ಜ್ಞಾನದ ಬೆಳಕನ್ನು ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಭಗವಾನ್ ಬುದ್ಧ- ಎಡಿಸಿ ಸೈಯಿದಾ ಆಯಿಷಾ

ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು ನಾವೆಲ್ಲರೂ ಸಾಗೋಣ ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಅವರು ಹೇಳಿದರು.

ದೇವನಹಳ್ಳಿ ಟೌನ್ ನ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಭಗವಾನ್ ಬುದ್ಧ’ ಜಯಂತಿ ಕಾರ್ಯಕ್ರಮದಲ್ಲಿ ಬುದ್ಧರ ಪ್ರತಿಮೆಗೆ ಮೊಂಬತ್ತಿ ಬೆಳಗುವ ಮೂಲಕ ಗೌರವ ನಮನ ಸಲ್ಲಿಸಿ, ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಬುದ್ಧ ಜಯಂತಿ ನಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ನೆನಪಿಸುವ ಪವಿತ್ರ ದಿನವಾಗಿದೆ. ಗೌತಮ ಬುದ್ಧರು ನಿಜವಾದ ಜೀವನದ ಅರ್ಥ ಹುಡುಕಲು ಸುಖಜೀವನವನ್ನು ತ್ಯಜಿಸಿದರು. ಮಾನವನ ದುಃಖದ ಮೂಲವನ್ನು ಅರಿತುಕೊಳ್ಳಲು ಅವರು ಧ್ಯಾನವನ್ನು ಮಾಡಿ ಬೋಧಿವೃಕ್ಷದ ಕೆಳಗಡೆ ಅವರಿಗೆ ಜ್ಞಾನ ಪಡೆದುಕೊಂಡರು.

ಬುದ್ಧರು ನಮಗೆ ಅಹಿಂಸೆ, ಮಧ್ಯಮ ಮಾರ್ಗ, ಸತ್ಯ, ದಯೆ ಎಂಬ ಮಹತ್ವದ ತತ್ವಗಳನ್ನು ಬೋಧಿಸಿದರು. ಅವರು ಹೇಳಿದಂತೆ ದುಃಖಕ್ಕೆ ಕಾರಣವಾದ ಆಸೆಗಳನ್ನು ತ್ಯಜಿಸಿದರೆ ನಿಜವಾದ ಸಂತೋಷವನ್ನು ಪಡೆಯಬಹುದು. ಅವರ ತತ್ವದರ್ಶಗಳು, ಉಪದೇಶಗಳು ಇಂದಿಗೂ ಕೂಡ ನಮ್ಮ ಜೀವನದಲ್ಲಿ ಪ್ರಸ್ತುತವಾಗಿವೆ. ಇಂದಿನ ಸಮಾಜದಲ್ಲಿ ಹಿಂಸೆ, ದ್ವೇಷ, ಅಸಹಿಷ್ಣುತೆ, ಹೆಚ್ಚುತ್ತಿರುವ ಸಂದರ್ಭದಲ್ಲಿ ಬುದ್ಧನ ಸಂದೇಶ ನಮಗೆ ಮಾರ್ಗದರ್ಶನ ನೀಡುತ್ತದೆ. ನಾವು ಪರಸ್ಪರ ಪ್ರೀತಿ, ಸಹಾನುಭೂತಿ ಮತ್ತು ಶಾಂತಿಯೊಳಗೆ ಬದುಕಬೇಕು ಎಂಬುದನ್ನು ನಮಗೆ ತಿಳಿಸಿಕೊಟ್ಟಿದ್ದಾರೆ ಎಂದರು.

ಜಿ.ಪಂ ಉಪಕಾರ್ಯದರ್ಶಿ ಶಿವಕುಮಾರ್ ಮಾತನಾಡಿ ಬುದ್ಧನನ್ನ ಏಷ್ಯಾದ ಬೆಳಕು ಎಂದು ಕರೆಯುತ್ತಿದ್ದರು. 2570 ವರ್ಷಗಳ ಹಿಂದೆ ಜನಿಸಿದ ಮಹಾನ್ ವ್ಯಕ್ತಿಯನ್ನು ಇಂದಿಗೂ ಕೂಡ ನೆನೆಯುತ್ತಿದ್ದೇವೆಂದರೆ ಅವರ ಕೊಡುಗೆ ಅಪಾರವಾದದ್ದು. ಬುದ್ಧ ಎಂದರೆ ಬೆಳಕು, ಜ್ಯೋತಿ, ಜ್ಞಾನ, ಒಳ್ಳೆಯದು ಎಂದರ್ಥ. ಬೌದ್ಧ ಧರ್ಮ ವಿಶ್ವದಾದ್ಯಂತ ಹರಡುತ್ತದೆ. ಬೌದ್ಧ ಧರ್ಮದ ಪ್ರೇರೆಪಿತನಾದ ಸಾಮ್ರಾಟ ಅಶೋಕನು ಕೂಡ ಭಾರತದಲ್ಲಿ ಬೌದ್ಧ ಧರ್ಮ ಪ್ರಚಾರ ಮಾಡಿ ಲೋಕ ಕಲ್ಯಾಣ ಕೆಲಸ ಮಾಡುತ್ತಾನೆ. ಜಗಜ್ಯೋತಿ ಬಸವಣ್ಣನವರ ಆದರ್ಶಗಳಿಗೂ ಸಾಮ್ಯತೆ ಇದೆ. ಡಾ. ಬಿ. ಆರ್. ಅಂಬೇಡ್ಕರ್ ಅವರು ಕೂಡ ಬೌದ್ಧ ಧರ್ಮದ ಪ್ರೇರೆಪಿತರಾಗಿ ಶೋಷಣೆ ರಹಿತ ಸಮಾಜ ನಿರ್ಮಾಣಕ್ಕೆ ಅವರ ಜೀವನವನ್ನು ತೊಡಗಿಸಿಕೊಂಡರು. ಹಾಗಾಗಿ ಈ ಮಹನೀಯರ ಜಯಂತಿಗಳನ್ನು ಆಚರಣೆ ಮಾಡುತ್ತಾ ತತ್ವಾದರ್ಶಗಳನ್ನು ಅನುಸರಿಸಿ ಮುಂದಿನ ಪೀಳಿಗೆಗೆ ತಿಳಿಸೋಣ ಎಂದರು.

ವಕೀಲರಾದ ಆಯುಷ್ಮತಿ ಸಂಘ ಮಿತ್ರ ಅವರು ಉಪನ್ಯಾಸ ನೀಡಿ ಭಗವಾನ್ ಬುದ್ಧನು ರಾಜಕುಮಾರ ಸಿದ್ದಾರ್ಥ ಆಗಿ ಜನಿಸಿ, ಯಾವಾಗಲೂ ಐಷಾರಾಮಿ ಸಂತೋಷಗಳಿಂದ ತನ್ನ ಜೀವನವನ್ನು ಸಾಗಿಸುತ್ತಿದ್ದನು. ಬುದ್ಧನಿಗೆ ಜ್ಞಾನೋದಯವಾಗುವ ವೇಳೆಗೆ ಮನುಷ್ಯ ಯಾಕೆ ಈ ದ್ವೇಷ, ಒಬ್ಬ ಮನುಷ್ಯನ ದುಃಖದ ಹಿಂದಿನ ಕಾರಣಗಳನ್ನು ಹುಡುಕುವ ಪ್ರಯತ್ನ ಮಾಡಿದ. ಬೋಧಿ ವೃಕ್ಷದ ಕೆಳಗೆ ಜ್ಞಾನೋದಯವಾಯಿತು. ಬುದ್ಧನ ಸಂದೇಶಗಳು ಶಾಂತಿ, ಮಾನವೀಯತೆಯ ಬಲಪಡಿಸುವಿಕೆಯನ್ನು ತೋರಿಸುತ್ತದೆ. ಬುದ್ಧನ ತತ್ವಗಳಾದ ಅಹಿಂಸೆ, ಸಹಾನುಭೂತಿ, ಧರ್ಮ ನಿಷ್ಠೆ ಆಡಳಿತ ಇವೆಲ್ಲವನ್ನು ನಾವು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಡಾ. ಬಿ. ಆರ್ ಅಂಬೇಡ್ಕರ್ ಅವರು ಅನೇಕ ಧರ್ಮಗಳನ್ನು ಅಧ್ಯಯನ ಮಾಡಿದ ನಂತರ ಬೌದ್ಧ ಧರ್ಮದಲ್ಲಿ ಜಾತಿ ಇಲ್ಲ, ಅಸ್ಪೃಶ್ಯತೆ ಇಲ್ಲ, ಭೇದಭಾವ ಇಲ್ಲ ಎಲ್ಲರೂ ಸಮಾನರು ಎಂದು 14 ಅಕ್ಟೋಬರ್ 1956 ರಲ್ಲಿ ಅಂಬೇಡ್ಕರ್ ಬೌದ್ಧ ಧರ್ಮ ಸ್ವೀಕಾರ ಮಾಡಿದರು. ಬುದ್ಧ, ಅಂಬೇಡ್ಕರ್ ಅವರ ಕೇವಲ ಪ್ರತಿಮೆಗಳಾಗಿ ಉಳಿಯಬಾರದು ಅವರ ತತ್ವ ಆದರ್ಶಗಳನ್ನು ನಾವು ಪಾಲಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ದೇವನಹಳ್ಳಿ ತಹಶೀಲ್ದಾರ್ ಅನಿಲ್, ಇಒ ಶ್ರೀನಾಥ್ ಗೌಡ, ಕುಂದಾಣ ಗ್ರಾಮದ ಆನಂದ ಬುದ್ಧ ವಿಹಾರದ ನ್ಯಾನಲೋಕ ಬಂತೇಜ, ಅನಿರುದ್ಧ ಬಂತೇಜಿ, ಸಮಾಜದ ಮುಖಂಡರಾದ ಶ್ರೀನಿವಾಸ್, ಲೋಕೇಶ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘಟನೆಗಳ ಮುಖಂಡರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

13 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

21 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

21 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago