ತೆಲಂಗಾಣದ ಅಶೋಕ್ ನಗರದ ವೃತ್ತದಲ್ಲಿ ನಿರುದ್ಯೋಗ ಯುವಕರು ಭಿಕ್ಷೆ ಬೇಡುತ್ತಿರುವ ದೃಶ್ಯ ಕಂಡುಬಂದಿದ್ದು. ಇದೀಗ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ.
ಭಿಕ್ಷೆ ಬೇಡುತ್ತಿದ್ದ ನಿರುದ್ಯೋಗ ಯುವಕರನ್ನು ಪೊಲೀಸರು ಬಲವಂತವಾಗಿ ಬಂಧಿಸಿದ್ದಾರೆ. ಇದಲ್ಲದೇ ಭಿಕ್ಷೆ ಬೇಡುತ್ತಿದ್ದ ಯುವಕರಿಗೆ ಹಣ ನೀಡಿದವರನ್ನು ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ.
ಭಿಕ್ಷೆ ಬೇಡುವುದಕ್ಕೆ ಕಾರಣ…?
ತೆಲಂಗಾಣ ನಿರುದ್ಯೋಗ ಯುವಕರು ಭಿಕ್ಷೆ ಬೇಡಲು ಮುಂದಾಗಿದ್ದಾರೆ. ಏಕೆಂದರೆ ತೆಲಂಗಾಣ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ಉಲ್ಭಗೊಂಡಿದ್ದರೂ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಕಾಂಗ್ರೆಸ್ ಸರ್ಕಾರ ಬರುವುದಕ್ಕಿಂತ ಮೊದಲು ಚುನಾವಣಾ ಪೂರ್ವದಲ್ಲಿ ನಿರುದ್ಯೋಗ ಸಮಸ್ಯೆ ಹೋಗಲಾಡಿಸಲು ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಇತರೆ ಎಲ್ಲಾ ನಾಯಕರು ಮಾತು ಕೊಟ್ಟಿದ್ದರು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಹಲವು ತಿಂಗಳಾದರೂ ಉದ್ಯೋಗ ಸೃಷ್ಟಿ ಮಾಡಿಲ್ಲ. ತೆಲಂಗಾಣ ರಾಜ್ಯ ಕಾಂಗ್ರೆಸ್ ಸರ್ಕಾರ ಬಳಿ ಉದ್ಯೋಗ ಕೊಡಿ ಎಂದು ಎಷ್ಟು ಬಾರಿ ಮನವಿ ಮಾಡಿದರು ಏನೂ ಪ್ರಯೋಜನವಾಗಲಿಲ್ಲ.
ಈ ಹಿನ್ನೆಲೆ ದೆಹಲಿಯಲ್ಲಿರುವ ರಾಹುಲ್ ಗಾಂಧಿ ಅವರ ಬಳಿ ತೆರಳಿ ಉದ್ಯೋಗ ಕೊಡುವುಂತೆ ಕೇಳಲು ನಿರ್ಧಾರ ಮಾಡಿದ್ದಾರೆ. ಆದರೆ ದೆಹಲಿಗೆ ತೆರಳಲಿ ನಮ್ಮ ಬಳಿ ಹಣವಿಲ್ಲ. ಆದ್ದರಿಂದ ಭಿಕ್ಷೆ ಬೇಡಿ ದೆಹಲಿಗೆ ಹೋಗುತ್ತಿದ್ದೇವೆ ಎಂದು ನಿರುದ್ಯೋಗ ಯುವಕರು ತಿಳಿಸಿದ್ದಾರೆ.
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…
ಚಿಕ್ಕಬಳ್ಳಾಪುರ: ಜಿಲ್ಲೆಯ ತಾಲೂಕಿನ ಅರಸನಹಳ್ಳಿಯಲ್ಲಿ ತಡರಾತ್ರಿ ಭೀಕರ ಘಟನೆಯೊಂದು ನಡೆದಿದೆ. ಮದುವೆ ಕಾರ್ಯಕ್ರಮವಿದ್ದ ಮನೆಯ ಮುಂದೆ ನಿಲ್ಲಿಸಿದ್ದ ವಾಹನಗಳಿಗೆ ಕಿಡಿಗೇಡಿಗಳು…
ಶನೇಶ್ವರ ಜಯಂತಿ ಹಾಗೂ ಅಮಾವಾಸ್ಯೆ ಒಂದೇ ದಿನ ಬಂದಿರುವ ಹಿನ್ನೆಲೆ ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಶನೇಶ್ವರ ದೇವಸ್ಥಾನದಲ್ಲಿ ಅಪಾರ ಭಕ್ತಸಾಗರ…
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…