಿಲ್ಲ.

ಈ ಹಿನ್ನೆಲೆ ದೆಹಲಿಯಲ್ಲಿರುವ ರಾಹುಲ್ ಗಾಂಧಿ ಅವರ ಬಳಿ ತೆರಳಿ ಉದ್ಯೋಗ ಕೊಡುವುಂತೆ ಕೇಳಲು ನಿರ್ಧಾರ ಮಾಡಿದ್ದಾರೆ. ಆದರೆ ದೆಹಲಿಗೆ ತೆರಳಲಿ ನಮ್ಮ ಬಳಿ ಹಣವಿಲ್ಲ. ಆದ್ದರಿಂದ ಭಿಕ್ಷೆ ಬೇಡಿ ದೆಹಲಿಗೆ ಹೋಗುತ್ತಿದ್ದೇವೆ ಎಂದು ನಿರುದ್ಯೋಗ ಯುವಕರು ತಿಳಿಸಿದ್ದಾರೆ.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

4 hours ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

14 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

1 day ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

1 day ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

2 days ago