ಜ.10ರಂದು ಜೆಡಿಎಸ್ ಕಾರ್ಯಕರ್ತರ ಸಭೆ- ಈ ಸಭೆ ಬಲ ಪ್ರದರ್ಶನ ಸಭೆಯಲ್ಲ, ಕಾರ್ಯಕರ್ತರ ಸಭೆ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ಜಾತ್ಯಾತೀತ ಜನತಾದಳ ದೊಡ್ಡಬಳ್ಳಾಪುರ ತಾಲೂಕು ವತಿಯಿಂದ ಜೆಡಿಎಸ್ ಕಾರ್ಯಕರ್ತರ ಸಭೆಯನ್ನು ಜ.10(ಶನಿವಾರ)ರಂದು ದೊಡ್ಡಬಳ್ಳಾಪುರ ನಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜೆಡಿಎಸ್ ಪಕ್ಷದ ಸಂಘಟನೆ ಹಾಗೂ ಬಲವರ್ಧನೆಗಾಗಿ ಕಾರ್ಯಕರ್ತರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಾದ ಜೆ.ಕೆ ಕೃಷ್ಣಾರೆಡ್ಡಿ ಭಾಗವಹಿಸಲಿದ್ದಾರೆ ಎಂದರು.

ಸಭೆಯ ಉದ್ದೇಶ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಪೂರ್ವ ಸಿದ್ಧತೆಯ ಬಗ್ಗೆ ಚರ್ಚೆ,  ಹಿತದೃಷ್ಟಿಯಿಂದ ಪಕ್ಷದ ಕಾರ್ಯಕರ್ತರ ಹಾಗೂ ಸ್ಥಳೀಯ ನಾಯಕರ ನಾಡಿಮಿಡಿತವನ್ನು ಅರಿಯುವುದು. ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷದ ಮುಂದಿನ ಗುರಿಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ. ಆದ್ದರಿಂದ ಪಕ್ಷದ ಎಲ್ಲಾ ಹಿರಿಯ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡಿದರು ಎಂದು ಹೇಳಿದರು.

ಎನ್ ಡಿಎ ಆದ ಮೇಲೆ ನಮ್ಮ ತಾಲೂಕಿನಲ್ಲಿ ಪಕ್ಷ ಯಾವ ಸ್ಥಿತಿಯಲ್ಲಿದೆ ಎಂಬ ತಿಳಿಯಲು ಸಭೆಯನ್ನ ಆಯೋಜನೆ ಮಾಡಲಾಗಿದೆ. ಜಾಲಪ್ಪನವರು ಪಕ್ಷದಿಂದ ಹೋದಾಗಿನಿಂದ ತಾಲೂಕಿನಲ್ಲಿ ಜೆಡಿಎಸ್ ಪಕ್ಷ ಅಧಿಕಾರ ಚುಕ್ಕಾಣಿ ಹಿಡಿಯಲು ಆಗುತ್ತಿಲ್ಲ. ಅದಕ್ಕೆ ಕಾರಣಗಳನ್ನು ಹುಡುಕಲು ಸಭೆ ಕರೆಯಲಾಗಿದೆ.

ಈ ಸಭೆ ಬಲ ಪ್ರದರ್ಶನ ಸಭೆಯಲ್ಲ, ಕಾರ್ಯಕರ್ತರ ಸಭೆ ಇದು ಎಂದು ಹೇಳಿದರು..

ಈ ವೇಳೆ ನಗರಸಭೆ ಸದಸ್ಯರಾದ ತಾ.ನ ಪ್ರಭುದೇವ್, ವಡ್ಡರಹಳ್ಳಿ ರವಿ, ಡಾ. ವಿಜಯ್ ಕುಮಾರ್, ಪಿಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ರಾಮಚಂದ್ರಬಾಬು, ಕೆಂಪರಾಜು, ಸತ್ಯನಾರಾಯಣ, ಶಾಂತಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

5 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

5 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

6 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

11 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

17 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago