ಹೆಲ್ಮೆಟ್ ಧರಿಸದ ಕಾರಣದಿಂದಲೇ ಅಪಘಾತಗಳಲ್ಲಿ ಹೆಚ್ಚಿನ ಸಾವು, ನೋವುಗಳು ಸಂಭವಿಸುತ್ತಲೇ ಇವೆ. ಇತ್ತೀಚಿನ ದಿನಗಳಲ್ಲಿ ಯುವ ಸಮುದಾಯ ಸಂಚಾರ ನಿಯಮ ಪಾಲನೆ ಮಾಡದಿರುವುದರಿಂದ ಅಪಘಾತ ಹಾಗೂ ಸಾವುಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಾಹನಗಳ ತಪಾಸಣೆಯ ನಿರಂತರವಾಗಿ ನಡೆಯಲಿದೆ. ಬೈಕ್ ಸೇರಿದಂತೆ ಇತರೆ ವಾಹನಗಳವರು ಅಗತ್ಯ ದಾಖಲೆ, ಚಾಲನ ಪರವಾನಗಿಯನ್ನು ಕಡ್ಡಾಯವಾಗಿ ಹೊಂದರಬೇಕು ಎಂದು ಡಿವೈಎಸ್ಪಿ ಪಾಂಡುರಂಗ ತಿಳಿಸಿದ್ದರು.
2026 ಜ.1 ರಿಂದ ಹೆಲೈಟ್ ಧರಿಸದೆ ವಾಹನ ಚಲಾಯಿಸುವುದು ಕಂಡುಬಂದಲ್ಲಿ, ಯಾವುದೇ ಮುಲಾಜಿಲ್ಲದೆ ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ (Fine) ವಿಧಿಸಲಾಗುವುದು ಹಾಗೂ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ದಯವಿಟ್ಟು ಪೊಲೀಸರಿಗೆ ಅಥವಾ ದಂಡಕ್ಕೆ ಹೆದರಿ ಹೆಲೈಟ್ ಧರಿಸಬೇಡಿ. ನಿಮ್ಮ ಮನೆಯಲ್ಲಿ ನಿಮಗಾಗಿ ಕಾಯುವ ತಂದೆ-ತಾಯಿ, ಪತ್ನಿ-ಮಕ್ಕಳಿದ್ದಾರೆ ಎಂಬುದನ್ನು ನೆನಪಿನಲ್ಲಿಡಿ. ತಲೆಗೆ ಪೆಟ್ಟು ಬಿದ್ದು ಪ್ರಾಣ ಕಳೆದುಕೊಳ್ಳುವುದನ್ನು ತಪ್ಪಿಸಲು ಉತ್ತಮ ಗುಣಮಟ್ಟದ ಪೂರ್ಣ ಪ್ರಮಾಣದ ಹೆಲೈಟ್ ಧರಿಸಿ ಎಂದು ಹೇಳಿದರು.
ಎಲ್ಲಾ ದ್ವಿಚಕ್ರ ವಾಹನ ಸವಾರರು ಇಂದೇ ಎಚ್ಚೆತ್ತುಕೊಂಡು, ಕಡ್ಡಾಯವಾಗಿ ಹೆಲೈಟ್ ಧರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಿದರು.
ಡಿವೈಎಸ್ಪಿ ಪಾಂಡುರಂಗ ಹೇಳಿಕೆ ಹಿನ್ನೆಲೆ ಹೆಲ್ಮೆಟ್ ಮಾರಾಟಗಾರರು ದೊಡ್ಡಬಳ್ಳಾಪುರಕ್ಕೆ ಲಗ್ಗೆ ಇಟ್ಟಿದ್ದಾರೆ. ಹೆಲ್ಮೆಟ್ ಕಡ್ಡಾಯ ಹಿನ್ನೆಲೆ ಬೈಕ್ ಸವಾರರು ಹೆಲ್ಮೆಟ್ ಖರೀದಿಯಲ್ಲಿ ನಿರತರಾಗಿದ್ದಾರೆ…..
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…