ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು ನಾವೆಲ್ಲರೂ ಸಾಗೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಭಗವಾನ್ ಬುದ್ಧ’ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧರ ಪ್ರತಿಮೆಗೆ ಮೊಂಬತ್ತಿ ಬೆಳಗುವ ಮೂಲಕ ಗೌರವ ನಮನ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬುದ್ಧ ಜಯಂತಿ ನಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ನೆನಪಿಸುವ ಪವಿತ್ರ ದಿನವಾಗಿದೆ. ಗೌತಮ ಬುದ್ಧರು ನಿಜವಾದ ಜೀವನದ ಅರ್ಥ ಹುಡುಕಲು ಸುಖಜೀವನವನ್ನು ತ್ಯಜಿಸಿದರು. ಮಾನವನ ದುಃಖದ ಮೂಲವನ್ನು ಅರಿತುಕೊಳ್ಳಲು ಅವರು ಧ್ಯಾನವನ್ನು ಮಾಡಿ ಬೋಧಿವೃಕ್ಷದ ಕೆಳಗಡೆ ಅವರಿಗೆ ಜ್ಞಾನ ಪಡೆದುಕೊಂಡರು.

ಬುದ್ಧರು ನಮಗೆ ಅಹಿಂಸೆ, ಮಧ್ಯಮ ಮಾರ್ಗ, ಸತ್ಯ, ದಯೆ ಎಂಬ ಮಹತ್ವದ ತತ್ವಗಳನ್ನು ಬೋಧಿಸಿದರು. ಅವರು ಹೇಳಿದಂತೆ ದುಃಖಕ್ಕೆ ಕಾರಣವಾದ ಆಸೆಗಳನ್ನು ತ್ಯಜಿಸಿದರೆ ನಿಜವಾದ ಸಂತೋಷವನ್ನು ಪಡೆಯಬಹುದು. ಅವರ ತತ್ವದರ್ಶಗಳು, ಉಪದೇಶಗಳು ಇಂದಿಗೂ ಕೂಡ ನಮ್ಮ ಜೀವನದಲ್ಲಿ ಪ್ರಸ್ತುತವಾಗಿವೆ. ಇಂದಿನ ಸಮಾಜದಲ್ಲಿ ಹಿಂಸೆ, ದ್ವೇಷ, ಅಸಹಿಷ್ಣುತೆ, ಹೆಚ್ಚುತ್ತಿರುವ ಸಂದರ್ಭದಲ್ಲಿ ಬುದ್ಧನ ಸಂದೇಶ ನಮಗೆ ಮಾರ್ಗದರ್ಶನ ನೀಡುತ್ತದೆ. ನಾವು ಪರಸ್ಪರ ಪ್ರೀತಿ, ಸಹಾನುಭೂತಿ ಮತ್ತು ಶಾಂತಿಯೊಳಗೆ ಬದುಕಬೇಕು ಎಂಬುದನ್ನು ನಮಗೆ ತಿಳಿಸಿಕೊಟ್ಟಿದ್ದಾರೆ ಎಂದರು.

ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ ಮಾತನಾಡಿ ಬುದ್ಧನನ್ನ ಏಷ್ಯಾದ ಬೆಳಕು ಎಂದು ಕರೆಯುತ್ತಿದ್ದರು. 2570 ವರ್ಷಗಳ ಹಿಂದೆ ಜನಿಸಿದ ಮಹಾನ್ ವ್ಯಕ್ತಿಯನ್ನು ಇಂದಿಗೂ ಕೂಡ ನೆನೆಯುತ್ತಿದ್ದೇವೆಂದರೆ ಅವರ ಕೊಡುಗೆ ಅಪಾರವಾದದ್ದು. ಬುದ್ಧ ಎಂದರೆ ಬೆಳಕು, ಜ್ಯೋತಿ, ಜ್ಞಾನ, ಒಳ್ಳೆಯದು ಎಂದರ್ಥ. ಬೌದ್ಧ ಧರ್ಮ ವಿಶ್ವದಾದ್ಯಂತ ಹರಡುತ್ತದೆ. ಬೌದ್ಧ ಧರ್ಮದ ಪ್ರೇರೆಪಿತನಾದ ಸಾಮ್ರಾಟ ಅಶೋಕನು ಕೂಡ ಭಾರತದಲ್ಲಿ ಬೌದ್ಧ ಧರ್ಮ ಪ್ರಚಾರ ಮಾಡಿ ಲೋಕ ಕಲ್ಯಾಣ ಕೆಲಸ ಮಾಡುತ್ತಾನೆ. ಜಗಜ್ಯೋತಿ ಬಸವಣ್ಣನವರ ಆದರ್ಶಗಳಿಗೂ ಸಾಮ್ಯತೆ ಇದೆ. ಡಾ. ಬಿ. ಆರ್. ಅಂಬೇಡ್ಕರ್ ಅವರು ಕೂಡ ಬೌದ್ಧ ಧರ್ಮದ ಪ್ರೇರೆಪಿತರಾಗಿ ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಅವರ ಜೀವನವನ್ನು ತೊಡಗಿಸಿಕೊಂಡರು. ಹಾಗಾಗಿ ಈ ಮಹನೀಯರ ಜಯಂತಿಗಳನ್ನು ಆಚರಣೆ ಮಾಡುತ್ತಾ ತತ್ವಾದರ್ಶಗಳನ್ನು ಅನುಸರಿಸಿ ಮುಂದಿನ ಪೀಳಿಗೆಗೆ ತಿಳಿಸೋಣ ಎಂದರು.

ವಕೀಲರಾದ ಆಯುಷ್ಮತಿ ಸಂಘ ಮಿತ್ರ ಅವರು ಉಪನ್ಯಾಸ ನೀಡಿ ಭಗವಾನ್ ಬುದ್ಧನು ರಾಜಕುಮಾರ ಸಿದ್ದಾರ್ಥ ಆಗಿ ಜನಿಸಿ, ಯಾವಾಗಲೂ ಐಷಾರಾಮಿ ಸಂತೋಷಗಳಿಂದ ತನ್ನ ಜೀವನವನ್ನು ಸಾಗಿಸುತ್ತಿದ್ದನು. ಬುದ್ಧನಿಗೆ ಜ್ಞಾನೋದಯವಾಗುವ ವೇಳೆಗೆ ಮನುಷ್ಯ ಯಾಕೆ ಈ ದ್ವೇಷ, ಒಬ್ಬ ಮನುಷ್ಯನ ದುಃಖದ ಹಿಂದಿನ ಕಾರಣಗಳನ್ನು ಹುಡುಕುವ ಪ್ರಯತ್ನ ಮಾಡಿದ. ಬೋಧಿ ವೃಕ್ಷದ ಕೆಳಗೆ ಜ್ಞಾನೋದಯವಾಯಿತು. ಬುದ್ಧನ ಸಂದೇಶಗಳು ಶಾಂತಿ, ಮಾನವೀಯತೆಯ ಬಲಪಡಿಸುವಿಕೆಯನ್ನು ತೋರಿಸುತ್ತದೆ. ಬುದ್ಧನ ತತ್ವಗಳಾದ ಅಹಿಂಸೆ, ಸಹಾನುಭೂತಿ, ಧರ್ಮ ನಿಷ್ಠೆ ಆಡಳಿತ ಇವೆಲ್ಲವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಡಾ. ಬಿ. ಆರ್ ಅಂಬೇಡ್ಕರ್ ಅವರು ಅನೇಕ ಧರ್ಮಗಳನ್ನು ಅಧ್ಯಯನ ಮಾಡಿದ ನಂತರ ಬೌದ್ಧ ಧರ್ಮದಲ್ಲಿ ಜಾತಿ ಇಲ್ಲ, ಅಸ್ಪೃಶ್ಯತೆ ಇಲ್ಲ, ಭೇದಭಾವ ಇಲ್ಲ ಎಲ್ಲರೂ ಸಮಾನರು ಎಂದು 14 ಅಕ್ಟೋಬರ್ 1956 ರಲ್ಲಿ ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಬುದ್ಧ, ಅಂಬೇಡ್ಕರ್ ಅವರ ಕೇವಲ ಪ್ರತಿಮೆಗಳಾಗಿ ಉಳಿಯಬಾರದು ಅವರ ತತ್ವ ಆದರ್ಶಗಳನ್ನು ನಾವು ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ, ಕುಂದಾಣ ಗ್ರಾಮದ ಆನಂದ ಬುದ್ಧ ವಿಹಾರದ ನ್ಯಾನಲೋಕ ಬಂತೇಜ, ಅನಿರುದ್ಧ ಬಂತೇಜಿ, ಸಮಾಜದ ಮುಖಂಡರಾದ ಶ್ರೀನಿವಾಸ್, ಲೋಕೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

1 hour ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

6 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

19 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

23 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

23 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago