ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು ನಾವೆಲ್ಲರೂ ಸಾಗೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಭಗವಾನ್ ಬುದ್ಧ’ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧರ ಪ್ರತಿಮೆಗೆ ಮೊಂಬತ್ತಿ ಬೆಳಗುವ ಮೂಲಕ ಗೌರವ ನಮನ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬುದ್ಧ ಜಯಂತಿ ನಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ನೆನಪಿಸುವ ಪವಿತ್ರ ದಿನವಾಗಿದೆ. ಗೌತಮ ಬುದ್ಧರು ನಿಜವಾದ ಜೀವನದ ಅರ್ಥ ಹುಡುಕಲು ಸುಖಜೀವನವನ್ನು ತ್ಯಜಿಸಿದರು. ಮಾನವನ ದುಃಖದ ಮೂಲವನ್ನು ಅರಿತುಕೊಳ್ಳಲು ಅವರು ಧ್ಯಾನವನ್ನು ಮಾಡಿ ಬೋಧಿವೃಕ್ಷದ ಕೆಳಗಡೆ ಅವರಿಗೆ ಜ್ಞಾನ ಪಡೆದುಕೊಂಡರು.

ಬುದ್ಧರು ನಮಗೆ ಅಹಿಂಸೆ, ಮಧ್ಯಮ ಮಾರ್ಗ, ಸತ್ಯ, ದಯೆ ಎಂಬ ಮಹತ್ವದ ತತ್ವಗಳನ್ನು ಬೋಧಿಸಿದರು. ಅವರು ಹೇಳಿದಂತೆ ದುಃಖಕ್ಕೆ ಕಾರಣವಾದ ಆಸೆಗಳನ್ನು ತ್ಯಜಿಸಿದರೆ ನಿಜವಾದ ಸಂತೋಷವನ್ನು ಪಡೆಯಬಹುದು. ಅವರ ತತ್ವದರ್ಶಗಳು, ಉಪದೇಶಗಳು ಇಂದಿಗೂ ಕೂಡ ನಮ್ಮ ಜೀವನದಲ್ಲಿ ಪ್ರಸ್ತುತವಾಗಿವೆ. ಇಂದಿನ ಸಮಾಜದಲ್ಲಿ ಹಿಂಸೆ, ದ್ವೇಷ, ಅಸಹಿಷ್ಣುತೆ, ಹೆಚ್ಚುತ್ತಿರುವ ಸಂದರ್ಭದಲ್ಲಿ ಬುದ್ಧನ ಸಂದೇಶ ನಮಗೆ ಮಾರ್ಗದರ್ಶನ ನೀಡುತ್ತದೆ. ನಾವು ಪರಸ್ಪರ ಪ್ರೀತಿ, ಸಹಾನುಭೂತಿ ಮತ್ತು ಶಾಂತಿಯೊಳಗೆ ಬದುಕಬೇಕು ಎಂಬುದನ್ನು ನಮಗೆ ತಿಳಿಸಿಕೊಟ್ಟಿದ್ದಾರೆ ಎಂದರು.

ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ ಮಾತನಾಡಿ ಬುದ್ಧನನ್ನ ಏಷ್ಯಾದ ಬೆಳಕು ಎಂದು ಕರೆಯುತ್ತಿದ್ದರು. 2570 ವರ್ಷಗಳ ಹಿಂದೆ ಜನಿಸಿದ ಮಹಾನ್ ವ್ಯಕ್ತಿಯನ್ನು ಇಂದಿಗೂ ಕೂಡ ನೆನೆಯುತ್ತಿದ್ದೇವೆಂದರೆ ಅವರ ಕೊಡುಗೆ ಅಪಾರವಾದದ್ದು. ಬುದ್ಧ ಎಂದರೆ ಬೆಳಕು, ಜ್ಯೋತಿ, ಜ್ಞಾನ, ಒಳ್ಳೆಯದು ಎಂದರ್ಥ. ಬೌದ್ಧ ಧರ್ಮ ವಿಶ್ವದಾದ್ಯಂತ ಹರಡುತ್ತದೆ. ಬೌದ್ಧ ಧರ್ಮದ ಪ್ರೇರೆಪಿತನಾದ ಸಾಮ್ರಾಟ ಅಶೋಕನು ಕೂಡ ಭಾರತದಲ್ಲಿ ಬೌದ್ಧ ಧರ್ಮ ಪ್ರಚಾರ ಮಾಡಿ ಲೋಕ ಕಲ್ಯಾಣ ಕೆಲಸ ಮಾಡುತ್ತಾನೆ. ಜಗಜ್ಯೋತಿ ಬಸವಣ್ಣನವರ ಆದರ್ಶಗಳಿಗೂ ಸಾಮ್ಯತೆ ಇದೆ. ಡಾ. ಬಿ. ಆರ್. ಅಂಬೇಡ್ಕರ್ ಅವರು ಕೂಡ ಬೌದ್ಧ ಧರ್ಮದ ಪ್ರೇರೆಪಿತರಾಗಿ ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಅವರ ಜೀವನವನ್ನು ತೊಡಗಿಸಿಕೊಂಡರು. ಹಾಗಾಗಿ ಈ ಮಹನೀಯರ ಜಯಂತಿಗಳನ್ನು ಆಚರಣೆ ಮಾಡುತ್ತಾ ತತ್ವಾದರ್ಶಗಳನ್ನು ಅನುಸರಿಸಿ ಮುಂದಿನ ಪೀಳಿಗೆಗೆ ತಿಳಿಸೋಣ ಎಂದರು.

ವಕೀಲರಾದ ಆಯುಷ್ಮತಿ ಸಂಘ ಮಿತ್ರ ಅವರು ಉಪನ್ಯಾಸ ನೀಡಿ ಭಗವಾನ್ ಬುದ್ಧನು ರಾಜಕುಮಾರ ಸಿದ್ದಾರ್ಥ ಆಗಿ ಜನಿಸಿ, ಯಾವಾಗಲೂ ಐಷಾರಾಮಿ ಸಂತೋಷಗಳಿಂದ ತನ್ನ ಜೀವನವನ್ನು ಸಾಗಿಸುತ್ತಿದ್ದನು. ಬುದ್ಧನಿಗೆ ಜ್ಞಾನೋದಯವಾಗುವ ವೇಳೆಗೆ ಮನುಷ್ಯ ಯಾಕೆ ಈ ದ್ವೇಷ, ಒಬ್ಬ ಮನುಷ್ಯನ ದುಃಖದ ಹಿಂದಿನ ಕಾರಣಗಳನ್ನು ಹುಡುಕುವ ಪ್ರಯತ್ನ ಮಾಡಿದ. ಬೋಧಿ ವೃಕ್ಷದ ಕೆಳಗೆ ಜ್ಞಾನೋದಯವಾಯಿತು. ಬುದ್ಧನ ಸಂದೇಶಗಳು ಶಾಂತಿ, ಮಾನವೀಯತೆಯ ಬಲಪಡಿಸುವಿಕೆಯನ್ನು ತೋರಿಸುತ್ತದೆ. ಬುದ್ಧನ ತತ್ವಗಳಾದ ಅಹಿಂಸೆ, ಸಹಾನುಭೂತಿ, ಧರ್ಮ ನಿಷ್ಠೆ ಆಡಳಿತ ಇವೆಲ್ಲವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಡಾ. ಬಿ. ಆರ್ ಅಂಬೇಡ್ಕರ್ ಅವರು ಅನೇಕ ಧರ್ಮಗಳನ್ನು ಅಧ್ಯಯನ ಮಾಡಿದ ನಂತರ ಬೌದ್ಧ ಧರ್ಮದಲ್ಲಿ ಜಾತಿ ಇಲ್ಲ, ಅಸ್ಪೃಶ್ಯತೆ ಇಲ್ಲ, ಭೇದಭಾವ ಇಲ್ಲ ಎಲ್ಲರೂ ಸಮಾನರು ಎಂದು 14 ಅಕ್ಟೋಬರ್ 1956 ರಲ್ಲಿ ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಬುದ್ಧ, ಅಂಬೇಡ್ಕರ್ ಅವರ ಕೇವಲ ಪ್ರತಿಮೆಗಳಾಗಿ ಉಳಿಯಬಾರದು ಅವರ ತತ್ವ ಆದರ್ಶಗಳನ್ನು ನಾವು ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ, ಕುಂದಾಣ ಗ್ರಾಮದ ಆನಂದ ಬುದ್ಧ ವಿಹಾರದ ನ್ಯಾನಲೋಕ ಬಂತೇಜ, ಅನಿರುದ್ಧ ಬಂತೇಜಿ, ಸಮಾಜದ ಮುಖಂಡರಾದ ಶ್ರೀನಿವಾಸ್, ಲೋಕೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

3 hours ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

3 hours ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

4 hours ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

8 hours ago

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

13 hours ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

1 day ago